<p><strong>ವಾಷಿಂಗ್ಟನ್:</strong> ಗಾಜಾ ಕದನ ವಿರಾಮಕ್ಕೆ ಯಾವುದೇ ಅಪಾಯ ಇಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರತಿಕ್ರಿಯಿಸಿದ್ದಾರೆ. </p><p>ಗಾಜಾ ಮೇಲೆ ಕೂಡಲೇ ಪ್ರಬಲ ದಾಳಿ ನಡೆಸುವಂತೆ ಇಸ್ರೇಲ್ನ ಪ್ರಧಾನಿ ಬೆಂಜಮಿನ್ ನೆತನ್ಯಾಹು ಆದೇಶ ಹೊರಡಿಸಿದ್ದರು.</p><p>ಈ ಕುರಿತು ಏರ್ಪೋರ್ಸ್ ಒನ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್, 'ಗಾಜಾ ಒಪ್ಪಂದಕ್ಕೆ ಅಪಾಯವಿಲ್ಲ. ಒಂದು ವೇಳೆ ಇಸ್ರೇಲ್ ಸೈನಿಕರು ಮೃತಪಟ್ಟಿದ್ದರೆ ಪ್ರತಿದಾಳಿ ನಡೆಸಬೇಕು' ಎಂದು ಹೇಳಿದ್ದಾರೆ. </p><p>ತನ್ನ ಸೇನೆಯ ಮೇಲೆ ದಾಳಿ ಮಾಡಿದ ಹಮಾಸ್, ಕದನ ವಿರಾಮ ನಿಯಮವನ್ನು ಉಲ್ಲಂಘಿಸಿದೆ ಎಂದು ಇಸ್ರೇಲ್ ಆರೋಪಿಸಿತ್ತು. ಇದಕ್ಕೆ ಪ್ರತಿಯಾಗಿ ಗಾಜಾ ಮೇಲೆ ಪ್ರಬಲ ದಾಳಿ ನಡೆಸುವಂತೆ ಇಸ್ರೇಲ್ ಪ್ರಧಾನಿ ನೆತನ್ಯಾಹು ಆದೇಶ ನೀಡಿದ್ದರು. </p><p>'ಇಸ್ರೇಲ್ ಸೇನೆಯ ಮೇಲೆ ದಾಳಿ ನಡೆದಾಗ ಪ್ರತಿದಾಳಿ ನಡೆಸಲೇಬೇಕು' ಎಂದೂ ಟ್ರಂಪ್ ಹೇಳಿದ್ದಾರೆ. </p>.ಗಾಜಾದಲ್ಲಿ ತೀವ್ರ ದಾಳಿ ನಡೆಸುವಂತೆ ಇಸ್ರೇಲ್ ಪ್ರಧಾನಿ ಆದೇಶ, 9 ಮಂದಿ ಸಾವು: ವರದಿ.ಗಾಜಾ: ಹಳದಿ ಗೆರೆ ದಾಟಿದ ಬಸ್ಗೆ ಇಸ್ರೇಲ್ ಗುಂಡು; ಒಂದೇ ಕುಟುಂಬದ 9 ಮಂದಿ ಹತ್ಯೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾಷಿಂಗ್ಟನ್:</strong> ಗಾಜಾ ಕದನ ವಿರಾಮಕ್ಕೆ ಯಾವುದೇ ಅಪಾಯ ಇಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರತಿಕ್ರಿಯಿಸಿದ್ದಾರೆ. </p><p>ಗಾಜಾ ಮೇಲೆ ಕೂಡಲೇ ಪ್ರಬಲ ದಾಳಿ ನಡೆಸುವಂತೆ ಇಸ್ರೇಲ್ನ ಪ್ರಧಾನಿ ಬೆಂಜಮಿನ್ ನೆತನ್ಯಾಹು ಆದೇಶ ಹೊರಡಿಸಿದ್ದರು.</p><p>ಈ ಕುರಿತು ಏರ್ಪೋರ್ಸ್ ಒನ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್, 'ಗಾಜಾ ಒಪ್ಪಂದಕ್ಕೆ ಅಪಾಯವಿಲ್ಲ. ಒಂದು ವೇಳೆ ಇಸ್ರೇಲ್ ಸೈನಿಕರು ಮೃತಪಟ್ಟಿದ್ದರೆ ಪ್ರತಿದಾಳಿ ನಡೆಸಬೇಕು' ಎಂದು ಹೇಳಿದ್ದಾರೆ. </p><p>ತನ್ನ ಸೇನೆಯ ಮೇಲೆ ದಾಳಿ ಮಾಡಿದ ಹಮಾಸ್, ಕದನ ವಿರಾಮ ನಿಯಮವನ್ನು ಉಲ್ಲಂಘಿಸಿದೆ ಎಂದು ಇಸ್ರೇಲ್ ಆರೋಪಿಸಿತ್ತು. ಇದಕ್ಕೆ ಪ್ರತಿಯಾಗಿ ಗಾಜಾ ಮೇಲೆ ಪ್ರಬಲ ದಾಳಿ ನಡೆಸುವಂತೆ ಇಸ್ರೇಲ್ ಪ್ರಧಾನಿ ನೆತನ್ಯಾಹು ಆದೇಶ ನೀಡಿದ್ದರು. </p><p>'ಇಸ್ರೇಲ್ ಸೇನೆಯ ಮೇಲೆ ದಾಳಿ ನಡೆದಾಗ ಪ್ರತಿದಾಳಿ ನಡೆಸಲೇಬೇಕು' ಎಂದೂ ಟ್ರಂಪ್ ಹೇಳಿದ್ದಾರೆ. </p>.ಗಾಜಾದಲ್ಲಿ ತೀವ್ರ ದಾಳಿ ನಡೆಸುವಂತೆ ಇಸ್ರೇಲ್ ಪ್ರಧಾನಿ ಆದೇಶ, 9 ಮಂದಿ ಸಾವು: ವರದಿ.ಗಾಜಾ: ಹಳದಿ ಗೆರೆ ದಾಟಿದ ಬಸ್ಗೆ ಇಸ್ರೇಲ್ ಗುಂಡು; ಒಂದೇ ಕುಟುಂಬದ 9 ಮಂದಿ ಹತ್ಯೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>