<p><strong>ಟೋಕಿಯೊ:</strong> ‘ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರ ಜಪಾನ್ ಭೇಟಿಯು ಉಭಯ ದೇಶಗಳ ಮಧ್ಯೆ ಬಾಂಧವ್ಯ ವೃದ್ಧಿಗೆ ಸಕಾಲದಲ್ಲಿ ಸೂಕ್ತ ಅವಕಾಶಗಳನ್ನು ಒದಗಿಸಿದೆ’ ಎಂದು ವಿದೇಶಾಂಗ ಸಚಿವಾಲಯವು ಹೇಳಿದೆ.</p>.<p>ಈ ಕುರಿತು ಅಧಿಕೃತ ಹೇಳಿಕೆ ಬಿಡುಗಡೆ ಮಾಡಿರುವ ಸಚಿವಾಲಯವು, ಉಭಯ ದೇಶಗಳ ನಡುವಿನ ವಿಶೇಷ ಕಾರ್ಯತಂತ್ರ ಸಹಭಾಗಿತ್ವವನ್ನು ಬಲಪಡಿಸಲು ಹಲವು ಮಾರ್ಗಗಳನ್ನು ಮುಕ್ತವಾಗಿರಿಸಿದೆ ಎಂದು ಪ್ರತಿಪಾದಿಸಿದೆ.</p>.<p>ಈಚೆಗೆ ಜಪಾನ್ಗೆ ಮೂರು ದಿನ ಪ್ರವಾಸ ಕೈಗೊಂಡಿದ್ದ ಜೈಶಂಕರ್ ಅವರು, ಅಲ್ಲಿನ ಪ್ರಧಾನಮಂತ್ರಿ ಫುಮಿಯೊ ಕಿಷಿಡಾ ಅವರನ್ನು ಭೇಟಿಯಾಗಿದ್ದರು. ಜೊತೆಗೆ ಹಲವು ಪ್ರಮುಖ ಸಭೆಗಳಲ್ಲಿಯೂ ಭಾಗವಹಿಸಿದ್ದರು.</p>.<p>ಉಭಯ ದೇಶಗಳ ಬಾಂಧವ್ಯ ಕುರಿತು ಹಾಗೂ ಜಾಗತಿಕವಾಗಿ ಹೊಂದಿರುವ ಸಹಕಾರ ಕುರಿತು ಕಿಷಿಡಾ ಅವರಿಗೆ ವಿವರಣೆಯನ್ನು ನೀಡಿದ್ದ ಜೈಶಂಕರ್, ಇದನ್ನು ಇನ್ನಷ್ಟು ಬಲಪಡಿಸಲು ಸಹಕಾರ ಕೋರಿದ್ದರು.</p>.<p>ಜಪಾನ್ನ ವಿದೇಶಾಂಗ ಸಚಿವ ಯೊಕೊ ಕಮಿಕವಾ ಜೊತೆಗೆ 16ನೇ ಭಾರತ–ಜಪಾನ್ ಕಾರ್ಯತಂತ್ರ ಮಾತುಕತೆ ನಡೆಸಿದ್ದ ಅವರು, ವ್ಯಾಪಾರ, ಹೂಡಿಕೆ, ಮೂಲಸೌಕರ್ಯ, ತಂತ್ರಜ್ಞಾನ ಸಹಕಾರ, ಆಭಿವೃದ್ಧಿ ಸಹಯೋಗ, ರಕ್ಷಣೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರ ಕುರಿತು ಚರ್ಚಿಸಿದ್ದರು.</p>.<p>ಜೈಶಂಕರ್ ಅವರ ಭೇಟಿಯು ಉಭಯ ದೇಶಗಳ ನಡುವಿನ ಹಾಲಿ ಸಂಬಂಧದ ಜೊತೆಗೆ, ಇನ್ನಷ್ಟು ಇನ್ನಷ್ಟು ವಿಸ್ತರಿಸುವ ನಿಟ್ಟಿನಲ್ಲಿ ಸಹಕಾರಿಯಾಗಿದೆ ಎಂದು ಸಚಿವಾಲಯವು