<p><strong>ನವದೆಹಲಿ</strong>: ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಹತರಾದ ಇರಾನ್ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರ ಉತ್ತರಾಧಿಕಾರಿ ಸ್ಥಾನಕ್ಕೆ ಇನ್ನೂ ಯಾರನ್ನೂ ಆಯ್ಕೆ ಮಾಡಿಲ್ಲ ಎಂದು ಇರಾನ್ನ ಅಧಿಕಾರಿಯೊಬ್ಬರು ಗುರುವಾರ ಮಾಹಿತಿ ನೀಡಿದ್ದಾರೆ. </p>.<p>’ಉತ್ತರಾಧಿಕಾರಿ ಸ್ಥಾನಕ್ಕೆ ಇನ್ನೂ ಯಾರನ್ನೂ ಆಯ್ಕೆ ಮಾಡಿಲ್ಲ. ಇದಕ್ಕೆ ಸಂಬಂಧಿಸಿದ ಪ್ರಕ್ರಿಯೆಗಳು ನಡೆಯುತ್ತಿವೆ‘ ಎಂದು ಭಾರತದಲ್ಲಿನ ಇರಾನ್ ಸರ್ವೋಚ್ಚ ನಾಯಕರ ಪ್ರತಿನಿಧಿ ಆಗಿರುವ ಆಯತೊಲ್ಲಾ ಡಾ.ಅಬ್ದುಲ್ ಮಜೀದ್ ಹಕೀಮೆಲಾಹಿ ಸ್ಪಷ್ಟಪಡಿಸಿದ್ದಾರೆ.</p>.<p>’ಖಮೇನಿ ಅವರ ಸ್ಥಾನಕ್ಕೆ ಅವರ ಪುತ್ರ ಮೊಜ್ತಾಬಾ ಖಮೇನಿ ಅವರನ್ನೇ ಆಯ್ಕೆ ಮಾಡಲಾಗಿದೆ ಎನ್ನುವ ವರದಿಗಳು ಸುಳ್ಳು. ಇರಾನ್ನಲ್ಲಿ ಚುನಾವಣೆಯ ಮೂಲಕ 88 ಸದಸ್ಯರ ತಜ್ಞರ ಮಂಡಳಿಯನ್ನು ರಚಿಸಲಾಗಿದೆ. ಈ ಮಂಡಳಿಯು ದೇಶದ ಸರ್ವೋಚ್ಚ ನಾಯಕನನ್ನು ಆಯ್ಕೆ ಮಾಡುತ್ತದೆ. ಮಂಡಳಿಯು ಅರ್ಹ ವ್ಯಕ್ತಿಯನ್ನು ಆಯ್ಕೆ ಮಾಡಲು ಈಗಷ್ಟೇ ಮಾತುಕತೆ ಆರಂಭಿಸಿದೆ’ ಎಂದಿದ್ದಾರೆ.</p>.<p>‘ಮಂಡಳಿಯ ಸದಸ್ಯರು ಸಾಕಷ್ಟು ಚರ್ಚೆಗಳನ್ನು ನಡೆಸಿದ ಬಳಿಕ ಉತ್ತರಾಧಿಕಾರಿಯನ್ನು ಆಯ್ಕೆ ಮಾಡುತ್ತಾರೆ. ಆದರೆ, ಸದ್ಯಕ್ಕೆ ಪರಿಸ್ಥಿತಿ ಸರಿಯಾಗಿಲ್ಲ. ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ದಾಳಿ ನಡೆಸುತ್ತಿವೆ. ಹೀಗಾಗಿ, ಮಂಡಳಿಗೆ ಯಾವ ಸಮಯ ಔಚಿತ್ಯವೋ ಆ ಸಂದರ್ಭದಲ್ಲಿ ಸಭೆ ಸೇರಿ, ಅರ್ಹ ವ್ಯಕ್ತಿಯನ್ನು ಆಯ್ಕೆ ಮಾಡುತ್ತಾರೆ’ ಎಂದೂ ಅವರು ಹೇಳಿದ್ದಾರೆ.</p>.