<p><strong>ಒಟ್ಟಾವ:</strong> ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ನೇತೃತ್ವದ ಸರ್ಕಾರದ ವಿರುದ್ಧ ಮುಂದಿನ ವರ್ಷ ಅವಿಶ್ವಾಸ ನಿರ್ಣಯ ಮಂಡಿಸುವುದಾಗಿ ಮಿತ್ರ ಪಕ್ಷವಾದ ನ್ಯೂ ಡೆಮಾಕ್ರೆಟಿಕ್ ಪಾರ್ಟಿ (ಎನ್ಡಿಪಿ) ಹೇಳಿದೆ. </p>.<p>ಎನ್ಡಿಪಿ ಪಕ್ಷದ ನಾಯಕ, ಭಾರತ ಮೂಲದ ಸಂಸದ ಜಗ್ಮೀತ್ ಸಿಂಗ್ ಅವರು ಪ್ರಧಾನಿಗೆ ಬರೆದ ಬಹಿರಂಗ ಪತ್ರದಲ್ಲಿ ತಮ್ಮ ನಿರ್ಧಾರ ಪ್ರಕಟಿಸಿದ್ದಾರೆ. ಇದರಿಂದ ಟ್ರುಡೊ ಸರ್ಕಾರದ ಭವಿಷ್ಯ ತೂಗುಯ್ಯಾಲೆಯಲ್ಲಿ ನಿಂತಿದೆ.</p>.<p>ಎನ್ಡಿಪಿಯು ಅವಿಶ್ವಾಸ ನಿರ್ಣಯ ಮಂಡಿಸಿದಾಗ, ಇತರ ವಿರೋಧ ಪಕ್ಷಗಳು ಅದನ್ನು ಬೆಂಬಲಿಸಿದರೆ ಟ್ರುಡೊ ಸರ್ಕಾರ ಉರುಳಲಿದೆ. ಹಾಗಾದಲ್ಲಿ, ಕೆನಡಾದಲ್ಲಿ ಅವಧಿಗೆ ಮುನ್ನವೇ ಚುನಾವಣೆ ನಡೆಯಲಿದೆ. ನಿಗದಿತ ವೇಳಾಪಟ್ಟಿಯಂತೆ ಸಾರ್ವತ್ರಿಕ ಚುನಾವಣೆ ಮುಂದಿನ ವರ್ಷ ಅಕ್ಟೋಬರ್ನಲ್ಲಿ ನಡೆಯಬೇಕು.</p>.<p>‘ಲಿಬರಲ್ ಪಕ್ಷದವರು ಮತ್ತೊಂದು ಅವಧಿಗೆ ಅಧಿಕಾರದಲ್ಲಿ ಮುಂದುವರಿಯಲು ಅರ್ಹರಲ್ಲ. ಅದಕ್ಕಾಗಿಯೇ ಈ ಸರ್ಕಾರವನ್ನು ಉರುಳಿಸಲು ಮುಂದಿನ ಅಧಿವೇಶನದಲ್ಲಿ ನಾವು ಅವಿಶ್ವಾಸ ನಿರ್ಣಯವನ್ನು ಮಂಡಿಸುತ್ತೇವೆ. ಕೆನಡಾದ ಜನರಿಗೆ ಅವರ ಪರವಾಗಿ ಕೆಲಸ ಮಾಡುವ ಸರ್ಕಾರವನ್ನು ಆಯ್ಕೆ ಮಾಡುವ ಅವಕಾಶವನ್ನು ನೀಡುತ್ತೇವೆ’ ಎಂದು ಜಗ್ಮೀತ್ ಪತ್ರದಲ್ಲಿ ತಿಳಿಸಿದ್ದಾರೆ.</p>.<p>2019ರ ಅಕ್ಟೋಬರ್ನಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಎನ್ಡಿಪಿ, ‘ಕಿಂಗ್ ಮೇಕರ್‘ ಆಗಿ ಹೊರಹೊಮ್ಮಿತ್ತು. ಟ್ರುಡೊ ಅವರ ಲಿಬರಲ್ ಪಕ್ಷ ಅಧಿಕಾರಕ್ಕೆ ಬರಲು ಎನ್ಡಿಪಿ ಬೆಂಬಲ ನೀಡಿತ್ತು.</p>.<p>ಸಿಂಗ್ ಕೈಗೊಂಡ ನಿರ್ಧಾರವು, ಟ್ರುಡೊ ಅವರು ಈ ವಾರ ಅನುಭವಿಸಿದ ರಾಜಕೀಯ ಹಿನ್ನಡೆಗಳ ಸರಣಿಗೆ ಮತ್ತೊಂದು ಸೇರ್ಪಡೆಯಾಗಿದೆ. ಉಪ ಪ್ರಧಾನಿ ಮತ್ತು ಹಣಕಾಸು ಸಚಿವೆ ಕ್ರಿಸ್ಟಿಯಾ ಫ್ರೀಲ್ಯಾಂಡ್ ಅವರು ಸೋಮವಾರ ದಿಢೀರ್ ರಾಜೀನಾಮೆ ನೀಡಿದ್ದರು. ಟ್ರುಡೊ ಜತೆಗಿನ ಭಿನ್ನಾಭಿಪ್ರಾಯದಿಂದ ಅವರು ಈ ನಿರ್ಧಾರ ತೆಗೆದುಕೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಒಟ್ಟಾವ:</strong> ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ನೇತೃತ್ವದ ಸರ್ಕಾರದ ವಿರುದ್ಧ ಮುಂದಿನ ವರ್ಷ ಅವಿಶ್ವಾಸ ನಿರ್ಣಯ ಮಂಡಿಸುವುದಾಗಿ ಮಿತ್ರ ಪಕ್ಷವಾದ ನ್ಯೂ ಡೆಮಾಕ್ರೆಟಿಕ್ ಪಾರ್ಟಿ (ಎನ್ಡಿಪಿ) ಹೇಳಿದೆ. </p>.