<p><strong>ಬೊಗೋಟಾ</strong>: ನೈರುತ್ಯ ಕೊಲಂಬಿಯಾದಲ್ಲಿ ಇತ್ತೀಚೆಗೆ ಅಪಹರಿಸಲ್ಪಟ್ಟಿದ್ದ 29 ಕಾನೂನು ಜಾರಿ ಅಧಿಕಾರಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಅಲ್ಲಿನ ರಕ್ಷಣಾ ಸಚಿವ ಪೆಡ್ರೊ ಸ್ಯಾಂಚೆಜ್ ಘೋಷಿಸಿದ್ದಾರೆ.</p><p>ಎಲ್ ಪ್ಲೇಟಾಡೊ ಪ್ರದೇಶದಲ್ಲಿ ನಡೆದ ಹಿಂಸಾತ್ಮಕ ದಾಳಿಯ ಸಂದರ್ಭದಲ್ಲಿ ಗುರುವಾರ 28 ಪೊಲೀಸ್ ಅಧಿಕಾರಿಗಳು ಮತ್ತು ಒಬ್ಬ ಸೈನಿಕನನ್ನು ಅಪಹರಿಸಲಾಗಿತ್ತು.</p><p>ಮಧ್ಯವರ್ತಿಗಳಾಗಿ ಕಾರ್ಯನಿರ್ವಹಿಸಿದ್ದಕ್ಕಾಗಿ ಮತ್ತು ಅಧಿಕಾರಿಗಳ ಬಿಡುಗಡೆಗೆ ಸಹಕರಿಸಿದ್ದಕ್ಕಾಗಿ ಸ್ಯಾಂಚೆಜ್ ಸ್ಥಳೀಯ ಸಮುದಾಯಕ್ಕೆ ಧನ್ಯವಾದ ಅರ್ಪಿಸಿದ್ದಾರೆ.</p><p>ಕಾರ್ಲೋಸ್ ಪಟಿನೊ ಎಂದು ಕರೆಯಲ್ಪಡುವ ಸಶಸ್ತ್ರ ಗುಂಪು ಈ ದಾಳಿ ನಡೆಸಿದೆ ಎಂದು ಹೇಳಲಾಗಿದೆ. ಅದರ ಸದಸ್ಯರು ಕೊಲಂಬಿಯಾದ ಹಿಂದಿನ ಕ್ರಾಂತಿಕಾರಿ ಸಶಸ್ತ್ರ ಪಡೆಗಳ ಭಿನ್ನಮತೀಯರಾಗಿದ್ದಾರೆ. ಈ ಗುಂಪು 2016 ರಲ್ಲಿ ಸರ್ಕಶರದ ಜೊತೆಗಿನ ಶಾಂತಿ ಒಪ್ಪಂದಕ್ಕೆ ಒಪ್ಪಿಗೆ ಸೂಚಿಸಿರಲಿಲ್ಲ.</p><p>‘ನ್ಯಾಯಾಂಗವು ತನ್ನ ಕೆಲಸವನ್ನು ಮಾಡುತ್ತದೆ’ಎಂದು ಸಚಿವರು ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್ನನಲ್ಲಿ ಬರೆದುಕೊಂಡಿದ್ದಾರೆ.</p><p>ಬಿಡುಗಡೆಯಾದವರು ಆರೋಗ್ಯವಾಗಿದ್ದು, ಆಹಾರದ ವ್ಯವಸ್ಥೆ ಮಾಡಲಾಗಿದೆ ಎಂದು ವರದಿ ತಿಳಿಸಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೊಗೋಟಾ</strong>: ನೈರುತ್ಯ ಕೊಲಂಬಿಯಾದಲ್ಲಿ ಇತ್ತೀಚೆಗೆ ಅಪಹರಿಸಲ್ಪಟ್ಟಿದ್ದ 29 ಕಾನೂನು ಜಾರಿ ಅಧಿಕಾರಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಅಲ್ಲಿನ ರಕ್ಷಣಾ ಸಚಿವ ಪೆಡ್ರೊ ಸ್ಯಾಂಚೆಜ್ ಘೋಷಿಸಿದ್ದಾರೆ.</p><p>ಎಲ್ ಪ್ಲೇಟಾಡೊ ಪ್ರದೇಶದಲ್ಲಿ ನಡೆದ ಹಿಂಸಾತ್ಮಕ ದಾಳಿಯ ಸಂದರ್ಭದಲ್ಲಿ ಗುರುವಾರ 28 ಪೊಲೀಸ್ ಅಧಿಕಾರಿಗಳು ಮತ್ತು ಒಬ್ಬ ಸೈನಿಕನನ್ನು ಅಪಹರಿಸಲಾಗಿತ್ತು.</p><p>ಮಧ್ಯವರ್ತಿಗಳಾಗಿ ಕಾರ್ಯನಿರ್ವಹಿಸಿದ್ದಕ್ಕಾಗಿ ಮತ್ತು ಅಧಿಕಾರಿಗಳ ಬಿಡುಗಡೆಗೆ ಸಹಕರಿಸಿದ್ದಕ್ಕಾಗಿ ಸ್ಯಾಂಚೆಜ್ ಸ್ಥಳೀಯ ಸಮುದಾಯಕ್ಕೆ ಧನ್ಯವಾದ ಅರ್ಪಿಸಿದ್ದಾರೆ.</p><p>ಕಾರ್ಲೋಸ್ ಪಟಿನೊ ಎಂದು ಕರೆಯಲ್ಪಡುವ ಸಶಸ್ತ್ರ ಗುಂಪು ಈ ದಾಳಿ ನಡೆಸಿದೆ ಎಂದು ಹೇಳಲಾಗಿದೆ. ಅದರ ಸದಸ್ಯರು ಕೊಲಂಬಿಯಾದ ಹಿಂದಿನ ಕ್ರಾಂತಿಕಾರಿ ಸಶಸ್ತ್ರ ಪಡೆಗಳ ಭಿನ್ನಮತೀಯರಾಗಿದ್ದಾರೆ. ಈ ಗುಂಪು 2016 ರಲ್ಲಿ ಸರ್ಕಶರದ ಜೊತೆಗಿನ ಶಾಂತಿ ಒಪ್ಪಂದಕ್ಕೆ ಒಪ್ಪಿಗೆ ಸೂಚಿಸಿರಲಿಲ್ಲ.</p><p>‘ನ್ಯಾಯಾಂಗವು ತನ್ನ ಕೆಲಸವನ್ನು ಮಾಡುತ್ತದೆ’ಎಂದು ಸಚಿವರು ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್ನನಲ್ಲಿ ಬರೆದುಕೊಂಡಿದ್ದಾರೆ.</p><p>ಬಿಡುಗಡೆಯಾದವರು ಆರೋಗ್ಯವಾಗಿದ್ದು, ಆಹಾರದ ವ್ಯವಸ್ಥೆ ಮಾಡಲಾಗಿದೆ ಎಂದು ವರದಿ ತಿಳಿಸಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>