<p class="title"><strong>ಜೆರುಸಲೆಂ (ಎ.ಪಿ):</strong> ‘ನ್ಯಾಯಾಂಗ ವ್ಯವಸ್ಥೆಗೆ ಆಮೂಲಾಗ್ರ ಬದಲಾವಣೆ ತರುವ ನಿರ್ಧಾರವನ್ನು ತಕ್ಷಣದಿಂದ ಕೈಬಿಡಬೇಕು‘ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಅವರಿಗೆ ಅಧ್ಯಕ್ಷ ಐಸಾಕ್ ಹೆರ್ಜೋಗ್ ಸೂಚಿಸಿದ್ದಾರೆ.</p>.<p class="title">ನಿರ್ಧಾರ ಕೈಬಿಡುವಂತೆ ಈ ಮೊದಲು ಸಲಹೆ ಮಾಡಿದ್ದ ರಕ್ಷಣಾ ಸಚಿವ ಯೋವ್ ಗಲಾಂಟ್ ಅವರನ್ನು ಪ್ರಧಾನಿ ಸಂಪುಟದಿಂದ ವಜಾ ಮಾಡಿದ್ದರು. ಪ್ರಧಾನಿಯವರ ಕ್ರಮಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಜನರು ಬೀದಿಗಿಳಿದು ಪ್ರತಿಭಟಿಸಿದ್ದರು. ಪ್ರತಿಭಟನೆಯು ತೀವ್ರಗೊಂಡಂತೆ ಅಧ್ಯಕ್ಷರ ಸೂಚನೆಯು ಹೊರಬಿದ್ದಿದೆ.</p>.<p class="title">ಪ್ರತಿಭಟನೆ, ಧರಣಿ ಹಿನ್ನೆಲೆಯಲ್ಲಿ ಇಸ್ರೇಲ್ನಾದ್ಯಂತ ಗೊಂದಲದ ಸ್ಥಿತಿ ಇದೆ. ಹೀಗಾಗಿ, ನ್ಯಾಯಾಂಗ ವ್ಯವಸ್ಥೆಯನ್ನು ಬದಲಿಸುವ ಕ್ರಮಗಳನ್ನು ತಾತ್ಕಾಲಿಕವಾಗಿ ಕೈಬಿಡಬೇಕು ಎಂದು ರಕ್ಷಣಾ ಸಚಿವರು ಕೋರಿದ್ದರು. ಇದರ ಹಿಂದೆಯೇ ಅವರ ವಜಾ ಆದೇಶ ಹೊರಬಿದ್ದಿತ್ತು.</p>.<p class="title">ಜನರು ಈಗಾಗಲೇ ನ್ಯಾಯಾಂಗ ವ್ಯವಸ್ಥೆ ಬದಲಿಸುವ ನಿರ್ಧಾರಗಳಿಗೆ ವಿರೋಧ ವ್ಯಕ್ತಪಡಿಸುತ್ತಿದ್ದು, ಸಚಿವರ ವಜಾ ಕ್ರಮದ ಬಳಿಕ ಆಕ್ರೋಶ ಇನ್ನಷ್ಟು ಭುಗಿಲೆದ್ದಿದೆ. ಪ್ರಧಾನಿ ನಿಲುವಿಗೆ ಉದ್ಯಮ, ಕಾನೂನು ಕ್ಷೇತ್ರ ಹಾಗೂ ಸೇನೆಯ ಪ್ರಮುಖರೂ ಆಕ್ಷೇಪ ವ್ಯಕ್ತಪಡಿಸಿದ್ದಾರೆ.</p>.<p class="title">ಪ್ರತಿಭಟನೆ: ಪ್ರಧಾನಿ ನೇತನ್ಯಾಹು ವಿರುದ್ಧ ಸಹಸ್ರಾರು ಜನರು ಬೀದಿಗಿಳಿದಿದ್ದು, ಟೆಲ್ ಅವಿವ್ನಲ್ಲಿ ಹೆದ್ದಾರಿಯನ್ನು ಅಡ್ಡಗಟ್ಟಿದ್ದರು. ಜೆರುಸಲೆಂನಲ್ಲಿ ಪ್ರಧಾನಿ ಖಾಸಗಿ ನಿವಾಸದ ಬಳಿ ಸೇರಿದ್ದ ಗುಂಪನ್ನು ಪೊಲೀಸರು ಚದುರಿಸಿದರು.