<p><strong>ಜೆರುಸಲೇಮ್: </strong>ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೊನಾ ವೈರಸ್ನ ರೂಪಾಂತರ ತಳಿಯ (ಬಿ.1.1.529) ಪ್ರಕರಣವೊಂದು ಇಸ್ರೇಲ್ನಲ್ಲಿ ವರದಿಯಾಗಿದೆ ಎಂದು ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ.</p>.<p>‘ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಈ ತಳಿ ಹಲವು ಬಾರಿ ಮ್ಯುಟೇಶನ್ಗೆ ಒಳಗಾಗಿದೆ. ಇದು ಡೆಲ್ಟಾ ತಳಿಗಿಂತ ಅಧಿಕ ವೇಗದಲ್ಲಿ ಪ್ರಸರಣಗೊಳ್ಳುತ್ತದೆ. ಆಫ್ರಿಕಾದ ಆಗ್ನೇಯ ಭಾಗದಲ್ಲಿರುವ ಮಲಾವಿಯಿಂದ ಮರಳಿದ ವ್ಯಕ್ತಿಯಲ್ಲಿ ಈ ರೂಪಾಂತರ ತಳಿಯ ಸೋಂಕು ಕಂಡುಬಂದಿದೆ’ ಎಂದು ಸಚಿವಾಲಯ ತಿಳಿಸಿದೆ.</p>.<p>ಬಿ.1.1.529 ತಳಿ ಸೋಂಕಿನ ಪ್ರಕರಣ ಪತ್ತೆಯಾದ ಬೆನ್ನಲ್ಲೇ ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್ ಅವರು ಆರೋಗ್ಯ ಕ್ಷೇತ್ರದ ತಜ್ಞರೊಂದಿಗೆ ತುರ್ತು ಸಭೆ ನಡೆಸಿ, ಚರ್ಚಿಸಿದರು.</p>.<p>‘ಈಗ ನಾವು ತುರ್ತು ಪರಿಸ್ಥಿತಿ ಜಾರಿಗೊಳಿಸಬೇಕಾದ ಹಂತದಲ್ಲಿದ್ದೇವೆ. ಈ ಹೊಸ ತಳಿಯ ಸೋಂಕು ಪ್ರಸರಣ ತಡೆಯುವ ಸಲುವಾಗಿ ತ್ವರಿತವಾಗಿ, ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ ಎಂದು ಬೆನೆಟ್ ಹೇಳಿದರು’ ಎಂದು ಅವರ ಕಚೇರಿ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೆರುಸಲೇಮ್: </strong>ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೊನಾ ವೈರಸ್ನ ರೂಪಾಂತರ ತಳಿಯ (ಬಿ.1.1.529) ಪ್ರಕರಣವೊಂದು ಇಸ್ರೇಲ್ನಲ್ಲಿ ವರದಿಯಾಗಿದೆ ಎಂದು ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ.</p>.<p>‘ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಈ ತಳಿ ಹಲವು ಬಾರಿ ಮ್ಯುಟೇಶನ್ಗೆ ಒಳಗಾಗಿದೆ. ಇದು ಡೆಲ್ಟಾ ತಳಿಗಿಂತ ಅಧಿಕ ವೇಗದಲ್ಲಿ ಪ್ರಸರಣಗೊಳ್ಳುತ್ತದೆ. ಆಫ್ರಿಕಾದ ಆಗ್ನೇಯ ಭಾಗದಲ್ಲಿರುವ ಮಲಾವಿಯಿಂದ ಮರಳಿದ ವ್ಯಕ್ತಿಯಲ್ಲಿ ಈ ರೂಪಾಂತರ ತಳಿಯ ಸೋಂಕು ಕಂಡುಬಂದಿದೆ’ ಎಂದು ಸಚಿವಾಲಯ ತಿಳಿಸಿದೆ.</p>.<p>ಬಿ.1.1.529 ತಳಿ ಸೋಂಕಿನ ಪ್ರಕರಣ ಪತ್ತೆಯಾದ ಬೆನ್ನಲ್ಲೇ ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್ ಅವರು ಆರೋಗ್ಯ ಕ್ಷೇತ್ರದ ತಜ್ಞರೊಂದಿಗೆ ತುರ್ತು ಸಭೆ ನಡೆಸಿ, ಚರ್ಚಿಸಿದರು.</p>.<p>‘ಈಗ ನಾವು ತುರ್ತು ಪರಿಸ್ಥಿತಿ ಜಾರಿಗೊಳಿಸಬೇಕಾದ ಹಂತದಲ್ಲಿದ್ದೇವೆ. ಈ ಹೊಸ ತಳಿಯ ಸೋಂಕು ಪ್ರಸರಣ ತಡೆಯುವ ಸಲುವಾಗಿ ತ್ವರಿತವಾಗಿ, ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ ಎಂದು ಬೆನೆಟ್ ಹೇಳಿದರು’ ಎಂದು ಅವರ ಕಚೇರಿ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>