<p><strong>ದೀರ್ ಅಲ್–ಬಲಾಹ್</strong>: ಇಸ್ರೇಲ್ ಸೇನೆಯು ಗಾಜಾದ ಮೇಲೆ ಬುಧವಾರ ಬೆಳಗಿನ ಜಾವ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 22 ಮಕ್ಕಳು ಸೇರಿದಂತೆ 60 ಮಂದಿ ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ. </p>.<p>ಅಮೆರಿಕದ ಮಧ್ಯಸ್ಥಿಕೆಯಲ್ಲಿ ನಡೆದ ಒಪ್ಪಂದದಂತೆ ಹಮಾಸ್ ಬಂಡುಕೋರರು ಇಸ್ರೇಲ್–ಅಮೆರಿಕದ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದ ಬೆನ್ನಲ್ಲೇ, ಈ ಬೆಳವಣಿಗೆ ನಡೆದಿದೆ. </p>.<p>ಟ್ರಂಪ್ ಅವರು ಸೌದಿ ಅರೇಬಿಯಾ ಪ್ರವಾಸ ಕೈಗೊಂಡಿದ್ದು, ಈ ಸಂದರ್ಭದಲ್ಲಿ ಗಾಜಾಕ್ಕೆ ಮಾನವೀಯ ನೆರವು ಮುಂದುವರಿಸುವ ಅಥವಾ ಕದನ ವಿರಾಮಕ್ಕೆ ಒಪ್ಪಂದ ಏರ್ಪಡಬಹುದು ಎಂಬ ಭರವಸೆಯ ನಡುವೆಯೇ, ಇಸ್ರೇಲ್ ವೈಮಾನಿಕ ದಾಳಿ ನಡೆಸಿದೆ. </p>.<p>ದಾಳಿಯ ಕುರಿತು ಹೇಳಿಕೆ ನೀಡಲು ಇಸ್ರೇಲ್ ಸೇನೆ ನಿರಾಕರಿಸಿದೆ. ಆದರೆ, ಜಬಲಿಯಾ ಪ್ರದೇಶದಲ್ಲಿರುವ ಹಮಾಸ್ ಬಂಡುಕೋರರ ಮೂಲ ಸೌಕರ್ಯಗಳನ್ನು ನಾಶ ಮಾಡಲು ರಾಕೆಟ್ ಸೇರಿದಂತೆ ಇನ್ನಿತರ ದಾಳಿ ನಡೆಸಲಾಗುವುದು. ಹೀಗಾಗಿ, ಈ ಪ್ರದೇಶದಲ್ಲಿರುವ ಜನರು ಬೇರೆ ಕಡೆ ತೆರಳಬೇಕು ಎಂದು ಮಂಗಳವಾರ ರಾತ್ರಿ ಎಚ್ಚರಿಕೆ ನೀಡಿತ್ತು. </p>.<p>ಜಬಲಿಯಾದಲ್ಲಿ ರಕ್ಷಣಾ ಕಾರ್ಯಾಚರಣೆ ಕೈಗೊಂಡ ಕಾರ್ಯಕರ್ತರು, ಕಾಂಕ್ರೀಟ್ ಗೋಡೆಗಳ ಮಧ್ಯೆ ಸಿಲುಕಿದ್ದ ಮಕ್ಕಳನ್ನು ಹೊರತೆಗೆಯಲು ಹರಸಾಹಸಪಡುತ್ತಿದ್ದ ದೃಶ್ಯವು ಮನಕಲಕುವಂತಿತ್ತು. </p>.<p>ಗಾಜಾ ಮೇಲಿನ ದಾಳಿಯನ್ನು ಇಸ್ರೇಲ್ ನಿಲ್ಲಿಸಲು ‘ದಾರಿ ಇಲ್ಲ’ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಮಂಗಳವಾರವಷ್ಟೇ ಹೇಳಿದ್ದರು. ಇದರಿಂದ ಕದನ ವಿರಾಮದ ಭರವಸೆಯು ಮಂಕಾಗಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೀರ್ ಅಲ್–ಬಲಾಹ್</strong>: ಇಸ್ರೇಲ್ ಸೇನೆಯು ಗಾಜಾದ ಮೇಲೆ ಬುಧವಾರ ಬೆಳಗಿನ ಜಾವ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 22 ಮಕ್ಕಳು ಸೇರಿದಂತೆ 60 ಮಂದಿ ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ. </p>.<p>ಅಮೆರಿಕದ ಮಧ್ಯಸ್ಥಿಕೆಯಲ್ಲಿ ನಡೆದ ಒಪ್ಪಂದದಂತೆ ಹಮಾಸ್ ಬಂಡುಕೋರರು ಇಸ್ರೇಲ್–ಅಮೆರಿಕದ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದ ಬೆನ್ನಲ್ಲೇ, ಈ ಬೆಳವಣಿಗೆ ನಡೆದಿದೆ. </p>.<p>ಟ್ರಂಪ್ ಅವರು ಸೌದಿ ಅರೇಬಿಯಾ ಪ್ರವಾಸ ಕೈಗೊಂಡಿದ್ದು, ಈ ಸಂದರ್ಭದಲ್ಲಿ ಗಾಜಾಕ್ಕೆ ಮಾನವೀಯ ನೆರವು ಮುಂದುವರಿಸುವ ಅಥವಾ ಕದನ ವಿರಾಮಕ್ಕೆ ಒಪ್ಪಂದ ಏರ್ಪಡಬಹುದು ಎಂಬ ಭರವಸೆಯ ನಡುವೆಯೇ, ಇಸ್ರೇಲ್ ವೈಮಾನಿಕ ದಾಳಿ ನಡೆಸಿದೆ. </p>.<p>ದಾಳಿಯ ಕುರಿತು ಹೇಳಿಕೆ ನೀಡಲು ಇಸ್ರೇಲ್ ಸೇನೆ ನಿರಾಕರಿಸಿದೆ. ಆದರೆ, ಜಬಲಿಯಾ ಪ್ರದೇಶದಲ್ಲಿರುವ ಹಮಾಸ್ ಬಂಡುಕೋರರ ಮೂಲ ಸೌಕರ್ಯಗಳನ್ನು ನಾಶ ಮಾಡಲು ರಾಕೆಟ್ ಸೇರಿದಂತೆ ಇನ್ನಿತರ ದಾಳಿ ನಡೆಸಲಾಗುವುದು. ಹೀಗಾಗಿ, ಈ ಪ್ರದೇಶದಲ್ಲಿರುವ ಜನರು ಬೇರೆ ಕಡೆ ತೆರಳಬೇಕು ಎಂದು ಮಂಗಳವಾರ ರಾತ್ರಿ ಎಚ್ಚರಿಕೆ ನೀಡಿತ್ತು. </p>.<p>ಜಬಲಿಯಾದಲ್ಲಿ ರಕ್ಷಣಾ ಕಾರ್ಯಾಚರಣೆ ಕೈಗೊಂಡ ಕಾರ್ಯಕರ್ತರು, ಕಾಂಕ್ರೀಟ್ ಗೋಡೆಗಳ ಮಧ್ಯೆ ಸಿಲುಕಿದ್ದ ಮಕ್ಕಳನ್ನು ಹೊರತೆಗೆಯಲು ಹರಸಾಹಸಪಡುತ್ತಿದ್ದ ದೃಶ್ಯವು ಮನಕಲಕುವಂತಿತ್ತು. </p>.<p>ಗಾಜಾ ಮೇಲಿನ ದಾಳಿಯನ್ನು ಇಸ್ರೇಲ್ ನಿಲ್ಲಿಸಲು ‘ದಾರಿ ಇಲ್ಲ’ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಮಂಗಳವಾರವಷ್ಟೇ ಹೇಳಿದ್ದರು. ಇದರಿಂದ ಕದನ ವಿರಾಮದ ಭರವಸೆಯು ಮಂಕಾಗಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>