<p><strong>ಕ್ವಾಲಾಲಂಪುರ</strong>: ‘ಭಾರತ –ಮಲೇಷ್ಯಾ ನಡುವೆ ದ್ವಿಪಕ್ಷೀಯ ಬಾಂಧವ್ಯ ಬಲಪಡಿಸಲು ಈಚೆಗೆ ವಿದೇಶಾಂಗ ಸಚಿವ ಎಸ್.ಜೈಶಂಕರ್ ಆ ದೇಶದ ಉನ್ನತ ನಾಯಕರ ಜೊತೆಗೆ ಈಚೆಗೆ ನಡೆಸಿದ ಚರ್ಚೆ ನೆರವಾಗಿದೆ’ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.</p>.<p>ಜೈಶಂಕರ್ ಅವರು ಸಿಂಗಪುರ, ಫಿಲಿಪ್ಪೀನ್ಸ್, ಮಲೇಷ್ಯಾಗೆ ಇತ್ತೀಚೆಗೆ ಪ್ರವಾಸ ಕೈಗೊಂಡಿದ್ದರು. ಇದರ ಭಾಗವಾಗಿ ಮಾರ್ಚ್ 27ರಿಂದ ಎರಡು ದಿನ ಕ್ವಾಲಾಲಂಪುರಕ್ಕೆ ಭೇಟಿ ನೀಡಿದ್ದರು. ಮಲೇಷ್ಯಾ ಪ್ರಧಾನಿ ಅನ್ವರ್ ಬಿನ್ ಇಬ್ರಾಹಿಂ, ಇತರ ನಾಯಕರೊಂದಿಗೆ ಚರ್ಚಿಸಿದ್ದರು.</p>.<p>ವಿದೇಶಾಂಗ ಸಚಿವಾಲಯ ಈ ಸಂಬಂಧ ಹೇಳಿಕೆ ನೀಡಿದೆ. ‘ಭಾರತದ ಐಐಟಿ ಶಾಖೆಯನ್ನು ಮಲೇಷ್ಯಾದಲ್ಲಿ ಆರಂಭಿಸಲು ಅಗತ್ಯ ಸಹಕಾರ ನೀಡುವ ಭರವಸೆಯನ್ನು ಭೇಟಿಯ ಸಂದರ್ಭದಲ್ಲಿ ಅನ್ವರ್ ಅವರು ನೀಡಿದ್ದಾರೆ’ ಎಂದು ಉಲ್ಲೇಖಿಸಿದೆ.</p>.<p>‘ಮಲೇಷ್ಯಾದಲ್ಲಿ ಅಕ್ಕಿ ಕೊರತೆಯಿದ್ದಾಗ ಭಾರತದಿಂದ ಹೆಚ್ಚಿನ ಪ್ರಮಾಣದಲ್ಲಿ ಅಕ್ಕಿ ಆಮದಿಗೆ ಪ್ರಧಾನಿ ನರೇಂದ್ರ ಮೋದಿ ಸಹಕರಿಸಿದ್ದರು. ಜನರ ಅನುಕೂಲಕ್ಕಾಗಿ ಉಭಯ ದೇಶಗಳ ಬಾಂಧವ್ಯ ಇನ್ನಷ್ಟು ದೃಢವಾಗಲಿ’ ಎಂದು ಮಲೇಷ್ಯಾ ಪ್ರಧಾನಿ ಆಶಿಸಿದರು ಎಂದು ತಿಳಿಸಿದೆ.</p>.<p>ಮಲೇಷ್ಯಾದ ಪ್ರಧಾನಿ ಅವರಲ್ಲದೆ ವಿದೇಶಾಂಗ ಸಚಿವ ಮೊಹಮ್ಮದ್ ಬಿನ್ ಹಾಜಿ ಹಸನ್ ಹಾಗೂ ಸಚಿವ ಗೋಬಿಂದ್ ಸಿಂಗ್ ದೇವ್ ಅವರನ್ನೂ ಜೈಶಂಕರ್ ಭೇಟಿಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕ್ವಾಲಾಲಂಪುರ</strong>: ‘ಭಾರತ –ಮಲೇಷ್ಯಾ ನಡುವೆ ದ್ವಿಪಕ್ಷೀಯ ಬಾಂಧವ್ಯ ಬಲಪಡಿಸಲು ಈಚೆಗೆ ವಿದೇಶಾಂಗ ಸಚಿವ ಎಸ್.