<p><strong>ಮಾಸ್ಕೊ:</strong> ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದಾರೆ. ಇಸ್ರೇಲ್ ಮತ್ತು ಹಮಾಸ್ ನಡುವಣ ಸಂಘರ್ಷವನ್ನು ಕೊನೆಗೊಳಿಸಲು ನೆರವಾಗಲು ಸಿದ್ಧವಿರುವುದಾಗಿ ರಷ್ಯಾ ಅಧ್ಯಕ್ಷರ ಅಧಿಕೃತ ನಿವಾಸ ಕ್ರೆಮ್ಲಿನ್ ಹೇಳಿದೆ.</p><p>'ಪರಿಸ್ಥಿತಿಯನ್ನು ತಿಳಿಗೊಳಿಸಲು, ಹಿಂಸಾಚಾರ ಮತ್ತಷ್ಟು ಉಲ್ಬಣಗೊಳ್ಳದಂತೆ ಹಾಗೂ ಗಾಜಾ ಪಟ್ಟಿಯಲ್ಲಿ ಮಾನವೀಯ ದುರಂತವನ್ನು ತಡೆಯಲು ರಷ್ಯಾ ಕ್ರಮ ಕೈಗೊಳ್ಳುತ್ತಿರುವುದಾಗಿ ನೆತನ್ಯಾಹು ಅವರಿಗೆ ವ್ಲಾಡಿಮಿರ್ ಪುಟಿನ್ ತಿಳಿಸಿದ್ದಾರೆ' ಎಂದು ಕ್ರೆಮ್ಲಿನ್ ಮಾಹಿತಿ ನೀಡಿದೆ.</p>.ಆಳ–ಅಗಲ: ಹಮಾಸ್–ಇಸ್ರೇಲ್ ಯುದ್ಧ ಮುಂದುವರಿದರೆ ಭಾರತಕ್ಕೂ ಆಗಲಿದೆ ನಷ್ಟ.<p>ಪುಟಿನ್ ಅವರು ಇರಾನ್, ಈಜಿಪ್ಟ್, ಸಿರಿಯಾ ಮತ್ತು ಪ್ಯಾಲೆಸ್ಟೇನ್ ನಾಯಕರರೊಂದಿಗೆ ಸೋಮವಾರ ಮಾತುಕತೆ ನಡೆಸಿದ್ದಾರೆ. ನಾಗರಿಕರ ವಿರುದ್ಧದ ಯಾವುದೇ ಹಿಂಸಾಚಾರವನ್ನು ಒಪ್ಪಲಾಗದು ಎಂದೂ ಅದು ಪ್ರತಿಪಾದಿಸಿದೆ.</p><p>ಹಮಾಸ್ ಬಂಡುಕೋರ ಸಂಘಟನೆ ನಡೆಸಿದ ದಾಳಿಗೆ ಪ್ರತಿಯಾಗಿ ಇಸ್ರೇಲ್ ದಾಳಿ ಆರಂಭಿಸಿದ ಒಂದು ವಾರದಲ್ಲಿ ಗಾಜಾ ಪಟ್ಟಿಯಲ್ಲಿ ಹತ್ತು ಲಕ್ಷಕ್ಕೂ ಹೆಚ್ಚು ಮಂದಿ ನೆಲೆ ಕಳೆದುಕೊಂಡಿದ್ದಾರೆ. ವಿದ್ಯುತ್, ಇಂಧನ, ಆಹಾರ, ನೀರಿನ ಸರಬರಾಜು ಇಲ್ಲದೆ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.</p><p>ಈ ದಾಳಿ ಇದೀಗ ಸಿರಿಯಾಗೂ ವಿಸ್ತರಿಸಿದೆ. ಇದರ ನಡುವೆ, ಅರಬ್ ದೇಶಗಳು ಇಸ್ರೇಲ್ ವಿರುದ್ಧ ಒಂದಾಗಬೇಕು ಎಂದು ಇರಾನ್ ಕರೆ ನೀಡಿರುವುದು ಹೊಸದೊಂದು ಪ್ರಾದೇಶಿಕ ಬಿಕ್ಕಟ್ಟಿಗೆ ನಾಂದಿ ಹಾಡಿದೆ.</p>.