<p><strong>ಜೆರುಸಲೆಂ:</strong> ಭಾರತದ ರಾಜಧಾನಿ ದೆಹಲಿಯಲ್ಲಿ ನಡೆದಿರುವ ಕಾರು ಸ್ಫೋಟ ಘಟನೆಯನ್ನು ಖಂಡಿಸಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ‘ನಮ್ಮ ನಗರಗಳ ಮೇಲೆ ಉಗ್ರರು ದಾಳಿ ಮಾಡಿ ನಾಶಗೊಳಿಸಬಹುದು ಆದರೆ, ಆತ್ಮಶಕ್ತಿಯನ್ನು ಅಲುಗಾಡಿಸಲು ಸಾಧ್ಯವಿಲ್ಲ’ ಎಂದಿದ್ದಾರೆ.</p><p>ಸೋಮವಾರ ಸಂಜೆ ದೆಹಲಿಯ ಕೆಂಪು ಕೋಟೆಯ ಬಳಿ ಚಲಿಸುತ್ತಿದ್ದ ಕಾರು ಸ್ಫೋಟಗೊಂಡು 12 ಜನ ಮೃತಪಟ್ಟಿದ್ದು, ಅನೇಕರು ಗಾಯಗೊಂಡಿದ್ದಾರೆ.</p><p>ಈ ಘಟನೆಯನ್ನು ಖಂಡಿಸಿ ಸಾಮಾಜಿಕ ಮಾಧ್ಯಮದಲ್ಲಿ ಹಿಂದಿ ಮತ್ತು ಇಂಗ್ಲಿಷ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ನೆತನ್ಯಾಹು, ‘ಆತ್ಮೀಯ ಸ್ನೇಹಿತ ನರೇಂದ್ರ ಮೋದಿ ಮತ್ತು ಭಾರತದ ಧೈರ್ಯವಂತ ನಾಗರಿಕರೆ, ಸಾರಾ, ನಾನು ಮತ್ತು ಇಡೀ ಇಸ್ರೇಲ್ ಜನತೆ ಸ್ಫೋಟದಲ್ಲಿ ಮೃತರಾದ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇವೆ. ಈ ಸಮಯದಲ್ಲಿ ಭಾರತದೊಂದಿಗೆ ಇಸ್ರೇಲ್ ದೃಢವಾಗಿ ನಿಲ್ಲಲಿದೆ’ ಎಂದು ಬರೆದುಕೊಂಡಿದ್ದಾರೆ.</p><p>‘ಭಾರತ ಮತ್ತು ಇಸ್ರೇಲ್ ಶಾಶ್ವತ ಸತ್ಯಗಳ ಮೇಲೆ ನಿಂತಿರುವ ಪ್ರಾಚೀನ ನಾಗರಿಕತೆಯನ್ನು ಒಳಗೊಂಡಿದೆ. ಉಗ್ರರು ನಮ್ಮ ನಗರಗಳ ಮೇಲೆ ದಾಳಿ ನಡೆಸಬಹುದು ಆದರೆ ಆತ್ಮಶಕ್ತಿಯನ್ನು ಅಲುಗಾಡಿಸಲು ಸಾಧ್ಯವಿಲ್ಲ. ನಮ್ಮ ರಾಷ್ಟ್ರಗಳ ಬೆಳಕು ನಮ್ಮ ಶತ್ರುಗಳ ಕತ್ತಲೆಯನ್ನು ಮೀರಿಸುತ್ತದೆ’ ಎಂದು ಬಣ್ಣಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೆರುಸಲೆಂ:</strong> ಭಾರತದ ರಾಜಧಾನಿ ದೆಹಲಿಯಲ್ಲಿ ನಡೆದಿರುವ ಕಾರು ಸ್ಫೋಟ ಘಟನೆಯನ್ನು ಖಂಡಿಸಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ‘ನಮ್ಮ ನಗರಗಳ ಮೇಲೆ ಉಗ್ರರು ದಾಳಿ ಮಾಡಿ ನಾಶಗೊಳಿಸಬಹುದು ಆದರೆ, ಆತ್ಮಶಕ್ತಿಯನ್ನು ಅಲುಗಾಡಿಸಲು ಸಾಧ್ಯವಿಲ್ಲ’ ಎಂದಿದ್ದಾರೆ.</p><p>ಸೋಮವಾರ ಸಂಜೆ ದೆಹಲಿಯ ಕೆಂಪು ಕೋಟೆಯ ಬಳಿ ಚಲಿಸುತ್ತಿದ್ದ ಕಾರು ಸ್ಫೋಟಗೊಂಡು 12 ಜನ ಮೃತಪಟ್ಟಿದ್ದು, ಅನೇಕರು ಗಾಯಗೊಂಡಿದ್ದಾರೆ.</p><p>ಈ ಘಟನೆಯನ್ನು ಖಂಡಿಸಿ ಸಾಮಾಜಿಕ ಮಾಧ್ಯಮದಲ್ಲಿ ಹಿಂದಿ ಮತ್ತು ಇಂಗ್ಲಿಷ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ನೆತನ್ಯಾಹು, ‘ಆತ್ಮೀಯ ಸ್ನೇಹಿತ ನರೇಂದ್ರ ಮೋದಿ ಮತ್ತು ಭಾರತದ ಧೈರ್ಯವಂತ ನಾಗರಿಕರೆ, ಸಾರಾ, ನಾನು ಮತ್ತು ಇಡೀ ಇಸ್ರೇಲ್ ಜನತೆ ಸ್ಫೋಟದಲ್ಲಿ ಮೃತರಾದ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇವೆ. ಈ ಸಮಯದಲ್ಲಿ ಭಾರತದೊಂದಿಗೆ ಇಸ್ರೇಲ್ ದೃಢವಾಗಿ ನಿಲ್ಲಲಿದೆ’ ಎಂದು ಬರೆದುಕೊಂಡಿದ್ದಾರೆ.</p><p>‘ಭಾರತ ಮತ್ತು ಇಸ್ರೇಲ್ ಶಾಶ್ವತ ಸತ್ಯಗಳ ಮೇಲೆ ನಿಂತಿರುವ ಪ್ರಾಚೀನ ನಾಗರಿಕತೆಯನ್ನು ಒಳಗೊಂಡಿದೆ. ಉಗ್ರರು ನಮ್ಮ ನಗರಗಳ ಮೇಲೆ ದಾಳಿ ನಡೆಸಬಹುದು ಆದರೆ ಆತ್ಮಶಕ್ತಿಯನ್ನು ಅಲುಗಾಡಿಸಲು ಸಾಧ್ಯವಿಲ್ಲ. ನಮ್ಮ ರಾಷ್ಟ್ರಗಳ ಬೆಳಕು ನಮ್ಮ ಶತ್ರುಗಳ ಕತ್ತಲೆಯನ್ನು ಮೀರಿಸುತ್ತದೆ’ ಎಂದು ಬಣ್ಣಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>