<p><strong>ನವದೆಹಲಿ:</strong> ಇರಾನ್ನಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು ಭಾರತೀಯ ನಾಗರಿಕರು ದೇಶ ಬಿಟ್ಟು ತೆರಳುವಂತೆ ಇರಾನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಇಂದು (ಬುಧವಾರ) ಸಲಹೆ ನೀಡಿದೆ.</p><p>ಈ ಕುರಿತು ಇರಾನ್ನಲ್ಲಿ ಭಾರತೀಯ ರಾಯಭಾರ ಕಚೇರಿ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದು, ಇರಾನ್ನಲ್ಲಿರುವ ಭಾರತೀಯ ವಿಧ್ಯಾರ್ಥಿಗಳು, ಯಾತ್ರಾರ್ಥಿಗಳು, ಉದ್ಯಮಿಗಳು ಹಾಗೂ ಪ್ರವಾಸಿಗರು ಸೇರಿದಂತೆ ಭಾರತೀಯರು ಲಭ್ಯವಿರುವ ಮಾರ್ಗಗಳ ಮೂಲಕ ಇರಾನ್ನಿಂದ ತೆರಳುವಂತೆ ನಿರ್ದೇಶನ ನೀಡಿದೆ. </p>.ಇರಾನ್ ಜೊತೆ ವ್ಯವಹಾರ ನಡೆಸುವ ದೇಶಗಳ ಮೇಲೆ ಶೇ 25ರಷ್ಟು ತೆರಿಗೆ: ಟ್ರಂಪ್ ಘೋಷಣೆ.ಬೆದರಿಸಿದ ನಂತರ ಮಾತುಕತೆಗೆ ಮುಂದಾದ ಇರಾನ್: ಡೊನಾಲ್ಡ್ ಟ್ರಂಪ್.<p>ಭಾರತೀಯ ನಾಗರಿಕರು ಮುಂಜಾಗ್ರತೆ ವಹಿಸುವಂತೆ ಸೂಚಿಸಲಾಗಿದೆ. ಪ್ರತಿಭಟನೆ ನಡೆಯುವ ಸ್ಥಳಗಳಿಗೆ ಹೋಗಬಾರದು. ಸದಾ ಭಾರತೀಯ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿರಬೇಕು. ಸ್ಥಳೀಯ ಮಾಧ್ಯಮಗಳ ಮೇಲೆ ನಿಗಾ ವಹಿಸಬೇಕು ಎಂದಿದೆ. </p><p>ಪಾಸ್ಪೋರ್ಟ್, ಗುರುತಿನ ಚೀಟಿ, ಪ್ರಯಾಣ ಹಾಗೂ ವಲಸೆ ದಾಖಲಾತಿಗಳನ್ನು ಸುಲಭವಾಗಿ ಲಭ್ಯವಿರುವಂತೆ ಎಲ್ಲ ನಾಗರಿಕರು ನೋಡಿಕೊಳ್ಳಬೇಕು. ಯಾವುದೇ ಸಹಾಯಕ್ಕಾಗಿ ರಾಯಭಾರ ಕಚೇರಿಯನ್ನು ಸಂಪರ್ಕಿಸುವಂತೆ ಸೂಚಿಸಲಾಗಿದೆ. </p><p><strong>ತುರ್ತು ಸಹಾಯವಾಣಿ ಸಂಖ್ಯೆ:</strong></p><p>+989128109115; +989128109109;</p><p>+989128109102; +989932179359.</p><p><strong>ಇಮೇಲ್:</strong> cons.tehranomsa.gov.in </p><p>ಇರಾನ್ನಲ್ಲಿರುವ ಭಾರತೀಯರಿಗೆ ಈ ಲಿಂಕ್ನಲ್ಲಿ (<a href="https://www.meaers.com/request/home">https://www.meaers.com/request/home</a>) ತಮ್ಮ ಹೆಸರನ್ನು ನೋಂದಾಯಿಸಲು ಸೂಚಿಸಲಾಗಿದೆ. ಇರಾನ್ನಲ್ಲಿ ಇಂಟರ್ನೆಟ್ ಕಡಿದುಕೊಂಡಿರುವ ಹಿನ್ನೆಲೆಯಲ್ಲಿ ಹೆಸರು ನೋಂದಾಯಿಸಲು ಸಾಧ್ಯವಾಗದಿದ್ದರೆ ಅವರ ಪರವಾಗಿ ಭಾರತದಲ್ಲಿರುವ ಅವರ ಕುಟುಂಬದ ಸದಸ್ಯರು ಹೆಸರು ನೋಂದಾಯಿಸುವಂತೆಯೂ ವಿನಂತಿಸಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಇರಾನ್ನಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು ಭಾರತೀಯ ನಾಗರಿಕರು ದೇಶ ಬಿಟ್ಟು ತೆರಳುವಂತೆ ಇರಾನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಇಂದು (ಬುಧವಾರ) ಸಲಹೆ ನೀಡಿದೆ.