</p>.<p>ಟೆಲ್ಅವೀವ್ಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯಲ್ಲಿ ಸಾವಿರಾರು ಜನ ಸೇರಿದ್ದು, ಇಸ್ರೇಲ್ನ ಧ್ವಜಗಳು ರಾರಾಜಿಸುತ್ತಿದ್ದವು. ಬೀರ್ಶೆಬಾ, ಹೈಫಾ, ಜೆರುಸಲೆಂನಲ್ಲಿಯೂ ಇಂತಹುದೇ ಚಿತ್ರವಿತ್ತು. ಪೊಲೀಸರು ಗುಂಪು ಚದುರಿಸಲು ಅಶ್ರುವಾಯು, ಜಲಫಿರಂಗಿ ಪ್ರಯೋಗಿಸಿದರು.</p>.<p>ರಕ್ಷಣಾ ಸಚಿವರ ವಜಾ ಕುರಿತು ಪ್ರಧಾನಿಕಚೇರಿ ಟ್ವೀಟ್ ಮಾಡಿದೆ. ಅದರ ಹಿಂದೆಯೇ ‘ನಿರಾಕರಣೆಯ ವಿರುದ್ಧ ನಾವೆಲ್ಲರೂ ಒಟ್ಟಾಗಿ ನಿಲ್ಲಬೇಕಿದೆ’ ಎಂದು ಪ್ರಧಾನಿ ನೇತನ್ಯಾಹು ಅವರು ಪ್ರತ್ಯೇಕವಾಗಿ ಟ್ವೀಟ್ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಜೆರುಸಲೆಂ (ಎ.ಪಿ):</strong> ‘ನ್ಯಾಯಾಂಗ ವ್ಯವಸ್ಥೆಗೆ ಆಮೂಲಾಗ್ರ ಬದಲಾವಣೆ ತರುವ ನಿರ್ಧಾರವನ್ನು ತಕ್ಷಣದಿಂದ ಕೈಬಿಡಬೇಕು‘ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಅವರಿಗೆ ಅಧ್ಯಕ್ಷ ಐಸಾಕ್ ಹೆರ್ಜೋಗ್ ಸೂಚಿಸಿದ್ದಾರೆ.</p>.<p class="title">ನಿರ್ಧಾರ ಕೈಬಿಡುವಂತೆ ಈ ಮೊದಲು ಸಲಹೆ ಮಾಡಿದ್ದ ರಕ್ಷಣಾ ಸಚಿವ ಯೋವ್ ಗಲಾಂಟ್ ಅವರನ್ನು ಪ್ರಧಾನಿ ಸಂಪುಟದಿಂದ ವಜಾ ಮಾಡಿದ್ದರು. ಪ್ರಧಾನಿಯವರ ಕ್ರಮಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಜನರು ಬೀದಿಗಿಳಿದು ಪ್ರತಿಭಟಿಸಿದ್ದರು. ಪ್ರತಿಭಟನೆಯು ತೀವ್ರಗೊಂಡಂತೆ ಅಧ್ಯಕ್ಷರ ಸೂಚನೆಯು ಹೊರಬಿದ್ದಿದೆ.</p>.