<p><strong>ವಾಷಿಂಗ್ಟನ್:</strong> ’ಪ್ರತಿ ದಿನವೂ ಜನರಿಗಾಗಿ ನ್ಯಾಯದ ಪರ ಹೋರಾಟ ನಡೆಸುತ್ತಿರುವ ಸೆನೆಟರ್ ಕಮಲಾ ಹ್ಯಾರಿಸ್ ಅವರು ಅದೇ ಜನರಿಂದಲೇ ಅಮೆರಿಕದ ಶ್ರೇಷ್ಠ ಉಪಾಧ್ಯಕ್ಷೆಯಾಗಿ ಆಯ್ಕೆಯಾಗುತ್ತಾರೆ’ ಎಂದು ಕಮಲಾ ಅವರ ಪತಿ ಡೌಗ್ಲಾಸ್ ಎಮ್ಹಾಫ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p>.<p>ಕಮಲಾ ಹ್ಯಾರಿಸ್ ಅವರನ್ನು ಅಧಿಕೃತವಾಗಿ ಡೆಮಾಕ್ರಟಿಕ್ ಪಕ್ಷದಿಂದ ಅಮೆರಿಕದ ಉಪಾಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗಿ ಘೋಷಿಸಿದ ನಂತರ ನಡೆದ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿದರು.</p>.<p>’ಕಮಲಾ ಉಪಾಧ್ಯಕ್ಷೆಯಾಗಿ ಆಯ್ಕೆಯಾಗುತ್ತಾರೆ. ಕಮಲಾ ಮತ್ತು ಬೈಡನ್ ಜೋಡಿ ಉತ್ತಮ ಕಾರ್ಯ ಮಾಡುತ್ತಾರೆ’ ಎಂದು ಎಮ್ಹಾಫ್ ವಿಶ್ವಾಸ ವ್ಯಕ್ತಪಡಿಸಿದರು.</p>.<p>ನ್ಯೂಯಾರ್ಕ್ನ ಬ್ರೂಕ್ಲಿನ್ ಮೂಲದ ಎಮ್ಹಾಫ್, ಲಾಸ್ಏಂಜಲೀಸ್ನಲ್ಲಿ ಎಂಟರ್ಟೈನ್ಮೆಂಟ್ ಇಂಡಸ್ಟ್ರಿಯಲ್ಲಿ ಅಟಾರ್ನಿಯಾಗಿದ್ದಾರೆ. ಸದ್ಯ ಪತ್ನಿ ಪರ ಚುನಾವಣಾ ಪ್ರಚಾರಕ್ಕಾಗಿ ಕೆಲಸಕ್ಕೆ ರಜೆ ಹಾಕಿದ್ದಾರೆ. ಚುನಾವಣಾ ಪ್ರಚಾರದ ಸಮಾರಂಭದಲ್ಲಿ ಭಾಗವಹಿಸುತ್ತಿದ್ದಾರೆ.</p>.<p>’ನಾವು ಈ ಚುನಾವಣೆಯಲ್ಲಿ ಗೆಲ್ಲುವುದರ ಜತೆಗೆ ದೇಶಕ್ಕಾಗಿ ಅದಕ್ಕಿಂತ ಹೆಚ್ಚಿನದನ್ನು ಮಾಡಬೇಕಿದೆ. ಅದಕ್ಕಾಗಿ ನಮಗೆ ಜನಾದೇಶ ಬೇಕಿದೆ. ಆ ಮೂಲಕ ನಮ್ಮ ದೇಶದಲ್ಲಿ ನಾವು ಯಾರು ಎಂಬುದನ್ನು ಈಗಿನ ಅಧ್ಯಕ್ಷರಿಗೆ ತಿಳಿಸಿ ಹೇಳಬೇಕಾಗಿದೆ ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾಷಿಂಗ್ಟನ್:</strong> ’ಪ್ರತಿ ದಿನವೂ ಜನರಿಗಾಗಿ ನ್ಯಾಯದ ಪರ ಹೋರಾಟ ನಡೆಸುತ್ತಿರುವ ಸೆನೆಟರ್ ಕಮಲಾ ಹ್ಯಾರಿಸ್ ಅವರು ಅದೇ ಜನರಿಂದಲೇ ಅಮೆರಿಕದ ಶ್ರೇಷ್ಠ ಉಪಾಧ್ಯಕ್ಷೆಯಾಗಿ ಆಯ್ಕೆಯಾಗುತ್ತಾರೆ’ ಎಂದು ಕಮಲಾ ಅವರ ಪತಿ ಡೌಗ್ಲಾಸ್ ಎಮ್ಹಾಫ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p>.<p>ಕಮಲಾ ಹ್ಯಾರಿಸ್ ಅವರನ್ನು ಅಧಿಕೃತವಾಗಿ ಡೆಮಾಕ್ರಟಿಕ್ ಪಕ್ಷದಿಂದ ಅಮೆರಿಕದ ಉಪಾಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗಿ ಘೋಷಿಸಿದ ನಂತರ ನಡೆದ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿದರು.</p>.<p>’ಕಮಲಾ ಉಪಾಧ್ಯಕ್ಷೆಯಾಗಿ ಆಯ್ಕೆಯಾಗುತ್ತಾರೆ. ಕಮಲಾ ಮತ್ತು ಬೈಡನ್ ಜೋಡಿ ಉತ್ತಮ ಕಾರ್ಯ ಮಾಡುತ್ತಾರೆ’ ಎಂದು ಎಮ್ಹಾಫ್ ವಿಶ್ವಾಸ ವ್ಯಕ್ತಪಡಿಸಿದರು.</p>.<p>ನ್ಯೂಯಾರ್ಕ್ನ ಬ್ರೂಕ್ಲಿನ್ ಮೂಲದ ಎಮ್ಹಾಫ್, ಲಾಸ್ಏಂಜಲೀಸ್ನಲ್ಲಿ ಎಂಟರ್ಟೈನ್ಮೆಂಟ್ ಇಂಡಸ್ಟ್ರಿಯಲ್ಲಿ ಅಟಾರ್ನಿಯಾಗಿದ್ದಾರೆ. ಸದ್ಯ ಪತ್ನಿ ಪರ ಚುನಾವಣಾ ಪ್ರಚಾರಕ್ಕಾಗಿ ಕೆಲಸಕ್ಕೆ ರಜೆ ಹಾಕಿದ್ದಾರೆ. ಚುನಾವಣಾ ಪ್ರಚಾರದ ಸಮಾರಂಭದಲ್ಲಿ ಭಾಗವಹಿಸುತ್ತಿದ್ದಾರೆ.</p>.<p>’ನಾವು ಈ ಚುನಾವಣೆಯಲ್ಲಿ ಗೆಲ್ಲುವುದರ ಜತೆಗೆ ದೇಶಕ್ಕಾಗಿ ಅದಕ್ಕಿಂತ ಹೆಚ್ಚಿನದನ್ನು ಮಾಡಬೇಕಿದೆ. ಅದಕ್ಕಾಗಿ ನಮಗೆ ಜನಾದೇಶ ಬೇಕಿದೆ. ಆ ಮೂಲಕ ನಮ್ಮ ದೇಶದಲ್ಲಿ ನಾವು ಯಾರು ಎಂಬುದನ್ನು ಈಗಿನ ಅಧ್ಯಕ್ಷರಿಗೆ ತಿಳಿಸಿ ಹೇಳಬೇಕಾಗಿದೆ ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>