<p><strong>ದಾರ್ ಅಲ್–ಬಲಾ</strong>: ಹಮಾಸ್ ಬಂಡುಕೋರರು ಇಸ್ರೇಲ್ ಷರತ್ತುಗಳಿಗೆ ಒಪ್ಪದಿದ್ದರೆ ಗಾಜಾ ನಗರವನ್ನೇ ನಾಶ ಮಾಡಬೇಕಾಗುತ್ತದೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಟ್ಜ್ ಶುಕ್ರವಾರ ಎಚ್ಚರಿಸಿದ್ದಾರೆ.</p>.<p>ಗಾಜಾ ಸಹ ರಫಾಹ್ ಮತ್ತು ಬೈತ್ ಹನೌನ್ ರೀತಿ ಭಗ್ನಾವಶೇಷವಾಗಲಿದೆ ಎಂದು ಅವರು ಹೇಳಿದ್ದಾರೆ.</p>.<p>ಗಾಜಾ ನಗರವನ್ನು ವಶಕ್ಕೆ ಪಡೆಯಲು ಮಹತ್ವದ ಕಾರ್ಯಾಚರಣೆ ನಡೆಸಲು ಸೇನೆಗೆ ಪರಮಾಧಿಕಾರ ನೀಡಲಾಗಿದೆ ಎಂದು ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಹೇಳಿಕೆ ನೀಡಿದ ಬಳಿಕ ಈ ಎಚ್ಚರಿಕೆ ನೀಡಿದ್ದಾರೆ.</p>.<p>ಗಾಜಾದಲ್ಲಿ ಕೊಲೆ, ಅತ್ಯಾಚಾರ ನಡೆಸುವ ಹಮಾಸ್ ಬಂಡುಕೋರರಿಗೆ ಶೀಘ್ರದಲ್ಲೇ ನರಕದ ಬಾಗಿಲು ತೆರೆಯಲಿದೆ ಎಂದೂ ಅವರು ಹೇಳಿದ್ದಾರೆ.</p>.<p><strong>ಗಾಜಾದಲ್ಲಿ ಕ್ಷಾಮ: ಐಪಿಸಿ</strong> </p><p>ಗಾಜಾದಲ್ಲಿ ಕ್ಷಾಮ ತಲೆದೋರಿದೆ. ಕದನ ವಿರಾಮ ಘೋಷಣೆಯಾಗದಿದ್ದರೆ ಮತ್ತು ಮಾನವೀಯ ನೆರವು ನೀಡಲು ಇರುವ ನಿರ್ಬಂಧ ಅಂತ್ಯಗೊಳ್ಳದಿದ್ದರೆ ಇತರ ಪ್ರದೇಶಗಳಿಗೂ ಕ್ಷಾಮ ಹಬ್ಬುವ ಸಾಧ್ಯತೆ ಇದೆ ಆಹಾರ ಬಿಕ್ಕಟ್ಟು ಕುರಿತ ಸಂಸ್ಥೆ ಎಚ್ಚರಿಸಿದೆ. ಸಮಗ್ರ ಆಹಾರ ಭದ್ರತಾ ವರ್ಗೀಕರಣ (ಐಪಿಸಿ) ಸಂಸ್ಥೆಯು ಇಸ್ರೇಲ್ನಿಂದ ನಿರಂತರ ಆಕ್ರಮಣ ಆಹಾರ ಮತ್ತು ಮಾನವೀಯ ನೆರವಿಗೆ ನಿರ್ಬಂಧ ವ್ಯಾಪಕ ಸ್ಥಳಾಂತರ ಉತ್ಪಾದನೆಯ ಕುಸಿತವು ಪ್ಯಾಲೆಸ್ಟೀನಿಯನ್ನರನ್ನು ಹಸಿವು ಬರಗಾಲಕ್ಕೆ ದೂಡಿದೆ ಎಂದು ಹೇಳಿದೆ. 