ಜೈಶಂಕರ್ ಆ ದೇಶದ ಉನ್ನತ ನಾಯಕರ ಜೊತೆಗೆ ಈಚೆಗೆ ನಡೆಸಿದ ಚರ್ಚೆ ನೆರವಾಗಿದೆ’ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.</p>.<p>ಜೈಶಂಕರ್ ಅವರು ಸಿಂಗಪುರ, ಫಿಲಿಪ್ಪೀನ್ಸ್, ಮಲೇಷ್ಯಾಗೆ ಇತ್ತೀಚೆಗೆ ಪ್ರವಾಸ ಕೈಗೊಂಡಿದ್ದರು. ಇದರ ಭಾಗವಾಗಿ ಮಾರ್ಚ್ 27ರಿಂದ ಎರಡು ದಿನ ಕ್ವಾಲಾಲಂಪುರಕ್ಕೆ ಭೇಟಿ ನೀಡಿದ್ದರು. ಮಲೇಷ್ಯಾ ಪ್ರಧಾನಿ ಅನ್ವರ್ ಬಿನ್ ಇಬ್ರಾಹಿಂ, ಇತರ ನಾಯಕರೊಂದಿಗೆ ಚರ್ಚಿಸಿದ್ದರು.</p>.<p>ವಿದೇಶಾಂಗ ಸಚಿವಾಲಯ ಈ ಸಂಬಂಧ ಹೇಳಿಕೆ ನೀಡಿದೆ. ‘ಭಾರತದ ಐಐಟಿ ಶಾಖೆಯನ್ನು ಮಲೇಷ್ಯಾದಲ್ಲಿ ಆರಂಭಿಸಲು ಅಗತ್ಯ ಸಹಕಾರ ನೀಡುವ ಭರವಸೆಯನ್ನು ಭೇಟಿಯ ಸಂದರ್ಭದಲ್ಲಿ ಅನ್ವರ್ ಅವರು ನೀಡಿದ್ದಾರೆ’ ಎಂದು ಉಲ್ಲೇಖಿಸಿದೆ.</p>.<p>‘ಮಲೇಷ್ಯಾದಲ್ಲಿ ಅಕ್ಕಿ ಕೊರತೆಯಿದ್ದಾಗ ಭಾರತದಿಂದ ಹೆಚ್ಚಿನ ಪ್ರಮಾಣದಲ್ಲಿ ಅಕ್ಕಿ ಆಮದಿಗೆ ಪ್ರಧಾನಿ ನರೇಂದ್ರ ಮೋದಿ ಸಹಕರಿಸಿದ್ದರು. ಜನರ ಅನುಕೂಲಕ್ಕಾಗಿ ಉಭಯ ದೇಶಗಳ ಬಾಂಧವ್ಯ ಇನ್ನಷ್ಟು ದೃಢವಾಗಲಿ’ ಎಂದು ಮಲೇಷ್ಯಾ ಪ್ರಧಾನಿ ಆಶಿಸಿದರು ಎಂದು ತಿಳಿಸಿದೆ.</p>.<p>ಮಲೇಷ್ಯಾದ ಪ್ರಧಾನಿ ಅವರಲ್ಲದೆ ವಿದೇಶಾಂಗ ಸಚಿವ ಮೊಹಮ್ಮದ್ ಬಿನ್ ಹಾಜಿ ಹಸನ್ ಹಾಗೂ ಸಚಿವ ಗೋಬಿಂದ್ ಸಿಂಗ್ ದೇವ್ ಅವರನ್ನೂ ಜೈಶಂಕರ್ ಭೇಟಿಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>