<p><strong>ನವದೆಹಲಿ:</strong> ಇಸ್ರೇಲ್ ಹಾಗೂ ಇರಾನ್ ನಡುವೆ ಉಂಟಾಗಿರುವ ಸಂಘರ್ಷಕ್ಕೆ ಸಂಬಂಧಿಸಿದಂತೆ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಪರಿಸ್ಥಿತಿ ಮೇಲೆ ಸೂಕ್ಷ್ಮ ನಿಗಾ ವಹಿಸಿದೆ ಎಂದು ಹೇಳಿದೆ. </p><p>ಪಶ್ಚಿಮ ಏಷ್ಯಾದಲ್ಲಿ ಇದೀಗ ಉಂಟಾಗಿರುವ ಉದ್ವಿಗ್ನ ಸ್ಥಿತಿ ಮತ್ತಷ್ಟು ಹೆಚ್ಚಿಸದಂತೆ ಉಭಯ ದೇಶಗಳು ಎಚ್ಚರಿಕೆ ವಹಿಸುವಂತೆಯೂ ಒತ್ತಾಯಿಸಿತು. </p><p>ರಾಜತಾಂತ್ರಿಕವಾಗಿ ವಿವಾದವನ್ನು ಶಮನಗೊಳಿಸಲು ಕ್ರಮಗಳನ್ನು ಕೈಗೊಳ್ಳಬೇಕು ಎಂದು ವಿನಂತಿಸಿದೆ. </p><p>ಉಭಯ ದೇಶಗಳೊಂದಿಗೆ ಭಾರತ ನಿಕಟ ಹಾಗೂ ಸ್ನೇಹಪರ ಬಾಂಧವ್ಯವನ್ನು ಹೊಂದಿದೆ. ಸಾಧ್ಯವಾದ ಎಲ್ಲ ಬೆಂಬಲವನ್ನು ನೀಡಲು ಸಿದ್ಧವಾಗಿದೆ ಎಂದೂ ಹೇಳಿದೆ. </p><p>ಈ ಪ್ರದೇಶದಲ್ಲಿರುವ ಭಾರತೀಯ ಪ್ರಜೆಗಳು ಎಚ್ಚರಿಕೆಯಿಂದ ಇರುವಂತೆಯೂ ಕೇಂದ್ರ ವಿದೇಶಾಂಗ ಸಚಿವಾಲಯ (ಎಂಇಎ) ಸಲಹೆ ನೀಡಿದೆ. </p><p>ಅಲ್ಲದೆ ಸ್ಥಳೀಯ ಆಡಳಿತದ ಭದ್ರತಾ ಸಲಹೆಗಳನ್ನು ಪಾಲನೆ ಮಾಡುವಂತೆಯೂ ಸೂಚಿಸಿದೆ. </p><p>ಅಂತರರಾಷ್ಟ್ರೀಯ ಮಾಧ್ಯಮಗಳ ವರದಿಗಳ ಪ್ರಕಾರ, ಅಣ್ವಸ್ತ್ರ ಕೇಂದ್ರಗಳನ್ನು ಗುರಿಯಾಗಿಸಿ ಇರಾನ್ನ ರಾಜಧಾನಿ ಟೆಹ್ರಾನ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಇಸ್ರೇಲ್ ದಾಳಿ ನಡೆಸಿದೆ. ಇರಾನ್ ಪ್ರತಿದಾಳಿ ಕೂಡ ನಡೆಸಿದೆ ಎಂದು ವರದಿಯಾಗಿದೆ. </p> .Israel-Iran Conflict|ಇರಾನ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ; ಉದ್ವಿಗ್ನ ಸ್ಥಿತಿ.