<p>ಎನ್ಡಿಪಿ ಪಕ್ಷದ ನಾಯಕ, ಭಾರತ ಮೂಲದ ಸಂಸದ ಜಗ್ಮೀತ್ ಸಿಂಗ್ ಅವರು ಪ್ರಧಾನಿಗೆ ಬರೆದ ಬಹಿರಂಗ ಪತ್ರದಲ್ಲಿ ತಮ್ಮ ನಿರ್ಧಾರ ಪ್ರಕಟಿಸಿದ್ದಾರೆ. ಇದರಿಂದ ಟ್ರುಡೊ ಸರ್ಕಾರದ ಭವಿಷ್ಯ ತೂಗುಯ್ಯಾಲೆಯಲ್ಲಿ ನಿಂತಿದೆ.</p>.<p>ಎನ್ಡಿಪಿಯು ಅವಿಶ್ವಾಸ ನಿರ್ಣಯ ಮಂಡಿಸಿದಾಗ, ಇತರ ವಿರೋಧ ಪಕ್ಷಗಳು ಅದನ್ನು ಬೆಂಬಲಿಸಿದರೆ ಟ್ರುಡೊ ಸರ್ಕಾರ ಉರುಳಲಿದೆ. ಹಾಗಾದಲ್ಲಿ, ಕೆನಡಾದಲ್ಲಿ ಅವಧಿಗೆ ಮುನ್ನವೇ ಚುನಾವಣೆ ನಡೆಯಲಿದೆ. ನಿಗದಿತ ವೇಳಾಪಟ್ಟಿಯಂತೆ ಸಾರ್ವತ್ರಿಕ ಚುನಾವಣೆ ಮುಂದಿನ ವರ್ಷ ಅಕ್ಟೋಬರ್ನಲ್ಲಿ ನಡೆಯಬೇಕು.</p>.<p>‘ಲಿಬರಲ್ ಪಕ್ಷದವರು ಮತ್ತೊಂದು ಅವಧಿಗೆ ಅಧಿಕಾರದಲ್ಲಿ ಮುಂದುವರಿಯಲು ಅರ್ಹರಲ್ಲ. ಅದಕ್ಕಾಗಿಯೇ ಈ ಸರ್ಕಾರವನ್ನು ಉರುಳಿಸಲು ಮುಂದಿನ ಅಧಿವೇಶನದಲ್ಲಿ ನಾವು ಅವಿಶ್ವಾಸ ನಿರ್ಣಯವನ್ನು ಮಂಡಿಸುತ್ತೇವೆ. ಕೆನಡಾದ ಜನರಿಗೆ ಅವರ ಪರವಾಗಿ ಕೆಲಸ ಮಾಡುವ ಸರ್ಕಾರವನ್ನು ಆಯ್ಕೆ ಮಾಡುವ ಅವಕಾಶವನ್ನು ನೀಡುತ್ತೇವೆ’ ಎಂದು ಜಗ್ಮೀತ್ ಪತ್ರದಲ್ಲಿ ತಿಳಿಸಿದ್ದಾರೆ.</p>.<p>2019ರ ಅಕ್ಟೋಬರ್ನಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಎನ್ಡಿಪಿ, ‘ಕಿಂಗ್ ಮೇಕರ್‘ ಆಗಿ ಹೊರಹೊಮ್ಮಿತ್ತು. ಟ್ರುಡೊ ಅವರ ಲಿಬರಲ್ ಪಕ್ಷ ಅಧಿಕಾರಕ್ಕೆ ಬರಲು ಎನ್ಡಿಪಿ ಬೆಂಬಲ ನೀಡಿತ್ತು.</p>.<p>ಸಿಂಗ್ ಕೈಗೊಂಡ ನಿರ್ಧಾರವು, ಟ್ರುಡೊ ಅವರು ಈ ವಾರ ಅನುಭವಿಸಿದ ರಾಜಕೀಯ ಹಿನ್ನಡೆಗಳ ಸರಣಿಗೆ ಮತ್ತೊಂದು ಸೇರ್ಪಡೆಯಾಗಿದೆ. ಉಪ ಪ್ರಧಾನಿ ಮತ್ತು ಹಣಕಾಸು ಸಚಿವೆ ಕ್ರಿಸ್ಟಿಯಾ ಫ್ರೀಲ್ಯಾಂಡ್ ಅವರು ಸೋಮವಾರ ದಿಢೀರ್ ರಾಜೀನಾಮೆ ನೀಡಿದ್ದರು. ಟ್ರುಡೊ ಜತೆಗಿನ ಭಿನ್ನಾಭಿಪ್ರಾಯದಿಂದ ಅವರು ಈ ನಿರ್ಧಾರ ತೆಗೆದುಕೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>