ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೈಶಂಕರ್ ಭೇಟಿಯಿಂದ ಭಾರತ– ಮಲೇಷ್ಯಾ ಬಾಂಧವ್ಯ ಇನ್ನಷ್ಟು ದೃಢ

Published 28 ಮಾರ್ಚ್ 2024, 19:04 IST
Last Updated 28 ಮಾರ್ಚ್ 2024, 19:04 IST
ಅಕ್ಷರ ಗಾತ್ರ

ಕ್ವಾಲಾಲಂಪುರ: ‘ಭಾರತ –ಮಲೇಷ್ಯಾ ನಡುವೆ ದ್ವಿಪಕ್ಷೀಯ ಬಾಂಧವ್ಯ ಬಲಪಡಿಸಲು ಈಚೆಗೆ ವಿದೇಶಾಂಗ ಸಚಿವ ಎಸ್‌.ಜೈಶಂಕರ್  ಆ ದೇಶದ ಉನ್ನತ ನಾಯಕರ ಜೊತೆಗೆ ಈಚೆಗೆ ನಡೆಸಿದ ಚರ್ಚೆ ನೆರವಾಗಿದೆ’ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.

ಜೈಶಂಕರ್‌ ಅವರು ಸಿಂಗಪುರ, ಫಿಲಿಪ್ಪೀನ್ಸ್‌, ಮಲೇಷ್ಯಾಗೆ ಇತ್ತೀಚೆಗೆ ಪ್ರವಾಸ ಕೈಗೊಂಡಿದ್ದರು. ಇದರ ಭಾಗವಾಗಿ ಮಾರ್ಚ್‌ 27ರಿಂದ ಎರಡು ದಿನ ಕ್ವಾಲಾಲಂಪುರಕ್ಕೆ ಭೇಟಿ ನೀಡಿದ್ದರು. ಮಲೇಷ್ಯಾ ಪ್ರಧಾನಿ ಅನ್ವರ್ ಬಿನ್ ಇಬ್ರಾಹಿಂ, ಇತರ ನಾಯಕರೊಂದಿಗೆ ಚರ್ಚಿಸಿದ್ದರು.

ವಿದೇಶಾಂಗ ಸಚಿವಾಲಯ ಈ ಸಂಬಂಧ ಹೇಳಿಕೆ ನೀಡಿದೆ. ‘ಭಾರತದ ಐಐಟಿ ಶಾಖೆಯನ್ನು ಮಲೇಷ್ಯಾದಲ್ಲಿ ಆರಂಭಿಸಲು ಅಗತ್ಯ ಸಹಕಾರ ನೀಡುವ ಭರವಸೆಯನ್ನು ಭೇಟಿಯ ಸಂದರ್ಭದಲ್ಲಿ ಅನ್ವರ್ ಅವರು ನೀಡಿದ್ದಾರೆ’ ಎಂದು ಉಲ್ಲೇಖಿಸಿದೆ.

‘ಮಲೇಷ್ಯಾದಲ್ಲಿ ಅಕ್ಕಿ ಕೊರತೆಯಿದ್ದಾಗ ಭಾರತದಿಂದ ಹೆಚ್ಚಿನ ಪ್ರಮಾಣದಲ್ಲಿ ಅಕ್ಕಿ ಆಮದಿಗೆ ಪ್ರಧಾನಿ ನರೇಂದ್ರ ಮೋದಿ ಸಹಕರಿಸಿದ್ದರು. ಜನರ ಅನುಕೂಲಕ್ಕಾಗಿ ಉಭಯ ದೇಶಗಳ ಬಾಂಧವ್ಯ ಇನ್ನಷ್ಟು ದೃಢವಾಗಲಿ’ ಎಂದು ಮಲೇಷ್ಯಾ ಪ್ರಧಾನಿ ಆಶಿಸಿದರು ಎಂದು ತಿಳಿಸಿದೆ.

ಮಲೇಷ್ಯಾದ ಪ್ರಧಾನಿ ಅವರಲ್ಲದೆ ವಿದೇಶಾಂಗ ಸಚಿವ ಮೊಹಮ್ಮದ್ ಬಿನ್‌ ಹಾಜಿ ಹಸನ್ ಹಾಗೂ ಸಚಿವ ಗೋಬಿಂದ್ ಸಿಂಗ್ ದೇವ್ ಅವರನ್ನೂ ಜೈಶಂಕರ್ ಭೇಟಿಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT