<p><strong>ಟೆಲ್ ಅವೀಲ್:</strong> ‘ಇಸ್ರೇಲ್ ಮೇಲೆ ಕ್ಷಿಪಣಿ ದಾಳಿ ಮಾಡುವ ಮೂಲಕ ಇರಾನ್ ಅತಿದೊಡ್ಡ ಪ್ರಮಾದ ಎಸಗಿದೆ. ಇದಕ್ಕಾಗಿ ಇರಾನ್ ತಕ್ಕ ಬೆಲೆ ತೆರಬೇಕಾಗುತ್ತದೆ’ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಎಚ್ಚರಿಕೆ ನೀಡಿದ್ದಾರೆ.</p><p>ಹಿಜ್ಬುಲ್ಲಾ ಸಂಘಟನೆ ಮುಖ್ಯಸ್ಥ ಸಯ್ಯದ್ ಹಸನ್ ನಸ್ರಲ್ಲಾ ಹತ್ಯೆ ನಂತರ ಮಧ್ಯಪ್ರಾಚ್ಯದಲ್ಲಿ ಯುದ್ಧದ ಭೀತಿ ತೀವ್ರಗೊಂಡಿದ್ದು, ಮಂಗಳವಾರ ರಾತ್ರಿ ಇಸ್ರೇಲ್ ಮೇಲೆ ಇರಾನ್ 180 ಕ್ಷಿಪಣಿ ದಾಳಿ ನಡೆಸಿತ್ತು.</p><p>ಕ್ಷಿಪಣಿ ದಾಳಿ ಬೆನ್ನಲ್ಲೇ ಭದ್ರತಾ ಇಲಾಖೆಯ ಪ್ರಮುಖರ ಜೊತೆ ಸಭೆ ನಡೆಸಿದ ನೆತನ್ಯಾಹು, ಇರಾನ್ ದಾಳಿಯನ್ನು ಬಲವಾಗಿ ಖಂಡಿಸಿದ್ದಾರೆ.</p><p>‘ವಿಶ್ವದಲ್ಲೇ ಅತ್ಯಂತ ಸುಧಾರಿತ ವಾಯು ರಕ್ಷಣಾ ವ್ಯವಸ್ಥೆಯನ್ನು ಇಸ್ರೇಲ್ ಹೊಂದಿದ್ದು, ಇರಾನ್ ಕ್ಷಿಪಣಿ ದಾಳಿಯನ್ನು ನಮ್ಮ ವಾಯುಪಡೆ ವಿಫಲಗೊಳಿಸಿದೆ. ಅದಕ್ಕಾಗಿ ಧನ್ಯವಾದಗಳು’ ಎಂದಿದ್ದಾರೆ.</p><p>ಇರಾನ್ ದಾಳಿಗೆ ತೀವ್ರ ಪ್ರತಿರೋಧ ಒಡ್ಡಿರುವ ಇಸ್ರೇಲ್, ಪ್ರತಿ ದಾಳಿ ಆರಂಭಿಸಿದೆ. ಇದರಿಂದ ಇಸ್ರೇಲ್ನಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು ಲಕ್ಷಾಂತರ ಜನ ಬಾಂಬ್ ಶೆಲ್ಟರ್ಗಳಲ್ಲಿ ಆಶ್ರಯ ಪಡೆಯುತ್ತಿದ್ದಾರೆ.</p><p>‘ಹುತಾತ್ಮ ನಾಯಕ ಸಯ್ಯದ್ ಹಸನ್ ನಸ್ರಲ್ಲಾ ಅವರ ಹತ್ಯೆಗೆ ಪ್ರತೀಕಾರವಾಗಿ ಆಕ್ರಮಣಕಾರರ ಹೃದಯವನ್ನು ಗುರಿಯಾಸಿಕೊಂಡಿದ್ದೇವೆ’ ಎಂದು ಇರಾನ್ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಟೆಲ್ ಅವೀಲ್:</strong> ‘ಇಸ್ರೇಲ್ ಮೇಲೆ ಕ್ಷಿಪಣಿ ದಾಳಿ ಮಾಡುವ ಮೂಲಕ ಇರಾನ್ ಅತಿದೊಡ್ಡ ಪ್ರಮಾದ ಎಸಗಿದೆ. ಇದಕ್ಕಾಗಿ ಇರಾನ್ ತಕ್ಕ ಬೆಲೆ ತೆರಬೇಕಾಗುತ್ತದೆ’ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಎಚ್ಚರಿಕೆ ನೀಡಿದ್ದಾರೆ.</p><p>ಹಿಜ್ಬುಲ್ಲಾ ಸಂಘಟನೆ ಮುಖ್ಯಸ್ಥ ಸಯ್ಯದ್ ಹಸನ್ ನಸ್ರಲ್ಲಾ ಹತ್ಯೆ ನಂತರ ಮಧ್ಯಪ್ರಾಚ್ಯದಲ್ಲಿ ಯುದ್ಧದ ಭೀತಿ ತೀವ್ರಗೊಂಡಿದ್ದು, ಮಂಗಳವಾರ ರಾತ್ರಿ ಇಸ್ರೇಲ್ ಮೇಲೆ ಇರಾನ್ 180 ಕ್ಷಿಪಣಿ ದಾಳಿ ನಡೆಸಿತ್ತು.</p><p>ಕ್ಷಿಪಣಿ ದಾಳಿ ಬೆನ್ನಲ್ಲೇ ಭದ್ರತಾ ಇಲಾಖೆಯ ಪ್ರಮುಖರ ಜೊತೆ ಸಭೆ ನಡೆಸಿದ ನೆತನ್ಯಾಹು, ಇರಾನ್ ದಾಳಿಯನ್ನು ಬಲವಾಗಿ ಖಂಡಿಸಿದ್ದಾರೆ.</p><p>‘ವಿಶ್ವದಲ್ಲೇ ಅತ್ಯಂತ ಸುಧಾರಿತ ವಾಯು ರಕ್ಷಣಾ ವ್ಯವಸ್ಥೆಯನ್ನು ಇಸ್ರೇಲ್ ಹೊಂದಿದ್ದು, ಇರಾನ್ ಕ್ಷಿಪಣಿ ದಾಳಿಯನ್ನು ನಮ್ಮ ವಾಯುಪಡೆ ವಿಫಲಗೊಳಿಸಿದೆ. ಅದಕ್ಕಾಗಿ ಧನ್ಯವಾದಗಳು’ ಎಂದಿದ್ದಾರೆ.</p><p>ಇರಾನ್ ದಾಳಿಗೆ ತೀವ್ರ ಪ್ರತಿರೋಧ ಒಡ್ಡಿರುವ ಇಸ್ರೇಲ್, ಪ್ರತಿ ದಾಳಿ ಆರಂಭಿಸಿದೆ. ಇದರಿಂದ ಇಸ್ರೇಲ್ನಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು ಲಕ್ಷಾಂತರ ಜನ ಬಾಂಬ್ ಶೆಲ್ಟರ್ಗಳಲ್ಲಿ ಆಶ್ರಯ ಪಡೆಯುತ್ತಿದ್ದಾರೆ.</p><p>‘ಹುತಾತ್ಮ ನಾಯಕ ಸಯ್ಯದ್ ಹಸನ್ ನಸ್ರಲ್ಲಾ ಅವರ ಹತ್ಯೆಗೆ ಪ್ರತೀಕಾರವಾಗಿ ಆಕ್ರಮಣಕಾರರ ಹೃದಯವನ್ನು ಗುರಿಯಾಸಿಕೊಂಡಿದ್ದೇವೆ’ ಎಂದು ಇರಾನ್ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>