ಹೇಳಿಕೆಯಲ್ಲಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಟೋಕಿಯೊ:</strong> ‘ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರ ಜಪಾನ್ ಭೇಟಿಯು ಉಭಯ ದೇಶಗಳ ಮಧ್ಯೆ ಬಾಂಧವ್ಯ ವೃದ್ಧಿಗೆ ಸಕಾಲದಲ್ಲಿ ಸೂಕ್ತ ಅವಕಾಶಗಳನ್ನು ಒದಗಿಸಿದೆ’ ಎಂದು ವಿದೇಶಾಂಗ ಸಚಿವಾಲಯವು ಹೇಳಿದೆ.</p>.<p>ಈ ಕುರಿತು ಅಧಿಕೃತ ಹೇಳಿಕೆ ಬಿಡುಗಡೆ ಮಾಡಿರುವ ಸಚಿವಾಲಯವು, ಉಭಯ ದೇಶಗಳ ನಡುವಿನ ವಿಶೇಷ ಕಾರ್ಯತಂತ್ರ ಸಹಭಾಗಿತ್ವವನ್ನು ಬಲಪಡಿಸಲು ಹಲವು ಮಾರ್ಗಗಳನ್ನು ಮುಕ್ತವಾಗಿರಿಸಿದೆ ಎಂದು ಪ್ರತಿಪಾದಿಸಿದೆ.</p>.<p>ಈಚೆಗೆ ಜಪಾನ್ಗೆ ಮೂರು ದಿನ ಪ್ರವಾಸ ಕೈಗೊಂಡಿದ್ದ ಜೈಶಂಕರ್ ಅವರು, ಅಲ್ಲಿನ ಪ್ರಧಾನಮಂತ್ರಿ ಫುಮಿಯೊ ಕಿಷಿಡಾ ಅವರನ್ನು ಭೇಟಿಯಾಗಿದ್ದರು. ಜೊತೆಗೆ ಹಲವು ಪ್ರಮುಖ ಸಭೆಗಳಲ್ಲಿಯೂ ಭಾಗವಹಿಸಿದ್ದರು.</p>.<p>ಉಭಯ ದೇಶಗಳ ಬಾಂಧವ್ಯ ಕುರಿತು ಹಾಗೂ ಜಾಗತಿಕವಾಗಿ ಹೊಂದಿರುವ ಸಹಕಾರ ಕುರಿತು ಕಿಷಿಡಾ ಅವರಿಗೆ ವಿವರಣೆಯನ್ನು ನೀಡಿದ್ದ ಜೈಶಂಕರ್, ಇದನ್ನು ಇನ್ನಷ್ಟು ಬಲಪಡಿಸಲು ಸಹಕಾರ ಕೋರಿದ್ದರು.</p>.<p>ಜಪಾನ್ನ ವಿದೇಶಾಂಗ ಸಚಿವ ಯೊಕೊ ಕಮಿಕವಾ ಜೊತೆಗೆ 16ನೇ ಭಾರತ–ಜಪಾನ್ ಕಾರ್ಯತಂತ್ರ ಮಾತುಕತೆ ನಡೆಸಿದ್ದ ಅವರು, ವ್ಯಾಪಾರ, ಹೂಡಿಕೆ, ಮೂಲಸೌಕರ್ಯ, ತಂತ್ರಜ್ಞಾನ ಸಹಕಾರ, ಆಭಿವೃದ್ಧಿ ಸಹಯೋಗ, ರಕ್ಷಣೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರ ಕುರಿತು ಚರ್ಚಿಸಿದ್ದರು.</p>.<p>ಜೈಶಂಕರ್ ಅವರ ಭೇಟಿಯು ಉಭಯ ದೇಶಗಳ ನಡುವಿನ ಹಾಲಿ ಸಂಬಂಧದ ಜೊತೆಗೆ, ಇನ್ನಷ್ಟು ಇನ್ನಷ್ಟು ವಿಸ್ತರಿಸುವ ನಿಟ್ಟಿನಲ್ಲಿ ಸಹಕಾರಿಯಾಗಿದೆ ಎಂದು ಸಚಿವಾಲಯವು ಹೇಳಿಕೆಯಲ್ಲಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>