<p>‘ಇರಾನ್ ತನ್ನನ್ನು ತಾನು ರಕ್ಷಿಸಿಕೊಳ್ಳಲು ಸದಾ ಸಿದ್ಧವಾಗಿದೆ’ ಎಂದೂ ಅವರು ಈ ಸಂದರ್ಭದಲ್ಲಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಹತರಾದ ಇರಾನ್ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರ ಉತ್ತರಾಧಿಕಾರಿ ಸ್ಥಾನಕ್ಕೆ ಇನ್ನೂ ಯಾರನ್ನೂ ಆಯ್ಕೆ ಮಾಡಿಲ್ಲ ಎಂದು ಇರಾನ್ನ ಅಧಿಕಾರಿಯೊಬ್ಬರು ಗುರುವಾರ ಮಾಹಿತಿ ನೀಡಿದ್ದಾರೆ. </p>.<p>’ಉತ್ತರಾಧಿಕಾರಿ ಸ್ಥಾನಕ್ಕೆ ಇನ್ನೂ ಯಾರನ್ನೂ ಆಯ್ಕೆ ಮಾಡಿಲ್ಲ. ಇದಕ್ಕೆ ಸಂಬಂಧಿಸಿದ ಪ್ರಕ್ರಿಯೆಗಳು ನಡೆಯುತ್ತಿವೆ‘ ಎಂದು ಭಾರತದಲ್ಲಿನ ಇರಾನ್ ಸರ್ವೋಚ್ಚ ನಾಯಕರ ಪ್ರತಿನಿಧಿ ಆಗಿರುವ ಆಯತೊಲ್ಲಾ ಡಾ.ಅಬ್ದುಲ್ ಮಜೀದ್ ಹಕೀಮೆಲಾಹಿ ಸ್ಪಷ್ಟಪಡಿಸಿದ್ದಾರೆ.</p>.<p>’ಖಮೇನಿ ಅವರ ಸ್ಥಾನಕ್ಕೆ ಅವರ ಪುತ್ರ ಮೊಜ್ತಾಬಾ ಖಮೇನಿ ಅವರನ್ನೇ ಆಯ್ಕೆ ಮಾಡಲಾಗಿದೆ ಎನ್ನುವ ವರದಿಗಳು ಸುಳ್ಳು. ಇರಾನ್ನಲ್ಲಿ ಚುನಾವಣೆಯ ಮೂಲಕ 88 ಸದಸ್ಯರ ತಜ್ಞರ ಮಂಡಳಿಯನ್ನು ರಚಿಸಲಾಗಿದೆ. ಈ ಮಂಡಳಿಯು ದೇಶದ ಸರ್ವೋಚ್ಚ ನಾಯಕನನ್ನು ಆಯ್ಕೆ ಮಾಡುತ್ತದೆ. ಮಂಡಳಿಯು ಅರ್ಹ ವ್ಯಕ್ತಿಯನ್ನು ಆಯ್ಕೆ ಮಾಡಲು ಈಗಷ್ಟೇ ಮಾತುಕತೆ ಆರಂಭಿಸಿದೆ’ ಎಂದಿದ್ದಾರೆ.</p>.<p>‘ಮಂಡಳಿಯ ಸದಸ್ಯರು ಸಾಕಷ್ಟು ಚರ್ಚೆಗಳನ್ನು ನಡೆಸಿದ ಬಳಿಕ ಉತ್ತರಾಧಿಕಾರಿಯನ್ನು ಆಯ್ಕೆ ಮಾಡುತ್ತಾರೆ. ಆದರೆ, ಸದ್ಯಕ್ಕೆ ಪರಿಸ್ಥಿತಿ ಸರಿಯಾಗಿಲ್ಲ. ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ದಾಳಿ ನಡೆಸುತ್ತಿವೆ. ಹೀಗಾಗಿ, ಮಂಡಳಿಗೆ ಯಾವ ಸಮಯ ಔಚಿತ್ಯವೋ ಆ ಸಂದರ್ಭದಲ್ಲಿ ಸಭೆ ಸೇರಿ, ಅರ್ಹ ವ್ಯಕ್ತಿಯನ್ನು ಆಯ್ಕೆ ಮಾಡುತ್ತಾರೆ’ ಎಂದೂ ಅವರು ಹೇಳಿದ್ದಾರೆ.</p>.<p>‘ಇರಾನ್ ತನ್ನನ್ನು ತಾನು ರಕ್ಷಿಸಿಕೊಳ್ಳಲು ಸದಾ ಸಿದ್ಧವಾಗಿದೆ’ ಎಂದೂ ಅವರು ಈ ಸಂದರ್ಭದಲ್ಲಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>