5 ಲಕ್ಷಕ್ಕೂ ಅಧಿಕ ಮಂದಿ ಅತ್ಯಂತ ಹಸಿವಿನಿಂದ ನಲುಗುತ್ತಿದ್ದಾರೆ ಹಲವರು ಅಪೌಷ್ಠಿಕತೆಯಿಂದ ಸಾಯುವ ಹಂತ ತಲುಪಿದ್ದಾರೆ ಎಂದು ಐಪಿಸಿ ಹೇಳಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾರ್ ಅಲ್–ಬಲಾ</strong>: ಹಮಾಸ್ ಬಂಡುಕೋರರು ಇಸ್ರೇಲ್ ಷರತ್ತುಗಳಿಗೆ ಒಪ್ಪದಿದ್ದರೆ ಗಾಜಾ ನಗರವನ್ನೇ ನಾಶ ಮಾಡಬೇಕಾಗುತ್ತದೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಟ್ಜ್ ಶುಕ್ರವಾರ ಎಚ್ಚರಿಸಿದ್ದಾರೆ.</p>.<p>ಗಾಜಾ ಸಹ ರಫಾಹ್ ಮತ್ತು ಬೈತ್ ಹನೌನ್ ರೀತಿ ಭಗ್ನಾವಶೇಷವಾಗಲಿದೆ ಎಂದು ಅವರು ಹೇಳಿದ್ದಾರೆ.</p>.<p>ಗಾಜಾ ನಗರವನ್ನು ವಶಕ್ಕೆ ಪಡೆಯಲು ಮಹತ್ವದ ಕಾರ್ಯಾಚರಣೆ ನಡೆಸಲು ಸೇನೆಗೆ ಪರಮಾಧಿಕಾರ ನೀಡಲಾಗಿದೆ ಎಂದು ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಹೇಳಿಕೆ ನೀಡಿದ ಬಳಿಕ ಈ ಎಚ್ಚರಿಕೆ ನೀಡಿದ್ದಾರೆ.</p>.<p>ಗಾಜಾದಲ್ಲಿ ಕೊಲೆ, ಅತ್ಯಾಚಾರ ನಡೆಸುವ ಹಮಾಸ್ ಬಂಡುಕೋರರಿಗೆ ಶೀಘ್ರದಲ್ಲೇ ನರಕದ ಬಾಗಿಲು ತೆರೆಯಲಿದೆ ಎಂದೂ ಅವರು ಹೇಳಿದ್ದಾರೆ.</p>.<p><strong>ಗಾಜಾದಲ್ಲಿ ಕ್ಷಾಮ: ಐಪಿಸಿ</strong> </p><p>ಗಾಜಾದಲ್ಲಿ ಕ್ಷಾಮ ತಲೆದೋರಿದೆ. ಕದನ ವಿರಾಮ ಘೋಷಣೆಯಾಗದಿದ್ದರೆ ಮತ್ತು ಮಾನವೀಯ ನೆರವು ನೀಡಲು ಇರುವ ನಿರ್ಬಂಧ ಅಂತ್ಯಗೊಳ್ಳದಿದ್ದರೆ ಇತರ ಪ್ರದೇಶಗಳಿಗೂ ಕ್ಷಾಮ ಹಬ್ಬುವ ಸಾಧ್ಯತೆ ಇದೆ ಆಹಾರ ಬಿಕ್ಕಟ್ಟು ಕುರಿತ ಸಂಸ್ಥೆ ಎಚ್ಚರಿಸಿದೆ. ಸಮಗ್ರ ಆಹಾರ ಭದ್ರತಾ ವರ್ಗೀಕರಣ (ಐಪಿಸಿ) ಸಂಸ್ಥೆಯು ಇಸ್ರೇಲ್ನಿಂದ ನಿರಂತರ ಆಕ್ರಮಣ ಆಹಾರ ಮತ್ತು ಮಾನವೀಯ ನೆರವಿಗೆ ನಿರ್ಬಂಧ ವ್ಯಾಪಕ ಸ್ಥಳಾಂತರ ಉತ್ಪಾದನೆಯ ಕುಸಿತವು ಪ್ಯಾಲೆಸ್ಟೀನಿಯನ್ನರನ್ನು ಹಸಿವು ಬರಗಾಲಕ್ಕೆ ದೂಡಿದೆ ಎಂದು ಹೇಳಿದೆ. 5 ಲಕ್ಷಕ್ಕೂ ಅಧಿಕ ಮಂದಿ ಅತ್ಯಂತ ಹಸಿವಿನಿಂದ ನಲುಗುತ್ತಿದ್ದಾರೆ ಹಲವರು ಅಪೌಷ್ಠಿಕತೆಯಿಂದ ಸಾಯುವ ಹಂತ ತಲುಪಿದ್ದಾರೆ ಎಂದು ಐಪಿಸಿ ಹೇಳಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>