<p class="title">ಪ್ರತಿಭಟನೆ, ಧರಣಿ ಹಿನ್ನೆಲೆಯಲ್ಲಿ ಇಸ್ರೇಲ್ನಾದ್ಯಂತ ಗೊಂದಲದ ಸ್ಥಿತಿ ಇದೆ. ಹೀಗಾಗಿ, ನ್ಯಾಯಾಂಗ ವ್ಯವಸ್ಥೆಯನ್ನು ಬದಲಿಸುವ ಕ್ರಮಗಳನ್ನು ತಾತ್ಕಾಲಿಕವಾಗಿ ಕೈಬಿಡಬೇಕು ಎಂದು ರಕ್ಷಣಾ ಸಚಿವರು ಕೋರಿದ್ದರು. ಇದರ ಹಿಂದೆಯೇ ಅವರ ವಜಾ ಆದೇಶ ಹೊರಬಿದ್ದಿತ್ತು.</p>.<p class="title">ಜನರು ಈಗಾಗಲೇ ನ್ಯಾಯಾಂಗ ವ್ಯವಸ್ಥೆ ಬದಲಿಸುವ ನಿರ್ಧಾರಗಳಿಗೆ ವಿರೋಧ ವ್ಯಕ್ತಪಡಿಸುತ್ತಿದ್ದು, ಸಚಿವರ ವಜಾ ಕ್ರಮದ ಬಳಿಕ ಆಕ್ರೋಶ ಇನ್ನಷ್ಟು ಭುಗಿಲೆದ್ದಿದೆ. ಪ್ರಧಾನಿ ನಿಲುವಿಗೆ ಉದ್ಯಮ, ಕಾನೂನು ಕ್ಷೇತ್ರ ಹಾಗೂ ಸೇನೆಯ ಪ್ರಮುಖರೂ ಆಕ್ಷೇಪ ವ್ಯಕ್ತಪಡಿಸಿದ್ದಾರೆ.</p>.<p class="title">ಪ್ರತಿಭಟನೆ: ಪ್ರಧಾನಿ ನೇತನ್ಯಾಹು ವಿರುದ್ಧ ಸಹಸ್ರಾರು ಜನರು ಬೀದಿಗಿಳಿದಿದ್ದು, ಟೆಲ್ ಅವಿವ್ನಲ್ಲಿ ಹೆದ್ದಾರಿಯನ್ನು ಅಡ್ಡಗಟ್ಟಿದ್ದರು. ಜೆರುಸಲೆಂನಲ್ಲಿ ಪ್ರಧಾನಿ ಖಾಸಗಿ ನಿವಾಸದ ಬಳಿ ಸೇರಿದ್ದ ಗುಂಪನ್ನು ಪೊಲೀಸರು ಚದುರಿಸಿದರು.</p>.<p>ಟೆಲ್ಅವೀವ್ಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯಲ್ಲಿ ಸಾವಿರಾರು ಜನ ಸೇರಿದ್ದು, ಇಸ್ರೇಲ್ನ ಧ್ವಜಗಳು ರಾರಾಜಿಸುತ್ತಿದ್ದವು. ಬೀರ್ಶೆಬಾ, ಹೈಫಾ, ಜೆರುಸಲೆಂನಲ್ಲಿಯೂ ಇಂತಹುದೇ ಚಿತ್ರವಿತ್ತು. ಪೊಲೀಸರು ಗುಂಪು ಚದುರಿಸಲು ಅಶ್ರುವಾಯು, ಜಲಫಿರಂಗಿ ಪ್ರಯೋಗಿಸಿದರು.</p>.<p>ರಕ್ಷಣಾ ಸಚಿವರ ವಜಾ ಕುರಿತು ಪ್ರಧಾನಿಕಚೇರಿ ಟ್ವೀಟ್ ಮಾಡಿದೆ. ಅದರ ಹಿಂದೆಯೇ ‘ನಿರಾಕರಣೆಯ ವಿರುದ್ಧ ನಾವೆಲ್ಲರೂ ಒಟ್ಟಾಗಿ ನಿಲ್ಲಬೇಕಿದೆ’ ಎಂದು ಪ್ರಧಾನಿ ನೇತನ್ಯಾಹು ಅವರು ಪ್ರತ್ಯೇಕವಾಗಿ ಟ್ವೀಟ್ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>