<p><strong>ನವದೆಹಲಿ:</strong> ಪಶ್ಚಿಮ ಏಷ್ಯಾದಲ್ಲಿ ದಿನದಿಂದ ದಿನಕ್ಕೆ ಉದ್ವಿಗ್ನತೆ ಹೆಚ್ಚಾಗುತ್ತಿದೆ. ಇದರ ಬೆನ್ನಲ್ಲೇ ಇಸ್ರೇಲ್ ಮೇಲೆ ಇರಾನ್ 83ನೇ ಸುತ್ತಿನ ಕ್ಷಿಪಣಿ ದಾಳಿ ನಡೆಸಿದ್ದು, ಇದಕ್ಕೆ ಬಳಸಿದ ಕ್ಷಿಪಣಿಗಳ ಮೇಲೆ ‘ಭಾರತದ ಜನರಿಗೆ ಧನ್ಯವಾದಗಳು’ ಎಂದು ಬರೆಯಲಾಗಿದೆ. </p><p>ಇಸ್ರೇಲ್ ಮೇಲಿನ ದಾಳಿ ಕುರಿತಂತೆ ಮುಂಬೈಯಲ್ಲಿರುವ ಇರಾನ್ನ ಕಾನ್ಸುಲೇಟ್ ಕಚೇರಿ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್ನಲ್ಲಿ ಮಾಹಿತಿ ನೀಡಿದೆ. ‘ಕ್ಷಿಪಣಿಗಳ ಮೇಲೆ ಭಾರತ, ಪಾಕಿಸ್ತಾನ, ಸ್ಪೇನ್ ಹಾಗೂ ಜರ್ಮನಿ ದೇಶದ ಜನರಿಗೆ ಧನ್ಯವಾದಗಳು’ ಎಂದು ಬರೆದಿರುವ ಫೋಟೊಗಳನ್ನೂ ಹಂಚಿಕೊಂಡಿದೆ.</p><p>‘ಭಾರತ, ಚೀನಾ, ರಷ್ಯಾ, ಇರಾಕ್, ಪಾಕಿಸ್ತಾನ ರಾಷ್ಟ್ರಗಳಿಗೆ ಹೊರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸಿದ್ದೇವೆ. ಈ ಐದು ದೇಶಗಳತ್ತ ತೆರಳುವ ಸರಕು ಸಾಗಣೆ ಹಡಗುಗಳಿಗೆ ನಾವು ಹೊರ್ಮುಜ್ ದಾಟಲು ಅವಕಾಶ ನೀಡಿದ್ದೇವೆ’ ಇರಾನ್ ವಿದೇಶಾಂಗ ಸಚಿವ ಸೈಯದ್ ಅಬ್ಬಾಸ್ ಅರಾಗ್ಚಿ ಈಚೆಗೆ ಹೇಳಿದ್ದರು. </p><p>ಏತನ್ಮಧ್ಯೆ, ಯುದ್ಧಪೀಡಿತ ಇರಾನ್ಗಾಗಿ ಕಾಶ್ಮೀರ ಮತ್ತು ಲಡಾಖ್ನ ಕಾರ್ಗಿಲ್ನಾದ್ಯಂತ ಬೃಹತ್ ದೇಣಿಗೆ ಅಭಿಯಾನಗಳು ನಡೆದಿದ್ದವು.</p><p>ಜನರು ನಗದು ಮಾತ್ರವಲ್ಲದೆ, ಚಿನ್ನ, ಬೆಳ್ಳಿ, ತಾಮ್ರದ ಪಾತ್ರೆಗಳು, ಜಾನುವಾರು, ಕಾರು, ಬೈಕ್ ಸೇರಿದಂತೆ ಇತರೆ ವಾಹನಗಳನ್ನೂ ದಾನ ಮಾಡಿದ್ದಾರೆ. ಇದಕ್ಕಾಗಿ ಇರಾನ್ ರಾಯಭಾರ ಕಚೇರಿಯು ಭಾರತಕ್ಕೆ ಧನ್ಯವಾದ ಸಲ್ಲಿಸಿದೆ ಎಂದು ಹೇಳಲಾಗಿದೆ. </p><p>ದೇಣಿಗೆಯ ಫೋಟೊಗಳನ್ನು ಇರಾನ್ ರಾಯಭಾರ ಕಚೇರಿಯು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದೆ. ‘ಕಾಶ್ಮೀರದ ಜನರ ಮಾನವೀಯತೆಗೆ ನಾವು ಧನ್ಯವಾದಗಳನ್ನು ಅರ್ಪಿಸುತ್ತೇವೆ. ನಿಮ್ಮ ದಯೆ ಮತ್ತು ಮಾನವೀಯತೆಯನ್ನು ನಾವು ಎಂದಿಗೂ ಮರೆಯುವುದಿಲ್ಲ’ ಎಂದು ಬರೆದುಕೊಂಡಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪಶ್ಚಿಮ ಏಷ್ಯಾದಲ್ಲಿ ದಿನದಿಂದ ದಿನಕ್ಕೆ ಉದ್ವಿಗ್ನತೆ ಹೆಚ್ಚಾಗುತ್ತಿದೆ. ಇದರ ಬೆನ್ನಲ್ಲೇ ಇಸ್ರೇಲ್ ಮೇಲೆ ಇರಾನ್ 83ನೇ ಸುತ್ತಿನ ಕ್ಷಿಪಣಿ ದಾಳಿ ನಡೆಸಿದ್ದು, ಇದಕ್ಕೆ ಬಳಸಿದ ಕ್ಷಿಪಣಿಗಳ ಮೇಲೆ ‘ಭಾರತದ ಜನರಿಗೆ ಧನ್ಯವಾದಗಳು’ ಎಂದು ಬರೆಯಲಾಗಿದೆ. </p><p>ಇಸ್ರೇಲ್ ಮೇಲಿನ ದಾಳಿ ಕುರಿತಂತೆ ಮುಂಬೈಯಲ್ಲಿರುವ ಇರಾನ್ನ ಕಾನ್ಸುಲೇಟ್ ಕಚೇರಿ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್ನಲ್ಲಿ ಮಾಹಿತಿ ನೀಡಿದೆ. ‘ಕ್ಷಿಪಣಿಗಳ ಮೇಲೆ ಭಾರತ, ಪಾಕಿಸ್ತಾನ, ಸ್ಪೇನ್ ಹಾಗೂ ಜರ್ಮನಿ ದೇಶದ ಜನರಿಗೆ ಧನ್ಯವಾದಗಳು’ ಎಂದು ಬರೆದಿರುವ ಫೋಟೊಗಳನ್ನೂ ಹಂಚಿಕೊಂಡಿದೆ.</p><p>‘ಭಾರತ, ಚೀನಾ, ರಷ್ಯಾ, ಇರಾಕ್, ಪಾಕಿಸ್ತಾನ ರಾಷ್ಟ್ರಗಳಿಗೆ ಹೊರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸಿದ್ದೇವೆ. ಈ ಐದು ದೇಶಗಳತ್ತ ತೆರಳುವ ಸರಕು ಸಾಗಣೆ ಹಡಗುಗಳಿಗೆ ನಾವು ಹೊರ್ಮುಜ್ ದಾಟಲು ಅವಕಾಶ ನೀಡಿದ್ದೇವೆ’ ಇರಾನ್ ವಿದೇಶಾಂಗ ಸಚಿವ ಸೈಯದ್ ಅಬ್ಬಾಸ್ ಅರಾಗ್ಚಿ ಈಚೆಗೆ ಹೇಳಿದ್ದರು. </p><p>ಏತನ್ಮಧ್ಯೆ, ಯುದ್ಧಪೀಡಿತ ಇರಾನ್ಗಾಗಿ ಕಾಶ್ಮೀರ ಮತ್ತು ಲಡಾಖ್ನ ಕಾರ್ಗಿಲ್ನಾದ್ಯಂತ ಬೃಹತ್ ದೇಣಿಗೆ ಅಭಿಯಾನಗಳು ನಡೆದಿದ್ದವು.</p><p>ಜನರು ನಗದು ಮಾತ್ರವಲ್ಲದೆ, ಚಿನ್ನ, ಬೆಳ್ಳಿ, ತಾಮ್ರದ ಪಾತ್ರೆಗಳು, ಜಾನುವಾರು, ಕಾರು, ಬೈಕ್ ಸೇರಿದಂತೆ ಇತರೆ ವಾಹನಗಳನ್ನೂ ದಾನ ಮಾಡಿದ್ದಾರೆ. ಇದಕ್ಕಾಗಿ ಇರಾನ್ ರಾಯಭಾರ ಕಚೇರಿಯು ಭಾರತಕ್ಕೆ ಧನ್ಯವಾದ ಸಲ್ಲಿಸಿದೆ ಎಂದು ಹೇಳಲಾಗಿದೆ. </p><p>ದೇಣಿಗೆಯ ಫೋಟೊಗಳನ್ನು ಇರಾನ್ ರಾಯಭಾರ ಕಚೇರಿಯು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದೆ. ‘ಕಾಶ್ಮೀರದ ಜನರ ಮಾನವೀಯತೆಗೆ ನಾವು ಧನ್ಯವಾದಗಳನ್ನು ಅರ್ಪಿಸುತ್ತೇವೆ. ನಿಮ್ಮ ದಯೆ ಮತ್ತು ಮಾನವೀಯತೆಯನ್ನು ನಾವು ಎಂದಿಗೂ ಮರೆಯುವುದಿಲ್ಲ’ ಎಂದು ಬರೆದುಕೊಂಡಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>