ಚುನಾವಣೆಯಲ್ಲಿ ಭಾರಿ ಪ್ರಮಾಣದಲ್ಲಿ ವಂಚನೆ ನಡೆದಿದೆ ಎಂದು ವಿಡೊಡೊ ಪ್ರತಿಸ್ಪರ್ಧಿ ಪ್ರಬೊವೊ ಸುಬಿಯಾಂತೊ ಆರೋಪಿಸಿದ್ದು, ಇದರ ವಿರುದ್ಧ ಜನರು ದಂಗೆ ಏಳುವರು ಎಂದು ಎಚ್ಚರಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜಧಾನಿ ಜಕಾರ್ತದಲ್ಲಿ ಮುಂಜಾಗ್ರತಾ ಕ್ರಮವಾಗಿ ಸಾವಿರಾರು ಜನ ಯೋಧರನ್ನು ನಿಯೋಜನೆ ಮಾಡಲಾಗಿದೆ.