<p><strong>ಇಲಾಟ್(ಇಸ್ರೇಲ್): </strong>ಮುಂಬೈನಲ್ಲಿ 2008ರ ನವೆಂಬರ್ 26ರಂದು ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟವರ ನೆನಪಿಗಾಗಿ ಸ್ಮಾರಕವನ್ನು ನಿರ್ಮಿಸಲು ಇಸ್ರೇಲ್ನ ದಕ್ಷಿಣದ ಕರಾವಳಿ ನಗರವಾದ ಇಲಾಟ್ನಲ್ಲಿರುವ ಸಿತಾರ್ ಸಂಸ್ಥೆಯು ಯೋಜನೆ ರೂಪಿಸಿದೆ.</p>.<p>2001ರ ಸೆ.11ರಂದು ಅಮೆರಿಕದಲ್ಲಿ ವಿಶ್ವ ವಾಣಿಜ್ಯ ಕೇಂದ್ರದ ಮೇಲೆ ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟವರ ಸ್ಮರಣಾರ್ಥ ಈಗಾಗಲೇ ಇಲಾಟ್ನಲ್ಲಿ ಸ್ಮಾರಕವನ್ನು ನಿರ್ಮಿಸಲಾಗಿದೆ. 2008ರಲ್ಲಿ ಪಾಕಿಸ್ತಾನ ಮೂಲದ ಲಷ್ಕರ್ ಎ ತಯಾಬಾದ 10 ಉಗ್ರರು ದಾಳಿ ನಡೆಸಿದ್ದ ಸಂದರ್ಭದಲ್ಲಿ ನಾರಿಮನ್ ಪಾಯಿಂಟ್ನಲ್ಲಿದ್ದ ‘ದಿ ಮುಂಬೈ ಚಾಬಾದ್ ಹೌಸ್’ ಅನ್ನೂ ಗುರಿಯಾಗಿಸಿದ್ದರು. ದಾಳಿಯಲ್ಲಿ ಆರು ಯೆಹೂದಿಗಳು ಸೇರಿದಂತೆ ಒಟ್ಟು 166 ಜನರು ಮೃತಪಟ್ಟಿದ್ದರು, 300ಕ್ಕೂ ಅಧಿಕ ಜನರು ಗಾಯಗೊಂಡಿದ್ದರು.</p>.<p>‘ದಾಳಿಯಲ್ಲಿ ಮೃತಪಟ್ಟವರ ಸ್ಮರಣಾರ್ಥ ಸ್ಮಾರಕ ನಿರ್ಮಣ ಕುರಿತು ಇಲಾಟ್ನ ಮೇಯರ್ ಮೀರ್ ಇತ್ಜಾಕ್ ಹಾ ಲೇವಿ ಅವರ ಜೊತೆ ಮಾತುಕತೆ ನಡೆಸಿದ್ದೇವೆ. ಈ ಕುರಿತು ಸಮಿತಿಯಲ್ಲಿ ನಿರ್ಧಾರ ಕೈಗೊಳ್ಳುವ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಅವರು ನೀಡಿದ್ದಾರೆ’ ಎಂದು ಇಲಾಟ್ನಲ್ಲಿರುವ ವಲಸೆ ಯೆಹೂದಿಗ ಸಿತಾರ್ ಸಂಸ್ಥೆಯ ಪ್ರತಿನಿಧಿಗಳು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಲಾಟ್(ಇಸ್ರೇಲ್): </strong>ಮುಂಬೈನಲ್ಲಿ 2008ರ ನವೆಂಬರ್ 26ರಂದು ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟವರ ನೆನಪಿಗಾಗಿ ಸ್ಮಾರಕವನ್ನು ನಿರ್ಮಿಸಲು ಇಸ್ರೇಲ್ನ ದಕ್ಷಿಣದ ಕರಾವಳಿ ನಗರವಾದ ಇಲಾಟ್ನಲ್ಲಿರುವ ಸಿತಾರ್ ಸಂಸ್ಥೆಯು ಯೋಜನೆ ರೂಪಿಸಿದೆ.</p>.<p>2001ರ ಸೆ.11ರಂದು ಅಮೆರಿಕದಲ್ಲಿ ವಿಶ್ವ ವಾಣಿಜ್ಯ ಕೇಂದ್ರದ ಮೇಲೆ ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟವರ ಸ್ಮರಣಾರ್ಥ ಈಗಾಗಲೇ ಇಲಾಟ್ನಲ್ಲಿ ಸ್ಮಾರಕವನ್ನು ನಿರ್ಮಿಸಲಾಗಿದೆ. 2008ರಲ್ಲಿ ಪಾಕಿಸ್ತಾನ ಮೂಲದ ಲಷ್ಕರ್ ಎ ತಯಾಬಾದ 10 ಉಗ್ರರು ದಾಳಿ ನಡೆಸಿದ್ದ ಸಂದರ್ಭದಲ್ಲಿ ನಾರಿಮನ್ ಪಾಯಿಂಟ್ನಲ್ಲಿದ್ದ ‘ದಿ ಮುಂಬೈ ಚಾಬಾದ್ ಹೌಸ್’ ಅನ್ನೂ ಗುರಿಯಾಗಿಸಿದ್ದರು. ದಾಳಿಯಲ್ಲಿ ಆರು ಯೆಹೂದಿಗಳು ಸೇರಿದಂತೆ ಒಟ್ಟು 166 ಜನರು ಮೃತಪಟ್ಟಿದ್ದರು, 300ಕ್ಕೂ ಅಧಿಕ ಜನರು ಗಾಯಗೊಂಡಿದ್ದರು.</p>.<p>‘ದಾಳಿಯಲ್ಲಿ ಮೃತಪಟ್ಟವರ ಸ್ಮರಣಾರ್ಥ ಸ್ಮಾರಕ ನಿರ್ಮಣ ಕುರಿತು ಇಲಾಟ್ನ ಮೇಯರ್ ಮೀರ್ ಇತ್ಜಾಕ್ ಹಾ ಲೇವಿ ಅವರ ಜೊತೆ ಮಾತುಕತೆ ನಡೆಸಿದ್ದೇವೆ. ಈ ಕುರಿತು ಸಮಿತಿಯಲ್ಲಿ ನಿರ್ಧಾರ ಕೈಗೊಳ್ಳುವ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಅವರು ನೀಡಿದ್ದಾರೆ’ ಎಂದು ಇಲಾಟ್ನಲ್ಲಿರುವ ವಲಸೆ ಯೆಹೂದಿಗ ಸಿತಾರ್ ಸಂಸ್ಥೆಯ ಪ್ರತಿನಿಧಿಗಳು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>