<p><strong>ಮ್ಯೂನಿಚ್ (ಪಿಟಿಐ):</strong> ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರು ಕೆನಡಾದ ವಿದೇಶಾಂಗ ಸಚಿವೆ ಮೆಲಾನಿ ಜೊಲಿ ಅವರನ್ನು ಭೇಟಿಯಾಗಿ, ಪ್ರಚಲಿತ ವಿದ್ಯಮಾನ ಮತ್ತು ದ್ವಿಪಕ್ಷೀಯ ಬಾಂಧವ್ಯ ಕುರಿತು ಚರ್ಚಿಸಿದ್ದಾರೆ. </p>.<p>ಕೆನಡಾದಲ್ಲಿ ಸಿಖ್ ಪ್ರತ್ಯೇಕತಾವಾದಿ ಹತ್ಯೆ ಕುರಿತು ಉಭಯ ರಾಷ್ಟ್ರಗಳ ನಡುವೆ ರಾಜತಾಂತ್ರಿಕ ಭಿನ್ನಾಭಿಪ್ರಾಯ ಮೂಡಿರುವ ಸಂದರ್ಭದಲ್ಲಿಯೇ ಈ ಬೆಳವಣಿಗೆ ನಡೆದಿದೆ. </p>.<p>ಜರ್ಮನಿಯಲ್ಲಿ ಆಯೋಜನೆಗೊಂಡಿರುವ ಮ್ಯೂನಿಚ್ ಭದ್ರತಾ ಸಮ್ಮೇಳನದಲ್ಲಿ ಭಾಗಿಯಾಗಿದ್ದ ಸಂದರ್ಭದಲ್ಲಿ ಶುಕ್ರವಾರ ಈ ಇಬ್ಬರೂ ಮುಖಂಡರು ಭೇಟಿಯಾಗಿ ಚರ್ಚಿಸಿದರು.</p>.<p>ಈ ಭೇಟಿ ಕುರಿತಂತೆ ಉಭಯ ನಾಯಕರು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದಾರೆ.</p>.<p>ಜೂನ್ 18ರಂದು ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದಲ್ಲಿ ನಡೆದಿದ್ದ ನಿಜ್ಜಾರ್ ಹತ್ಯೆಯಲ್ಲಿ ಭಾರತೀಯ ಏಜೆಂಟ್ ಪಾತ್ರವಿದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡಿಯು ಆರೋಪಿಸಿದ್ದರು. ಭಾರತ ಸರ್ಕಾರ ಇದನ್ನು ಸ್ಪಷ್ಟವಾಗಿ ತಳ್ಳಿಹಾಕಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮ್ಯೂನಿಚ್ (ಪಿಟಿಐ):</strong> ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರು ಕೆನಡಾದ ವಿದೇಶಾಂಗ ಸಚಿವೆ ಮೆಲಾನಿ ಜೊಲಿ ಅವರನ್ನು ಭೇಟಿಯಾಗಿ, ಪ್ರಚಲಿತ ವಿದ್ಯಮಾನ ಮತ್ತು ದ್ವಿಪಕ್ಷೀಯ ಬಾಂಧವ್ಯ ಕುರಿತು ಚರ್ಚಿಸಿದ್ದಾರೆ. </p>.<p>ಕೆನಡಾದಲ್ಲಿ ಸಿಖ್ ಪ್ರತ್ಯೇಕತಾವಾದಿ ಹತ್ಯೆ ಕುರಿತು ಉಭಯ ರಾಷ್ಟ್ರಗಳ ನಡುವೆ ರಾಜತಾಂತ್ರಿಕ ಭಿನ್ನಾಭಿಪ್ರಾಯ ಮೂಡಿರುವ ಸಂದರ್ಭದಲ್ಲಿಯೇ ಈ ಬೆಳವಣಿಗೆ ನಡೆದಿದೆ. </p>.<p>ಜರ್ಮನಿಯಲ್ಲಿ ಆಯೋಜನೆಗೊಂಡಿರುವ ಮ್ಯೂನಿಚ್ ಭದ್ರತಾ ಸಮ್ಮೇಳನದಲ್ಲಿ ಭಾಗಿಯಾಗಿದ್ದ ಸಂದರ್ಭದಲ್ಲಿ ಶುಕ್ರವಾರ ಈ ಇಬ್ಬರೂ ಮುಖಂಡರು ಭೇಟಿಯಾಗಿ ಚರ್ಚಿಸಿದರು.</p>.<p>ಈ ಭೇಟಿ ಕುರಿತಂತೆ ಉಭಯ ನಾಯಕರು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದಾರೆ.</p>.<p>ಜೂನ್ 18ರಂದು ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದಲ್ಲಿ ನಡೆದಿದ್ದ ನಿಜ್ಜಾರ್ ಹತ್ಯೆಯಲ್ಲಿ ಭಾರತೀಯ ಏಜೆಂಟ್ ಪಾತ್ರವಿದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡಿಯು ಆರೋಪಿಸಿದ್ದರು. ಭಾರತ ಸರ್ಕಾರ ಇದನ್ನು ಸ್ಪಷ್ಟವಾಗಿ ತಳ್ಳಿಹಾಕಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>