<p><strong>ದುಬೈ: </strong>ಅರಬ್ ಸಂಯುಕ್ತ ಸಂಸ್ಥಾನವು (ಯುಎಇ) ಬುರ್ಜ್ ಖಲೀಫಾ ಸೇರಿದಂತೆ ಪ್ರಮುಖ ಕಟ್ಟಡಗಳಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ವಿದ್ಯುತ್ದ್ದೀಪದೊಂದಿಗೆ ಬೆಳಗಿಸುವ ಮೂಲಕ ಒಗ್ಗಟ್ಟನ್ನು ಪ್ರದರ್ಶಿಸಿದೆ.</p>.<p>‘ಅಬುಧಾಬಿಯ ರಾಷ್ಟ್ರೀಯ ತೈಲ ಸಂಸ್ಥೆಯ (ಎಡಿಎನ್ಒಸಿ) ಮುಖ್ಯ ಕಚೇರಿಯ ಕಟ್ಟಡ ಮತ್ತು ವಿಶ್ವದ ಅತ್ಯಂತ ಎತ್ತರದ ಕಟ್ಟಡಬುರ್ಜ್ ಖಲೀಫಾದಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಬೆಳಗಿಸಲಾಗಿತ್ತು. ಈ ಮೂಲಕ ಯುಎಇ, ಕೋವಿಡ್ನ ಎರಡನೇ ಅಲೆಯನ್ನು ಎದುರಿಸುತ್ತಿರುವ ಭಾರತಕ್ಕೆ ತನ್ನ ಸಹಕಾರವನ್ನು ಪ್ರದರ್ಶಿಸಿದೆ’ ಎಂದು ಡಬ್ಲ್ಯೂಎಎಂ ಸುದ್ದಿ ಸಂಸ್ಥೆ ವರದಿ ಮಾಡಿದೆ.</p>.<p>‘ಕೋವಿಡ್ ಸೋಂಕಿನ ವಿರುದ್ಧ ಭಾರತ ಹೋರಾಡುತ್ತಿದೆ. ಈ ಕಷ್ಟಕಾಲವನ್ನು ಎದುರಿಸಲು ಮಿತ್ರ ರಾಷ್ಟ್ರಭಾರತದೊಂದಿಗೆ ಯುಎಇ ನಿಂತಿದೆ. ಇದರ ಪ್ರತೀಕವಾಗಿ ಬುರ್ಜ್ ಖಲೀಫ್ದಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಬೆಳಗಿಸಲಾಗಿದೆ’ ಎಂದು ಯುಎಇನಲ್ಲಿರುವ ಭಾರತದ ರಾಯಭಾರ ಕಚೇರಿ ಟ್ವೀಟ್ ಮಾಡಿದೆ. ಇದರೊಂದಿಗೆ ವಿಡಿಯೊವೊಂದನ್ನು ಹಂಚಿಕೊಂಡಿದೆ.</p>.<p>‘ಈ ಕಷ್ಟದ ಸಮಯದಲ್ಲಿ ಯುಎಇ ತನ್ನ ಆಪ್ತ ಗೆಳೆಯನಿಗೆ ನೀಡಿದ ಬೆಂಬಲಕ್ಕೆ ಭಾರತ ಮೆಚ್ಚುಗೆ ವ್ಯಕ್ತಪಡಿಸಿದೆ’ ಎಂದು ಯುಎಇನಲ್ಲಿರುವ ಭಾರತದ ರಾಯಭಾರಿ ಪವನ್ ಕಪೂರ್ ಟ್ವೀಟ್ ಮಾಡಿದ್ದಾರೆ.</p>.<p>ಎಡಿಎನ್ಒಸಿಯ ಕಟ್ಟಡದಲ್ಲಿ ‘ಸ್ಟೇ ಸ್ಟ್ರಾಂಗ್ ಇಂಡಿಯಾ’ ಎಂಬ ಸಂದೇಶವನ್ನು ಬೆಳಗಿಸಲಾಗಿತ್ತು.</p>.<p>ಯುಎಇನ ವಿದೇಶಾಂಗ ಸಚಿವ ಅಬ್ದುಲ್ ಬಿಲ್ ಜಯೀದ್ ಅಲ್ ನಹ್ಯಾನ್ ಅವರು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಜೈ.