<p><strong>ಕಫ್ರ್ ಕಿಲಾ (ಲೆಬನಾನ್):</strong> ದಕ್ಷಿಣ ಲೆಬನಾನ್ನಲ್ಲಿ ಐದು ಸ್ಥಳಗಳನ್ನು ಹೊರತುಪಡಿಸಿ ಉಳಿದೆಲ್ಲ ಸ್ಥಳಗಳಿಂದ ಇಸ್ರೇಲ್ ತನ್ನ ಸೇನಾ ಪಡೆಗಳನ್ನು ಮಂಗಳವಾರ ಹಿಂತೆಗೆದುಕೊಂಡಿತು. ಅಲ್ಲದೆ, ಸ್ಥಳಾಂತರಗೊಂಡಿದ್ದ ನಿವಾಸಿಗಳಿಗೆ ಗಡಿ ಗ್ರಾಮಗಳಿಗೆ ಮರಳಲು ಅವಕಾಶ ಮಾಡಿಕೊಟ್ಟಿತು. </p>.<p>ಇಸ್ರೇಲ್-ಹಿಜ್ಬುಲ್ಲಾ ಕದನ ವಿರಾಮ ಒಪ್ಪಂದದ ಅಡಿಯಲ್ಲಿ ಮಂಗಳವಾರ ಬೆಳಿಗ್ಗೆ ವಾಪಸಾತಿ ಗಡುವು ಮುಕ್ತಾಯಗೊಂಡ ನಂತರ, ಕಫ್ರ್ ಕಿಲಾಗೆ ಹಿಂತಿರುಗಿದ ಅಲಾ ಅಲ್-ಝೆನ್ ಎಂಬುವರು, ‘ಇಡೀ ಊರು ಕಟ್ಟಡಗಳ ಭಗ್ನಾವಶೇಷಗಳಿಂದ ತುಂಬಿದೆ. ಇದು ವಿಪತ್ತು ವಲಯವಾಗಿ ಮಾರ್ಪಟ್ಟಿದೆ’ ಎಂದು ಪ್ರತಿಕ್ರಿಯಿಸಿದರು.</p>.<p>ಕಲ್ಲುಮಣ್ಣುಗಳ ರಾಶಿ ಮತ್ತು ಸೇನೆಯ ನಿರ್ಬಂಧಗಳಿಂದಾಗಿ ನಿವಾಸಿಗಳಿಗೆ ಕಫ್ರ್ ಕಿಲಾವನ್ನು ವಾಹನಗಳಲ್ಲಿ ತಲುಪಲು ಸಾಧ್ಯವಾಗಲಿಲ್ಲ. ತಮ್ಮ ಕಾರುಗಳನ್ನು ಗ್ರಾಮದ ಪ್ರವೇಶದ್ವಾರದಲ್ಲೇ ನಿಲ್ಲಿಸಿ ಕಾಲ್ನಡಿಗೆಯಲ್ಲಿ ಮನೆಗಳತ್ತ ತೆರಳಿದರು.</p>.<p>ಗಡಿಯ ಸಮೀಪದ ಐದು ಪ್ರಮುಖ ಸ್ಥಳಗಳಿಂದ ಸೇನೆಯನ್ನು ವಾಪಸ್ ಕರೆಸಿಕೊಳ್ಳುವುದಿಲ್ಲ ಎಂದ ಇಸ್ರೇಲ್ ಈ ಮೊದಲೇ ಘೋಷಿಸಿತ್ತು. ಇಸ್ರೇಲ್ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ಅವರು ಮಂಗಳವಾರ ಸೇನೆ ನಿಯೋಜನೆಯನ್ನು ದೃಢಪಡಿಸಿ, ಹಿಜ್ಬುಲ್ಲಾ ಬಂಡುಕೋರರು ಕದನ ವಿರಾಮ ಒಪ್ಪಂದ ಉಲ್ಲಂಘಿಸಿದರೆ ತಿರುಗೇಟು ನೀಡುವುದಾಗಿ ಎಚ್ಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಫ್ರ್ ಕಿಲಾ (ಲೆಬನಾನ್):</strong> ದಕ್ಷಿಣ ಲೆಬನಾನ್ನಲ್ಲಿ ಐದು ಸ್ಥಳಗಳನ್ನು ಹೊರತುಪಡಿಸಿ ಉಳಿದೆಲ್ಲ ಸ್ಥಳಗಳಿಂದ ಇಸ್ರೇಲ್ ತನ್ನ ಸೇನಾ ಪಡೆಗಳನ್ನು ಮಂಗಳವಾರ ಹಿಂತೆಗೆದುಕೊಂಡಿತು. ಅಲ್ಲದೆ, ಸ್ಥಳಾಂತರಗೊಂಡಿದ್ದ ನಿವಾಸಿಗಳಿಗೆ ಗಡಿ ಗ್ರಾಮಗಳಿಗೆ ಮರಳಲು ಅವಕಾಶ ಮಾಡಿಕೊಟ್ಟಿತು. </p>.<p>ಇಸ್ರೇಲ್-ಹಿಜ್ಬುಲ್ಲಾ ಕದನ ವಿರಾಮ ಒಪ್ಪಂದದ ಅಡಿಯಲ್ಲಿ ಮಂಗಳವಾರ ಬೆಳಿಗ್ಗೆ ವಾಪಸಾತಿ ಗಡುವು ಮುಕ್ತಾಯಗೊಂಡ ನಂತರ, ಕಫ್ರ್ ಕಿಲಾಗೆ ಹಿಂತಿರುಗಿದ ಅಲಾ ಅಲ್-ಝೆನ್ ಎಂಬುವರು, ‘ಇಡೀ ಊರು ಕಟ್ಟಡಗಳ ಭಗ್ನಾವಶೇಷಗಳಿಂದ ತುಂಬಿದೆ. ಇದು ವಿಪತ್ತು ವಲಯವಾಗಿ ಮಾರ್ಪಟ್ಟಿದೆ’ ಎಂದು ಪ್ರತಿಕ್ರಿಯಿಸಿದರು.</p>.<p>ಕಲ್ಲುಮಣ್ಣುಗಳ ರಾಶಿ ಮತ್ತು ಸೇನೆಯ ನಿರ್ಬಂಧಗಳಿಂದಾಗಿ ನಿವಾಸಿಗಳಿಗೆ ಕಫ್ರ್ ಕಿಲಾವನ್ನು ವಾಹನಗಳಲ್ಲಿ ತಲುಪಲು ಸಾಧ್ಯವಾಗಲಿಲ್ಲ. ತಮ್ಮ ಕಾರುಗಳನ್ನು ಗ್ರಾಮದ ಪ್ರವೇಶದ್ವಾರದಲ್ಲೇ ನಿಲ್ಲಿಸಿ ಕಾಲ್ನಡಿಗೆಯಲ್ಲಿ ಮನೆಗಳತ್ತ ತೆರಳಿದರು.</p>.<p>ಗಡಿಯ ಸಮೀಪದ ಐದು ಪ್ರಮುಖ ಸ್ಥಳಗಳಿಂದ ಸೇನೆಯನ್ನು ವಾಪಸ್ ಕರೆಸಿಕೊಳ್ಳುವುದಿಲ್ಲ ಎಂದ ಇಸ್ರೇಲ್ ಈ ಮೊದಲೇ ಘೋಷಿಸಿತ್ತು. ಇಸ್ರೇಲ್ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ಅವರು ಮಂಗಳವಾರ ಸೇನೆ ನಿಯೋಜನೆಯನ್ನು ದೃಢಪಡಿಸಿ, ಹಿಜ್ಬುಲ್ಲಾ ಬಂಡುಕೋರರು ಕದನ ವಿರಾಮ ಒಪ್ಪಂದ ಉಲ್ಲಂಘಿಸಿದರೆ ತಿರುಗೇಟು ನೀಡುವುದಾಗಿ ಎಚ್ಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>