<p><strong>ಗಾಜಾ:</strong> ಕದನ ವಿರಾಮ ಘೋಷಿಸುವಂತೆ ಅಂತರರಾಷ್ಟ್ರೀಯ ಸಮುದಾಯ ಕರೆ ನೀಡುತ್ತಿರುವುದನ್ನು ಧಿಕ್ಕರಿಸಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಹಮಾಸ್ ಸರ್ವನಾಶವಾಗುವವರೆಗೆ ದಾಳಿ ಮುಂದುವರಿಸುವುದಾಗಿ ಮತ್ತೊಮ್ಮೆ ಹೇಳಿದ್ದಾರೆ.</p><p>ಉತ್ತರ ಗಾಜಾದಲ್ಲಿರುವ ಇಸ್ರೇಲ್ ಪಡೆಗಳ ಶಿಬಿರಕ್ಕೆ ಸೋಮವಾರ ಭೇಟಿ ನೀಡಿದ ಬೆಂಜಮಿನ್, ಸರ್ಕಾರವು ಶೀಘ್ರದಲ್ಲೇ ಯುದ್ಧವನ್ನು ನಿಲ್ಲಿಸಲಿದೆ ಎಂದು ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಸುದ್ದಿಯನ್ನು ಅಲ್ಲಗಳೆದಿದ್ದಾರೆ.</p><p>ಇದೇ ವೇಳೆ ಅವರು, ಸೇನಾ ಒತ್ತಡ ಹೇರದಿದ್ದರೆ, ಹಮಾಸ್ ಒತ್ತೆ ಇರಿಸಿಕೊಂಡಿರುವ ಇಸ್ರೇಲ್ ನಾಗರಿಕರನ್ನು ಮುಕ್ತಗೊಳಿಸಲು ಸಾಧ್ಯವೇ ಇಲ್ಲ. ನಾವು ದಾಳಿ ನಿಲ್ಲಿಸುವುದಿಲ್ಲ. ಕೊನೆವರೆಗೂ ಯುದ್ಧ ಮುಂದುವರಿಸುತ್ತೇವೆ ಎಂದಿದ್ದಾರೆ.</p><p>'ವಾಲ್ ಸ್ಟ್ರೀಟ್ ಜರ್ನಲ್' ಸೋಮವಾರ ಪ್ರಕಟಿಸಿರುವ ಸಂಪಾದಕೀಯದಲ್ಲಿ, 'ಶಾಂತಿ ಸ್ಥಾಪನೆಯಾಗಬೇಕಾದರೆ, ಹಮಾಸ್ ಸಂಪೂರ್ಣ ನಾಶವಾಗಬೇಕು, ಗಾಜಾ ನಿಶಸ್ತ್ರೀಕರಣಗೊಳ್ಳಬೇಕು ಮತ್ತು ಪ್ಯಾಲೆಸ್ಟೀನ್ ಸಮುದಾಯ ನಿರ್ಮೂಲನೆಗೊಳ್ಳಬೇಕು' ಎಂದು ನೆತನ್ಯಾಹು ಹೇಳಿರುವುದಾಗಿ ಉಲ್ಲೇಖಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಾಜಾ:</strong> ಕದನ ವಿರಾಮ ಘೋಷಿಸುವಂತೆ ಅಂತರರಾಷ್ಟ್ರೀಯ ಸಮುದಾಯ ಕರೆ ನೀಡುತ್ತಿರುವುದನ್ನು ಧಿಕ್ಕರಿಸಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಹಮಾಸ್ ಸರ್ವನಾಶವಾಗುವವರೆಗೆ ದಾಳಿ ಮುಂದುವರಿಸುವುದಾಗಿ ಮತ್ತೊಮ್ಮೆ ಹೇಳಿದ್ದಾರೆ.</p><p>ಉತ್ತರ ಗಾಜಾದಲ್ಲಿರುವ ಇಸ್ರೇಲ್ ಪಡೆಗಳ ಶಿಬಿರಕ್ಕೆ ಸೋಮವಾರ ಭೇಟಿ ನೀಡಿದ ಬೆಂಜಮಿನ್, ಸರ್ಕಾರವು ಶೀಘ್ರದಲ್ಲೇ ಯುದ್ಧವನ್ನು ನಿಲ್ಲಿಸಲಿದೆ ಎಂದು ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಸುದ್ದಿಯನ್ನು ಅಲ್ಲಗಳೆದಿದ್ದಾರೆ.</p><p>ಇದೇ ವೇಳೆ ಅವರು, ಸೇನಾ ಒತ್ತಡ ಹೇರದಿದ್ದರೆ, ಹಮಾಸ್ ಒತ್ತೆ ಇರಿಸಿಕೊಂಡಿರುವ ಇಸ್ರೇಲ್ ನಾಗರಿಕರನ್ನು ಮುಕ್ತಗೊಳಿಸಲು ಸಾಧ್ಯವೇ ಇಲ್ಲ. ನಾವು ದಾಳಿ ನಿಲ್ಲಿಸುವುದಿಲ್ಲ. ಕೊನೆವರೆಗೂ ಯುದ್ಧ ಮುಂದುವರಿಸುತ್ತೇವೆ ಎಂದಿದ್ದಾರೆ.</p><p>'ವಾಲ್ ಸ್ಟ್ರೀಟ್ ಜರ್ನಲ್' ಸೋಮವಾರ ಪ್ರಕಟಿಸಿರುವ ಸಂಪಾದಕೀಯದಲ್ಲಿ, 'ಶಾಂತಿ ಸ್ಥಾಪನೆಯಾಗಬೇಕಾದರೆ, ಹಮಾಸ್ ಸಂಪೂರ್ಣ ನಾಶವಾಗಬೇಕು, ಗಾಜಾ ನಿಶಸ್ತ್ರೀಕರಣಗೊಳ್ಳಬೇಕು ಮತ್ತು ಪ್ಯಾಲೆಸ್ಟೀನ್ ಸಮುದಾಯ ನಿರ್ಮೂಲನೆಗೊಳ್ಳಬೇಕು' ಎಂದು ನೆತನ್ಯಾಹು ಹೇಳಿರುವುದಾಗಿ ಉಲ್ಲೇಖಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>