<p><strong>ಸರ್ರೆ (ಕೆನಡಾ):</strong> ಹಾಸ್ಯ ನಟ ಕಪಿಲ್ ಶರ್ಮಾ ಅವರು ಕೆನಡಾದ ಸರ್ರೆ ನಗರದಲ್ಲಿ ಹೊಸದಾಗಿ ಆರಂಭಿಸಿರುವ ‘ಕ್ಯಾಪ್ಸ್ ಕೆಫೆ’ ರೆಸ್ಟೋರೆಂಟ್ ಮೇಲೆ ದುಷ್ಕರ್ಮಿಗಳು ಎರಡನೇ ಬಾರಿಗೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. </p><p>‘ಕ್ಯಾಪ್ಸ್ ಕೆಫೆ’ ರೆಸ್ಟೋರೆಂಟ್ ಮೇಲೆ ದುಷ್ಕರ್ಮಿಗಳು 25 ಸುತ್ತು ಗುಂಡು ಹಾರಿಸಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. </p><p>ಗುರುಪ್ರೀತ್ ಸಿಂಗ್ ಅಲಿಯಾಸ್ ಗೋಲ್ಡಿ ಧಿಲ್ಲೋನ್ ಮತ್ತು ಲಾರೆನ್ಸ್ ಬಿಷ್ಣೋಯಿ ಎಂಬ ಎರಡು ಗ್ಯಾಂಗ್ಗಳು ದಾಳಿಯ ಹೊಣೆಯನ್ನು ಹೊತ್ತುಕೊಂಡಿವೆ ಎಂದು ಸುದ್ದಿಸಂಸ್ಥೆ ‘ಎಎನ್ಐ’ ವರದಿ ಮಾಡಿದೆ.</p><p>ಜುಲೈ 10ರಂದು ‘ಕ್ಯಾಪ್ಸ್ ಕೆಫೆ’ ರೆಸ್ಟೋರೆಂಟ್ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದರು. ಈ ದಾಳಿ ನಡೆಯುವಾಗ ಕೆಫೆಯ ಸಿಬ್ಬಂದಿ ಒಳಗೇ ಇದ್ದರು. ಅದೃಷ್ಟವಶಾತ್ ಯಾವುದೇ ಜೀವ ಹಾನಿಯಾಗಿಲ್ಲ ಮತ್ತು ಯಾರೊಬ್ಬರಿಗೂ ಗಾಯಗಳಾಗಿಲ್ಲ. ಆದರೆ ಕೆಫೆಗೆ ಹಾನಿಯಾಗಿದೆ ಎಂದು ಸುರ್ರೆ ನಗರದ ಪೊಲೀಸರು ತಿಳಿಸಿದ್ದರು. </p><p>ಘಟನೆಗೆ ಪ್ರತಿಕ್ರಿಯಿಸಿದ್ದ ಶರ್ಮಾ, ‘ಘಟನೆ ಆಘಾತ ತರಿಸಿದೆ. ರುಚಿಕರವಾದ ಕಾಫಿ ಮತ್ತು ಸ್ನೇಹಮಯ ಸಂಭಾಷಣೆ ಮೂಲಕ ಜನರಿಗೆ ಸಂತೋಷವನ್ನು ತರುವ ಭರವಸೆಯೊಂದಿಗೆ ಕ್ಯಾಪ್ಸ್ ಕೆಫೆಯನ್ನು ತೆರೆದಿದ್ದೇವೆ. ಆ ಕನಸಿಗೆ ಪೆಟ್ಟು ಬಿದ್ದರೆ ಸಹಿಸುವುದಿಲ್ಲ. ನಾವು ಮತ್ತೆ ಎದ್ದು ನಿಲ್ಲುತ್ತೇವೆ. ಯಾವುದಕ್ಕೂ ಭಯ ಪಡುವುದಿಲ್ಲ’ ಎಂದು ಪ್ರತಿಕ್ರಿಯಿಸಿದ್ದರು.</p>.ಕೆನಡಾ | ಗುಂಡಿನ ದಾಳಿ ಬಳಿಕ ಮತ್ತೆ ಬಾಗಿಲು ತೆರೆಯಲು ಸಜ್ಜಾದ ಕಪಿಲ್ ಶರ್ಮಾ ಕೆಫೆ.ಕೆನಡಾದಲ್ಲಿ 'ಕ್ಯಾಪ್ಸ್ ಕೆಫೆ' ಮೇಲೆ ಗುಂಡಿನ ದಾಳಿ: ಕಪಿಲ್ ಶರ್ಮಾ ಹೇಳಿದ್ದೇನು?