<p><strong>ಢಾಕಾ:</strong> ಬಾಂಗ್ಲಾದೇಶದ ಜಮಾತ್-ಎ-ಇಸ್ಲಾಮಿ ಪಕ್ಷದ ನೋಂದಣಿಯನ್ನು ಮರುಸ್ಥಾಪಿಸುವಂತೆ ಸುಪ್ರೀಂಕೋರ್ಟ್ ಭಾನುವಾರ ಚುನಾವಣಾ ಆಯೋಗಕ್ಕೆ ಆದೇಶಿಸಿದೆ.</p><p>ಈ ಮೂಲಕ ಭವಿಷ್ಯದ ಚುನಾವಣೆಗಳಲ್ಲಿ ಭಾಗವಹಿಸಲು ಅನುವು ಮಾಡಿಕೊಟ್ಟಿದೆ. ಮುಖ್ಯ ನ್ಯಾಯಮೂರ್ತಿ ಸೈಯದ್ ಅಹ್ಮದ್ ಅವರಿದ್ದ ಪೀಠ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದೆ.</p><p>ಪಕ್ಷವು ತನ್ನ ‘ಸ್ಕೇಲ್‘ ಚಿಹ್ನೆಯನ್ನು ಬಳಸಿ ಚುನಾವಣೆಗಳಲ್ಲಿ ಸ್ಪರ್ಧಿಸಬಹುದೇ ಎಂಬ ವಿಚಾರ ಚುನಾವಣಾ ಆಯೋಗಕ್ಕೆ ಬಿಟ್ಟಿದ್ದು ಎಂದು ನ್ಯಾಯಾಲಯ ಹೇಳಿದೆ.</p><p>ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ಸರ್ಕಾರ ಆಗಸ್ಟ್ 5, 2024ರಂದು ಜಮಾತ್-ಎ-ಇಸ್ಲಾಮಿ ಪಕ್ಷದ ಮೇಲೆ ಸಂಪೂರ್ಣ ನಿಷೇಧ ಹೇರಿತು. ನಂತರ ಬಂದ ಮಧ್ಯಂತರ ಸರ್ಕಾರವು ಅದರ ಮೇಲಿನ ನಿಷೇಧವನ್ನು ತೆಗೆದುಹಾಕಿದ ಸುಮಾರು ಎಂಟು ತಿಂಗಳ ಬಳಿಕ ಸುಪ್ರೀಂಕೋರ್ಟ್ ಪಕ್ಷದ ನೋಂದಣಿಯನ್ನು ಮರುಸ್ಥಾಪಿಸುವಂತೆ ಆದೇಶಿಸಿದೆ.</p><p> 2013ರಲ್ಲಿ ಸುಪ್ರೀಂಕೋರ್ಟ್ ಜಮಾತ್-ಎ-ಇಸ್ಲಾಮಿ ನೋಂದಣಿಯನ್ನು ರದ್ದುಗೊಳಿಸಿತು, ಪಕ್ಷವು ರಾಷ್ಟ್ರೀಯ ಚುನಾವಣೆಗಳಲ್ಲಿ ಸ್ಪರ್ಧಿಸಲು ಅನರ್ಹವಾಗಿದೆ ಎಂದು ತೀರ್ಪು ನೀಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಢಾಕಾ:</strong> ಬಾಂಗ್ಲಾದೇಶದ ಜಮಾತ್-ಎ-ಇಸ್ಲಾಮಿ ಪಕ್ಷದ ನೋಂದಣಿಯನ್ನು ಮರುಸ್ಥಾಪಿಸುವಂತೆ ಸುಪ್ರೀಂಕೋರ್ಟ್ ಭಾನುವಾರ ಚುನಾವಣಾ ಆಯೋಗಕ್ಕೆ ಆದೇಶಿಸಿದೆ.</p><p>ಈ ಮೂಲಕ ಭವಿಷ್ಯದ ಚುನಾವಣೆಗಳಲ್ಲಿ ಭಾಗವಹಿಸಲು ಅನುವು ಮಾಡಿಕೊಟ್ಟಿದೆ. ಮುಖ್ಯ ನ್ಯಾಯಮೂರ್ತಿ ಸೈಯದ್ ಅಹ್ಮದ್ ಅವರಿದ್ದ ಪೀಠ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದೆ.</p><p>ಪಕ್ಷವು ತನ್ನ ‘ಸ್ಕೇಲ್‘ ಚಿಹ್ನೆಯನ್ನು ಬಳಸಿ ಚುನಾವಣೆಗಳಲ್ಲಿ ಸ್ಪರ್ಧಿಸಬಹುದೇ ಎಂಬ ವಿಚಾರ ಚುನಾವಣಾ ಆಯೋಗಕ್ಕೆ ಬಿಟ್ಟಿದ್ದು ಎಂದು ನ್ಯಾಯಾಲಯ ಹೇಳಿದೆ.</p><p>ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ಸರ್ಕಾರ ಆಗಸ್ಟ್ 5, 2024ರಂದು ಜಮಾತ್-ಎ-ಇಸ್ಲಾಮಿ ಪಕ್ಷದ ಮೇಲೆ ಸಂಪೂರ್ಣ ನಿಷೇಧ ಹೇರಿತು. ನಂತರ ಬಂದ ಮಧ್ಯಂತರ ಸರ್ಕಾರವು ಅದರ ಮೇಲಿನ ನಿಷೇಧವನ್ನು ತೆಗೆದುಹಾಕಿದ ಸುಮಾರು ಎಂಟು ತಿಂಗಳ ಬಳಿಕ ಸುಪ್ರೀಂಕೋರ್ಟ್ ಪಕ್ಷದ ನೋಂದಣಿಯನ್ನು ಮರುಸ್ಥಾಪಿಸುವಂತೆ ಆದೇಶಿಸಿದೆ.</p><p> 2013ರಲ್ಲಿ ಸುಪ್ರೀಂಕೋರ್ಟ್ ಜಮಾತ್-ಎ-ಇಸ್ಲಾಮಿ ನೋಂದಣಿಯನ್ನು ರದ್ದುಗೊಳಿಸಿತು, ಪಕ್ಷವು ರಾಷ್ಟ್ರೀಯ ಚುನಾವಣೆಗಳಲ್ಲಿ ಸ್ಪರ್ಧಿಸಲು ಅನರ್ಹವಾಗಿದೆ ಎಂದು ತೀರ್ಪು ನೀಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>