</p><p>ಈ ಕುರಿತು ಇರಾನ್ನಲ್ಲಿ ಭಾರತೀಯ ರಾಯಭಾರ ಕಚೇರಿ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದು, ಇರಾನ್ನಲ್ಲಿರುವ ಭಾರತೀಯ ವಿಧ್ಯಾರ್ಥಿಗಳು, ಯಾತ್ರಾರ್ಥಿಗಳು, ಉದ್ಯಮಿಗಳು ಹಾಗೂ ಪ್ರವಾಸಿಗರು ಸೇರಿದಂತೆ ಭಾರತೀಯರು ಲಭ್ಯವಿರುವ ಮಾರ್ಗಗಳ ಮೂಲಕ ಇರಾನ್ನಿಂದ ತೆರಳುವಂತೆ ನಿರ್ದೇಶನ ನೀಡಿದೆ. </p>.ಇರಾನ್ ಜೊತೆ ವ್ಯವಹಾರ ನಡೆಸುವ ದೇಶಗಳ ಮೇಲೆ ಶೇ 25ರಷ್ಟು ತೆರಿಗೆ: ಟ್ರಂಪ್ ಘೋಷಣೆ.ಬೆದರಿಸಿದ ನಂತರ ಮಾತುಕತೆಗೆ ಮುಂದಾದ ಇರಾನ್: ಡೊನಾಲ್ಡ್ ಟ್ರಂಪ್.<p>ಭಾರತೀಯ ನಾಗರಿಕರು ಮುಂಜಾಗ್ರತೆ ವಹಿಸುವಂತೆ ಸೂಚಿಸಲಾಗಿದೆ. ಪ್ರತಿಭಟನೆ ನಡೆಯುವ ಸ್ಥಳಗಳಿಗೆ ಹೋಗಬಾರದು. ಸದಾ ಭಾರತೀಯ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿರಬೇಕು. ಸ್ಥಳೀಯ ಮಾಧ್ಯಮಗಳ ಮೇಲೆ ನಿಗಾ ವಹಿಸಬೇಕು ಎಂದಿದೆ. </p><p>ಪಾಸ್ಪೋರ್ಟ್, ಗುರುತಿನ ಚೀಟಿ, ಪ್ರಯಾಣ ಹಾಗೂ ವಲಸೆ ದಾಖಲಾತಿಗಳನ್ನು ಸುಲಭವಾಗಿ ಲಭ್ಯವಿರುವಂತೆ ಎಲ್ಲ ನಾಗರಿಕರು ನೋಡಿಕೊಳ್ಳಬೇಕು. ಯಾವುದೇ ಸಹಾಯಕ್ಕಾಗಿ ರಾಯಭಾರ ಕಚೇರಿಯನ್ನು ಸಂಪರ್ಕಿಸುವಂತೆ ಸೂಚಿಸಲಾಗಿದೆ. </p><p><strong>ತುರ್ತು ಸಹಾಯವಾಣಿ ಸಂಖ್ಯೆ:</strong></p><p>+989128109115; +989128109109;</p><p>+989128109102; +989932179359.</p><p><strong>ಇಮೇಲ್:</strong> cons.tehranomsa.gov.in </p><p>ಇರಾನ್ನಲ್ಲಿರುವ ಭಾರತೀಯರಿಗೆ ಈ ಲಿಂಕ್ನಲ್ಲಿ (<a href="https://www.meaers.com/request/home">https://www.meaers.com/request/home</a>) ತಮ್ಮ ಹೆಸರನ್ನು ನೋಂದಾಯಿಸಲು ಸೂಚಿಸಲಾಗಿದೆ. ಇರಾನ್ನಲ್ಲಿ ಇಂಟರ್ನೆಟ್ ಕಡಿದುಕೊಂಡಿರುವ ಹಿನ್ನೆಲೆಯಲ್ಲಿ ಹೆಸರು ನೋಂದಾಯಿಸಲು ಸಾಧ್ಯವಾಗದಿದ್ದರೆ ಅವರ ಪರವಾಗಿ ಭಾರತದಲ್ಲಿರುವ ಅವರ ಕುಟುಂಬದ ಸದಸ್ಯರು ಹೆಸರು ನೋಂದಾಯಿಸುವಂತೆಯೂ ವಿನಂತಿಸಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>