<p><strong>ಜೆನಿನ್ (ವೆಸ್ಟ್ ಬ್ಯಾಂಕ್) (ಎಪಿ):</strong> ಆಕ್ರಮಿತ ವೆಸ್ಟ್ ಬ್ಯಾಂಕ್ ಪ್ರದೇಶದ ಮೇಲೆ ಮಂಗಳವಾರ ದಾಳಿ ನಡೆಸಿರುವ ಇಸ್ರೇಲ್ ಪಡೆಗಳು, ಒಬ್ಬ ವೈದ್ಯ ಸೇರಿದಂತೆ ಪ್ಯಾಲೆಸ್ಟೀನ್ನ ಏಳು ಮಂದಿಯನ್ನು ಹತ್ಯೆ ಮಾಡಿವೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. </p>.<p>ಹಮಾಸ್ ಬಂಡುಕೋರರನ್ನು ಸದೆಬಡಿಯುವ ಸಲುವಾಗಿ ಗಾಜಾಪಟ್ಟಿ ಮೇಲೆ ಇಸ್ರೇಲ್ ಯುದ್ಧ ಆರಂಭಿಸಿದ ಏಳು ತಿಂಗಳಿನಲ್ಲಿ ನಡೆದ ಭೀಕರ ಹಿಂಸಾಚಾರ ಘಟನೆಗಳಲ್ಲಿ ಇದೂ ಒಂದು ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ. </p>.<p>ಉತ್ತರ ವೆಸ್ಟ್ಬ್ಯಾಂಕ್ನ ಜೆನಿನ್ ನಗರದಲ್ಲಿ ಇಸ್ರೇಲ್ನ ದಾಳಿಯಲ್ಲಿ ತನ್ನ ಏಳು ಮಂದಿ ನಾಗರಿಕರು ಮೃತಪಟ್ಟಿದ್ದು, ಇತರ ಒಂಬತ್ತು ಮಂದಿ ಗಾಯಗೊಂಡಿದ್ದಾರೆ. ಅವರ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ ಎಂದು ಪ್ಯಾಲೆಸ್ಟೀನ್ ಆರೋಗ್ಯ ಸಚಿವಾಲಯ ತಿಳಿಸಿದೆ. </p>.<p>ಜೆನಿನ್ ಸರ್ಕಾರಿ ಆಸ್ಪತ್ರೆಯ ನಿರ್ದೇಶಕ ವಿಸ್ಸಂ ಅಬೂಬಕರ್ ಮಾತನಾಡಿ, ‘ವೈದ್ಯ ಒಸ್ಸಾಯಡ್ ಕಮಲ್ ಜಬರೀನ್ ಸಹ ಹತ್ಯೆಗೀಡಾಗಿದ್ದಾರೆ. ಕೆಲಸಕ್ಕೆ ಬರುತ್ತಿದ್ದಾಗ ಅವರ ಕೊಲೆಯಾಗಿದೆ’ ಎಂದು ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೆನಿನ್ (ವೆಸ್ಟ್ ಬ್ಯಾಂಕ್) (ಎಪಿ):</strong> ಆಕ್ರಮಿತ ವೆಸ್ಟ್ ಬ್ಯಾಂಕ್ ಪ್ರದೇಶದ ಮೇಲೆ ಮಂಗಳವಾರ ದಾಳಿ ನಡೆಸಿರುವ ಇಸ್ರೇಲ್ ಪಡೆಗಳು, ಒಬ್ಬ ವೈದ್ಯ ಸೇರಿದಂತೆ ಪ್ಯಾಲೆಸ್ಟೀನ್ನ ಏಳು ಮಂದಿಯನ್ನು ಹತ್ಯೆ ಮಾಡಿವೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. </p>.<p>ಹಮಾಸ್ ಬಂಡುಕೋರರನ್ನು ಸದೆಬಡಿಯುವ ಸಲುವಾಗಿ ಗಾಜಾಪಟ್ಟಿ ಮೇಲೆ ಇಸ್ರೇಲ್ ಯುದ್ಧ ಆರಂಭಿಸಿದ ಏಳು ತಿಂಗಳಿನಲ್ಲಿ ನಡೆದ ಭೀಕರ ಹಿಂಸಾಚಾರ ಘಟನೆಗಳಲ್ಲಿ ಇದೂ ಒಂದು ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ. </p>.<p>ಉತ್ತರ ವೆಸ್ಟ್ಬ್ಯಾಂಕ್ನ ಜೆನಿನ್ ನಗರದಲ್ಲಿ ಇಸ್ರೇಲ್ನ ದಾಳಿಯಲ್ಲಿ ತನ್ನ ಏಳು ಮಂದಿ ನಾಗರಿಕರು ಮೃತಪಟ್ಟಿದ್ದು, ಇತರ ಒಂಬತ್ತು ಮಂದಿ ಗಾಯಗೊಂಡಿದ್ದಾರೆ. ಅವರ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ ಎಂದು ಪ್ಯಾಲೆಸ್ಟೀನ್ ಆರೋಗ್ಯ ಸಚಿವಾಲಯ ತಿಳಿಸಿದೆ. </p>.<p>ಜೆನಿನ್ ಸರ್ಕಾರಿ ಆಸ್ಪತ್ರೆಯ ನಿರ್ದೇಶಕ ವಿಸ್ಸಂ ಅಬೂಬಕರ್ ಮಾತನಾಡಿ, ‘ವೈದ್ಯ ಒಸ್ಸಾಯಡ್ ಕಮಲ್ ಜಬರೀನ್ ಸಹ ಹತ್ಯೆಗೀಡಾಗಿದ್ದಾರೆ. ಕೆಲಸಕ್ಕೆ ಬರುತ್ತಿದ್ದಾಗ ಅವರ ಕೊಲೆಯಾಗಿದೆ’ ಎಂದು ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>