ಶಂಕರ್ ಅವರೊಂದಿಗೆ ಭಾನುವಾರ ಫೋನ್ ಕರೆಯ ಮೂಲಕ ಮಾತುಕತೆ ನಡೆಸಿದರು. ಈ ವೇಳೆ, ಭಾರತಕ್ಕೆ ಎಲ್ಲಾ ರೀತಿಯ ಬೆಂಬಲವನ್ನು ನೀಡುವುದಾಗಿ ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದುಬೈ: </strong>ಅರಬ್ ಸಂಯುಕ್ತ ಸಂಸ್ಥಾನವು (ಯುಎಇ) ಬುರ್ಜ್ ಖಲೀಫಾ ಸೇರಿದಂತೆ ಪ್ರಮುಖ ಕಟ್ಟಡಗಳಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ವಿದ್ಯುತ್ದ್ದೀಪದೊಂದಿಗೆ ಬೆಳಗಿಸುವ ಮೂಲಕ ಒಗ್ಗಟ್ಟನ್ನು ಪ್ರದರ್ಶಿಸಿದೆ.</p>.<p>‘ಅಬುಧಾಬಿಯ ರಾಷ್ಟ್ರೀಯ ತೈಲ ಸಂಸ್ಥೆಯ (ಎಡಿಎನ್ಒಸಿ) ಮುಖ್ಯ ಕಚೇರಿಯ ಕಟ್ಟಡ ಮತ್ತು ವಿಶ್ವದ ಅತ್ಯಂತ ಎತ್ತರದ ಕಟ್ಟಡಬುರ್ಜ್ ಖಲೀಫಾದಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಬೆಳಗಿಸಲಾಗಿತ್ತು. ಈ ಮೂಲಕ ಯುಎಇ, ಕೋವಿಡ್ನ ಎರಡನೇ ಅಲೆಯನ್ನು ಎದುರಿಸುತ್ತಿರುವ ಭಾರತಕ್ಕೆ ತನ್ನ ಸಹಕಾರವನ್ನು ಪ್ರದರ್ಶಿಸಿದೆ’ ಎಂದು ಡಬ್ಲ್ಯೂಎಎಂ ಸುದ್ದಿ ಸಂಸ್ಥೆ ವರದಿ ಮಾಡಿದೆ.</p>.<p>‘ಕೋವಿಡ್ ಸೋಂಕಿನ ವಿರುದ್ಧ ಭಾರತ ಹೋರಾಡುತ್ತಿದೆ. ಈ ಕಷ್ಟಕಾಲವನ್ನು ಎದುರಿಸಲು ಮಿತ್ರ ರಾಷ್ಟ್ರಭಾರತದೊಂದಿಗೆ ಯುಎಇ ನಿಂತಿದೆ. ಇದರ ಪ್ರತೀಕವಾಗಿ ಬುರ್ಜ್ ಖಲೀಫ್ದಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಬೆಳಗಿಸಲಾಗಿದೆ’ ಎಂದು ಯುಎಇನಲ್ಲಿರುವ ಭಾರತದ ರಾಯಭಾರ ಕಚೇರಿ ಟ್ವೀಟ್ ಮಾಡಿದೆ. ಇದರೊಂದಿಗೆ ವಿಡಿಯೊವೊಂದನ್ನು ಹಂಚಿಕೊಂಡಿದೆ.</p>.<p>‘ಈ ಕಷ್ಟದ ಸಮಯದಲ್ಲಿ ಯುಎಇ ತನ್ನ ಆಪ್ತ ಗೆಳೆಯನಿಗೆ ನೀಡಿದ ಬೆಂಬಲಕ್ಕೆ ಭಾರತ ಮೆಚ್ಚುಗೆ ವ್ಯಕ್ತಪಡಿಸಿದೆ’ ಎಂದು ಯುಎಇನಲ್ಲಿರುವ ಭಾರತದ ರಾಯಭಾರಿ ಪವನ್ ಕಪೂರ್ ಟ್ವೀಟ್ ಮಾಡಿದ್ದಾರೆ.</p>.<p>ಎಡಿಎನ್ಒಸಿಯ ಕಟ್ಟಡದಲ್ಲಿ ‘ಸ್ಟೇ ಸ್ಟ್ರಾಂಗ್ ಇಂಡಿಯಾ’ ಎಂಬ ಸಂದೇಶವನ್ನು ಬೆಳಗಿಸಲಾಗಿತ್ತು.</p>.<p>ಯುಎಇನ ವಿದೇಶಾಂಗ ಸಚಿವ ಅಬ್ದುಲ್ ಬಿಲ್ ಜಯೀದ್ ಅಲ್ ನಹ್ಯಾನ್ ಅವರು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಜೈ.ಶಂಕರ್ ಅವರೊಂದಿಗೆ ಭಾನುವಾರ ಫೋನ್ ಕರೆಯ ಮೂಲಕ ಮಾತುಕತೆ ನಡೆಸಿದರು. ಈ ವೇಳೆ, ಭಾರತಕ್ಕೆ ಎಲ್ಲಾ ರೀತಿಯ ಬೆಂಬಲವನ್ನು ನೀಡುವುದಾಗಿ ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>