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸರ್ರೆ (ಕೆನಡಾ):</strong> ಹಾಸ್ಯ ನಟ ಕಪಿಲ್ ಶರ್ಮಾ ಅವರು ಕೆನಡಾದ ಸರ್ರೆ ನಗರದಲ್ಲಿ ಹೊಸದಾಗಿ ಆರಂಭಿಸಿರುವ ‘ಕ್ಯಾಪ್ಸ್ ಕೆಫೆ’ ರೆಸ್ಟೋರೆಂಟ್ ಮೇಲೆ ದುಷ್ಕರ್ಮಿಗಳು ಎರಡನೇ ಬಾರಿಗೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. </p><p>‘ಕ್ಯಾಪ್ಸ್ ಕೆಫೆ’ ರೆಸ್ಟೋರೆಂಟ್ ಮೇಲೆ ದುಷ್ಕರ್ಮಿಗಳು 25 ಸುತ್ತು ಗುಂಡು ಹಾರಿಸಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. </p><p>ಗುರುಪ್ರೀತ್ ಸಿಂಗ್ ಅಲಿಯಾಸ್ ಗೋಲ್ಡಿ ಧಿಲ್ಲೋನ್ ಮತ್ತು ಲಾರೆನ್ಸ್ ಬಿಷ್ಣೋಯಿ ಎಂಬ ಎರಡು ಗ್ಯಾಂಗ್ಗಳು ದಾಳಿಯ ಹೊಣೆಯನ್ನು ಹೊತ್ತುಕೊಂಡಿವೆ ಎಂದು ಸುದ್ದಿಸಂಸ್ಥೆ ‘ಎಎನ್ಐ’ ವರದಿ ಮಾಡಿದೆ.</p><p>ಜುಲೈ 10ರಂದು ‘ಕ್ಯಾಪ್ಸ್ ಕೆಫೆ’ ರೆಸ್ಟೋರೆಂಟ್ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದರು. ಈ ದಾಳಿ ನಡೆಯುವಾಗ ಕೆಫೆಯ ಸಿಬ್ಬಂದಿ ಒಳಗೇ ಇದ್ದರು. ಅದೃಷ್ಟವಶಾತ್ ಯಾವುದೇ ಜೀವ ಹಾನಿಯಾಗಿಲ್ಲ ಮತ್ತು ಯಾರೊಬ್ಬರಿಗೂ ಗಾಯಗಳಾಗಿಲ್ಲ. ಆದರೆ ಕೆಫೆಗೆ ಹಾನಿಯಾಗಿದೆ ಎಂದು ಸುರ್ರೆ ನಗರದ ಪೊಲೀಸರು ತಿಳಿಸಿದ್ದರು. </p><p>ಘಟನೆಗೆ ಪ್ರತಿಕ್ರಿಯಿಸಿದ್ದ ಶರ್ಮಾ, ‘ಘಟನೆ ಆಘಾತ ತರಿಸಿದೆ. ರುಚಿಕರವಾದ ಕಾಫಿ ಮತ್ತು ಸ್ನೇಹಮಯ ಸಂಭಾಷಣೆ ಮೂಲಕ ಜನರಿಗೆ ಸಂತೋಷವನ್ನು ತರುವ ಭರವಸೆಯೊಂದಿಗೆ ಕ್ಯಾಪ್ಸ್ ಕೆಫೆಯನ್ನು ತೆರೆದಿದ್ದೇವೆ. ಆ ಕನಸಿಗೆ ಪೆಟ್ಟು ಬಿದ್ದರೆ ಸಹಿಸುವುದಿಲ್ಲ. ನಾವು ಮತ್ತೆ ಎದ್ದು ನಿಲ್ಲುತ್ತೇವೆ. ಯಾವುದಕ್ಕೂ ಭಯ ಪಡುವುದಿಲ್ಲ’ ಎಂದು ಪ್ರತಿಕ್ರಿಯಿಸಿದ್ದರು.</p>.ಕೆನಡಾ | ಗುಂಡಿನ ದಾಳಿ ಬಳಿಕ ಮತ್ತೆ ಬಾಗಿಲು ತೆರೆಯಲು ಸಜ್ಜಾದ ಕಪಿಲ್ ಶರ್ಮಾ ಕೆಫೆ.ಕೆನಡಾದಲ್ಲಿ 'ಕ್ಯಾಪ್ಸ್ ಕೆಫೆ' ಮೇಲೆ ಗುಂಡಿನ ದಾಳಿ: ಕಪಿಲ್ ಶರ್ಮಾ ಹೇಳಿದ್ದೇನು?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>