2009ರ ಮೇ 18ರಂದು ಶ್ರೀಲಂಕಾದ ಅಂದಿನ ಅಧ್ಯಕ್ಷ ಮಹಿಂದಾ ರಾಜಪಕ್ಸೆ ಅವರು 26 ವರ್ಷಗಳ ಯುದ್ಧ ಅಂತ್ಯಗೊಂಡಿದೆ ಎಂದು ಘೋಷಿಸಿದ್ದರು. ಇದರಲ್ಲಿ 1,00,000 ಕ್ಕೂ ಹೆಚ್ಚು ಜನರು ಕೊಲ್ಲಲ್ಪಟ್ಟಿದ್ದು, ಲಕ್ಷಾಂತರ ಮಂದಿ ಶ್ರೀಲಂಕನ್ನರು, ಮುಖ್ಯವಾಗಿ ಅಲ್ಪಸಂಖ್ಯಾತ ತಮಿಳರು ನೆಲೆ ಕಳೆದುಕೊಂಡಿದ್ದಾರೆ ಎಂದು ಹೇಳಿದ್ದರು.