ಆಳ–ಅಗಲ: ಹಮಾಸ್–ಇಸ್ರೇಲ್ ಸಂಘರ್ಷ– ಕ್ರೌರ್ಯ ಮೆರೆದ ಯುದ್ಧಾಪರಾಧ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಸ್ಕೊ:</strong> ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದಾರೆ. ಇಸ್ರೇಲ್ ಮತ್ತು ಹಮಾಸ್ ನಡುವಣ ಸಂಘರ್ಷವನ್ನು ಕೊನೆಗೊಳಿಸಲು ನೆರವಾಗಲು ಸಿದ್ಧವಿರುವುದಾಗಿ ರಷ್ಯಾ ಅಧ್ಯಕ್ಷರ ಅಧಿಕೃತ ನಿವಾಸ ಕ್ರೆಮ್ಲಿನ್ ಹೇಳಿದೆ.</p><p>'ಪರಿಸ್ಥಿತಿಯನ್ನು ತಿಳಿಗೊಳಿಸಲು, ಹಿಂಸಾಚಾರ ಮತ್ತಷ್ಟು ಉಲ್ಬಣಗೊಳ್ಳದಂತೆ ಹಾಗೂ ಗಾಜಾ ಪಟ್ಟಿಯಲ್ಲಿ ಮಾನವೀಯ ದುರಂತವನ್ನು ತಡೆಯಲು ರಷ್ಯಾ ಕ್ರಮ ಕೈಗೊಳ್ಳುತ್ತಿರುವುದಾಗಿ ನೆತನ್ಯಾಹು ಅವರಿಗೆ ವ್ಲಾಡಿಮಿರ್ ಪುಟಿನ್ ತಿಳಿಸಿದ್ದಾರೆ' ಎಂದು ಕ್ರೆಮ್ಲಿನ್ ಮಾಹಿತಿ ನೀಡಿದೆ.</p>.ಆಳ–ಅಗಲ: ಹಮಾಸ್–ಇಸ್ರೇಲ್ ಯುದ್ಧ ಮುಂದುವರಿದರೆ ಭಾರತಕ್ಕೂ ಆಗಲಿದೆ ನಷ್ಟ.<p>ಪುಟಿನ್ ಅವರು ಇರಾನ್, ಈಜಿಪ್ಟ್, ಸಿರಿಯಾ ಮತ್ತು ಪ್ಯಾಲೆಸ್ಟೇನ್ ನಾಯಕರರೊಂದಿಗೆ ಸೋಮವಾರ ಮಾತುಕತೆ ನಡೆಸಿದ್ದಾರೆ. ನಾಗರಿಕರ ವಿರುದ್ಧದ ಯಾವುದೇ ಹಿಂಸಾಚಾರವನ್ನು ಒಪ್ಪಲಾಗದು ಎಂದೂ ಅದು ಪ್ರತಿಪಾದಿಸಿದೆ.</p><p>ಹಮಾಸ್ ಬಂಡುಕೋರ ಸಂಘಟನೆ ನಡೆಸಿದ ದಾಳಿಗೆ ಪ್ರತಿಯಾಗಿ ಇಸ್ರೇಲ್ ದಾಳಿ ಆರಂಭಿಸಿದ ಒಂದು ವಾರದಲ್ಲಿ ಗಾಜಾ ಪಟ್ಟಿಯಲ್ಲಿ ಹತ್ತು ಲಕ್ಷಕ್ಕೂ ಹೆಚ್ಚು ಮಂದಿ ನೆಲೆ ಕಳೆದುಕೊಂಡಿದ್ದಾರೆ. ವಿದ್ಯುತ್, ಇಂಧನ, ಆಹಾರ, ನೀರಿನ ಸರಬರಾಜು ಇಲ್ಲದೆ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.</p><p>ಈ ದಾಳಿ ಇದೀಗ ಸಿರಿಯಾಗೂ ವಿಸ್ತರಿಸಿದೆ. ಇದರ ನಡುವೆ, ಅರಬ್ ದೇಶಗಳು ಇಸ್ರೇಲ್ ವಿರುದ್ಧ ಒಂದಾಗಬೇಕು ಎಂದು ಇರಾನ್ ಕರೆ ನೀಡಿರುವುದು ಹೊಸದೊಂದು ಪ್ರಾದೇಶಿಕ ಬಿಕ್ಕಟ್ಟಿಗೆ ನಾಂದಿ ಹಾಡಿದೆ.</p>.ಆಳ–ಅಗಲ: ಹಮಾಸ್–ಇಸ್ರೇಲ್ ಸಂಘರ್ಷ– ಕ್ರೌರ್ಯ ಮೆರೆದ ಯುದ್ಧಾಪರಾಧ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>