<p><strong>ನ್ಯೂಯಾರ್ಕ್: </strong>ಅಮೆರಿಕ ಒಡೆತನದ ತೈಲ ಟ್ಯಾಂಕರ್ ಹಡಗಿನ ಮೇಲೆ ಇರಾಕ್ನ ಬಸ್ರಾ ಸಮೀಪ ಇರಾನ್ ದಾಳಿ ನಡೆಸಿದ್ದು, ಭಾರತೀಯ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ. ಈ ಸುದ್ದಿಯನ್ನು ಇರಾಕ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ದೃಢಪಡಿಸಿದೆ. ಅಲ್ಲದೆ ಹಡಗಿನಲ್ಲಿದ್ದ ಇತರ 15 ಭಾರತೀಯ ಸಿಬ್ಬಂದಿ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ಅದು ತಿಳಿಸಿದೆ.</p><p>ಹಡಗಿನ 27 ಸಿಬ್ಬಂದಿಯನ್ನು ರಕ್ಷಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಪರ್ಷಿಯನ್ ಕೊಲ್ಲಿಯಾದ್ಯಂತ ಕೆಲ ದಿನಗಳಿಂದ ಇರಾನ್ ಸೇನೆಯು ವಾಣಿಜ್ಯ ಹಡಗುಗಳನ್ನು ಗುರಿಯಾಗಿಸಿ ದಾಳಿ ನಡೆಸುತ್ತಿರುವುದರಿಂದ ನೌಕಾ ಸಿಬ್ಬಂದಿಯ ಸಾವು ನೋವು ಹೆಚ್ಚಾಗುತ್ತಿದೆ. </p><p>ಮಾರ್ಷಲ್ ದ್ವೀಪಗಳ ಧ್ವಜದ ಅಡಿಯಲ್ಲಿ ಪ್ರಯಾಣಿಸುತ್ತಿದ್ದ ಅಮೆರಿಕದ ಕಚ್ಚಾ ತೈಲ ಟ್ಯಾಂಕರ್ ‘ಸೇಫ್ಸೀ ವಿಷ್ಣು’ ಹಡಗಿನ ಮೇಲೆ ಇರಾಕ್ನ ಬಸ್ರಾ ಬಳಿ ದಾಳಿ ನಡೆದಿದೆ. ಈ ಘಟನೆಯಲ್ಲಿ ಭಾರತೀಯ ಸಿಬ್ಬಂದಿಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ’ ಎಂದು ಇರಾಕ್ನಲ್ಲಿನ ಭಾರತೀಯ ರಾಯಭಾರ ಕಚೇರಿ ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದೆ. </p><p>ಭಾರತಕ್ಕೆ ಸರಕು ಸಾಮಗ್ರಿಗಳನ್ನು ಹೊತ್ತು ತರುತ್ತಿದ್ದ ಥಾಯ್ಲೆಂಡ್ನ ‘ಮಯೂರಿ ನಾರಿ’ ಹೆಸರಿನ ಹಡಗಿನ ಮೇಲೆ ಇರಾನ್ ಬುಧವಾರ ನಡೆಸಿದ್ದ ದಾಳಿಯಲ್ಲಿ ಇಬ್ಬರು ಭಾರತೀಯ ನಾವಿಕರ ಮೃತಪಟ್ಟಿದ್ದರು. ಇದೀಗ ಇನ್ನೊಂದು ದಾಳಿಯಲ್ಲಿ ಮತ್ತೊಬ್ಬರು ಮೃತಪಟ್ಟಿದ್ದಾರೆ. </p><p>ವಿಶ್ವದಾದ್ಯಂತ ಹಡಗುಗಳಲ್ಲಿ ಶೇ 15ಕ್ಕಿಂತ ಹೆಚ್ಚು ಭಾರತೀಯ ನಾವಿಕರು ಕಾರ್ಯನಿರ್ವಹಿಸುತ್ತಿದ್ದಾರೆ. ಹೀಗಾಗಿ ಇರಾನ್ ಯಾವುದೇ ಹಡಗನ್ನು ಗುರಿಯಾಗಿಸಿ ದಾಳಿ ನಡೆಸಿದರೂ, ಅದು ಭಾರತೀಯ ಪ್ರಜೆಗಳನ್ನು ಹಾನಿಗೊಳಿಸುತ್ತದೆ ಎಂದು ಮೂಲಗಳು ಕಳವಳ ವ್ಯಕ್ತಪಡಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನ್ಯೂಯಾರ್ಕ್: </strong>ಅಮೆರಿಕ ಒಡೆತನದ ತೈಲ ಟ್ಯಾಂಕರ್ ಹಡಗಿನ ಮೇಲೆ ಇರಾಕ್ನ ಬಸ್ರಾ ಸಮೀಪ ಇರಾನ್ ದಾಳಿ ನಡೆಸಿದ್ದು, ಭಾರತೀಯ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ. ಈ ಸುದ್ದಿಯನ್ನು ಇರಾಕ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ದೃಢಪಡಿಸಿದೆ. ಅಲ್ಲದೆ ಹಡಗಿನಲ್ಲಿದ್ದ ಇತರ 15 ಭಾರತೀಯ ಸಿಬ್ಬಂದಿ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ಅದು ತಿಳಿಸಿದೆ.</p><p>ಹಡಗಿನ 27 ಸಿಬ್ಬಂದಿಯನ್ನು ರಕ್ಷಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಪರ್ಷಿಯನ್ ಕೊಲ್ಲಿಯಾದ್ಯಂತ ಕೆಲ ದಿನಗಳಿಂದ ಇರಾನ್ ಸೇನೆಯು ವಾಣಿಜ್ಯ ಹಡಗುಗಳನ್ನು ಗುರಿಯಾಗಿಸಿ ದಾಳಿ ನಡೆಸುತ್ತಿರುವುದರಿಂದ ನೌಕಾ ಸಿಬ್ಬಂದಿಯ ಸಾವು ನೋವು ಹೆಚ್ಚಾಗುತ್ತಿದೆ. </p><p>ಮಾರ್ಷಲ್ ದ್ವೀಪಗಳ ಧ್ವಜದ ಅಡಿಯಲ್ಲಿ ಪ್ರಯಾಣಿಸುತ್ತಿದ್ದ ಅಮೆರಿಕದ ಕಚ್ಚಾ ತೈಲ ಟ್ಯಾಂಕರ್ ‘ಸೇಫ್ಸೀ ವಿಷ್ಣು’ ಹಡಗಿನ ಮೇಲೆ ಇರಾಕ್ನ ಬಸ್ರಾ ಬಳಿ ದಾಳಿ ನಡೆದಿದೆ. ಈ ಘಟನೆಯಲ್ಲಿ ಭಾರತೀಯ ಸಿಬ್ಬಂದಿಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ’ ಎಂದು ಇರಾಕ್ನಲ್ಲಿನ ಭಾರತೀಯ ರಾಯಭಾರ ಕಚೇರಿ ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದೆ. </p><p>ಭಾರತಕ್ಕೆ ಸರಕು ಸಾಮಗ್ರಿಗಳನ್ನು ಹೊತ್ತು ತರುತ್ತಿದ್ದ ಥಾಯ್ಲೆಂಡ್ನ ‘ಮಯೂರಿ ನಾರಿ’ ಹೆಸರಿನ ಹಡಗಿನ ಮೇಲೆ ಇರಾನ್ ಬುಧವಾರ ನಡೆಸಿದ್ದ ದಾಳಿಯಲ್ಲಿ ಇಬ್ಬರು ಭಾರತೀಯ ನಾವಿಕರ ಮೃತಪಟ್ಟಿದ್ದರು. ಇದೀಗ ಇನ್ನೊಂದು ದಾಳಿಯಲ್ಲಿ ಮತ್ತೊಬ್ಬರು ಮೃತಪಟ್ಟಿದ್ದಾರೆ. </p><p>ವಿಶ್ವದಾದ್ಯಂತ ಹಡಗುಗಳಲ್ಲಿ ಶೇ 15ಕ್ಕಿಂತ ಹೆಚ್ಚು ಭಾರತೀಯ ನಾವಿಕರು ಕಾರ್ಯನಿರ್ವಹಿಸುತ್ತಿದ್ದಾರೆ. ಹೀಗಾಗಿ ಇರಾನ್ ಯಾವುದೇ ಹಡಗನ್ನು ಗುರಿಯಾಗಿಸಿ ದಾಳಿ ನಡೆಸಿದರೂ, ಅದು ಭಾರತೀಯ ಪ್ರಜೆಗಳನ್ನು ಹಾನಿಗೊಳಿಸುತ್ತದೆ ಎಂದು ಮೂಲಗಳು ಕಳವಳ ವ್ಯಕ್ತಪಡಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>