ಇಸ್ರೇಲ್ ದಾಳಿಯಲ್ಲಿ ಇರಾನ್ ಸೇನಾಪಡೆಗಳ ಮುಖ್ಯಸ್ಥನ ಹತ್ಯೆ: ವರದಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಇಸ್ರೇಲ್ ಹಾಗೂ ಇರಾನ್ ನಡುವೆ ಉಂಟಾಗಿರುವ ಸಂಘರ್ಷಕ್ಕೆ ಸಂಬಂಧಿಸಿದಂತೆ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಪರಿಸ್ಥಿತಿ ಮೇಲೆ ಸೂಕ್ಷ್ಮ ನಿಗಾ ವಹಿಸಿದೆ ಎಂದು ಹೇಳಿದೆ. </p><p>ಪಶ್ಚಿಮ ಏಷ್ಯಾದಲ್ಲಿ ಇದೀಗ ಉಂಟಾಗಿರುವ ಉದ್ವಿಗ್ನ ಸ್ಥಿತಿ ಮತ್ತಷ್ಟು ಹೆಚ್ಚಿಸದಂತೆ ಉಭಯ ದೇಶಗಳು ಎಚ್ಚರಿಕೆ ವಹಿಸುವಂತೆಯೂ ಒತ್ತಾಯಿಸಿತು. </p><p>ರಾಜತಾಂತ್ರಿಕವಾಗಿ ವಿವಾದವನ್ನು ಶಮನಗೊಳಿಸಲು ಕ್ರಮಗಳನ್ನು ಕೈಗೊಳ್ಳಬೇಕು ಎಂದು ವಿನಂತಿಸಿದೆ. </p><p>ಉಭಯ ದೇಶಗಳೊಂದಿಗೆ ಭಾರತ ನಿಕಟ ಹಾಗೂ ಸ್ನೇಹಪರ ಬಾಂಧವ್ಯವನ್ನು ಹೊಂದಿದೆ. ಸಾಧ್ಯವಾದ ಎಲ್ಲ ಬೆಂಬಲವನ್ನು ನೀಡಲು ಸಿದ್ಧವಾಗಿದೆ ಎಂದೂ ಹೇಳಿದೆ. </p><p>ಈ ಪ್ರದೇಶದಲ್ಲಿರುವ ಭಾರತೀಯ ಪ್ರಜೆಗಳು ಎಚ್ಚರಿಕೆಯಿಂದ ಇರುವಂತೆಯೂ ಕೇಂದ್ರ ವಿದೇಶಾಂಗ ಸಚಿವಾಲಯ (ಎಂಇಎ) ಸಲಹೆ ನೀಡಿದೆ. </p><p>ಅಲ್ಲದೆ ಸ್ಥಳೀಯ ಆಡಳಿತದ ಭದ್ರತಾ ಸಲಹೆಗಳನ್ನು ಪಾಲನೆ ಮಾಡುವಂತೆಯೂ ಸೂಚಿಸಿದೆ. </p><p>ಅಂತರರಾಷ್ಟ್ರೀಯ ಮಾಧ್ಯಮಗಳ ವರದಿಗಳ ಪ್ರಕಾರ, ಅಣ್ವಸ್ತ್ರ ಕೇಂದ್ರಗಳನ್ನು ಗುರಿಯಾಗಿಸಿ ಇರಾನ್ನ ರಾಜಧಾನಿ ಟೆಹ್ರಾನ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಇಸ್ರೇಲ್ ದಾಳಿ ನಡೆಸಿದೆ. ಇರಾನ್ ಪ್ರತಿದಾಳಿ ಕೂಡ ನಡೆಸಿದೆ ಎಂದು ವರದಿಯಾಗಿದೆ. </p> .Israel-Iran Conflict|ಇರಾನ್ ಮೇಲೆ ಇಸ್ರೇಲ್ ವೈಮಾನಿಕ ದಾಳಿ; ಉದ್ವಿಗ್ನ ಸ್ಥಿತಿ.ಇಸ್ರೇಲ್ ದಾಳಿಯಲ್ಲಿ ಇರಾನ್ ಸೇನಾಪಡೆಗಳ ಮುಖ್ಯಸ್ಥನ ಹತ್ಯೆ: ವರದಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>