<p><strong>ಕ್ವಾಲಾಲಂಪುರ</strong>: ಮಲೇಷ್ಯಾದ ಕ್ಯಾಂಪ್ ಪ್ರದೇಶದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಇಬ್ಬರು ಮೃತಪಟ್ಟು, 50 ಮಂದಿ ನಾಪತ್ತೆಯಾಗಿರುವ ಘಟನೆ ಶುಕ್ರವಾರ ಬೆಳಗಿನ ಜಾವ ನಡೆದಿದೆ.</p>.<p>ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ತಂಡ ಸ್ಥಳಕ್ಕೆ ದೌಡಾಯಿಸಿವೆ.</p>.<p>ರಾಜಧಾನಿ ಕ್ವಾಲಾಲಂಪುರ್ನ ಹೊರವಲಯದಲ್ಲಿರುವ ಸೆಲಂಗೋರ್ನಲ್ಲಿ ಬೆಳಗಿನ ಜಾವ 3 ಗಂಟೆಗೆ ಭೂಕುಸಿತ ಸಂಭವಿಸಿದೆ. ಕ್ಯಾಂಪಿಂಗ್ ಸೌಲಭ್ಯಗಳನ್ನು ಒದಗಿಸುವ ಫಾರ್ಮ್ಹೌಸ್ ಬಳಿಯ ರಸ್ತೆಯ ಬದಿಯಲ್ಲಿ ಕುಸಿತ ಸಂಭವಿಸಿದೆ ಎಂದು ರಾಜ್ಯ ಅಗ್ನಿಶಾಮಕ ಮತ್ತು ರಕ್ಷಣಾ ಇಲಾಖೆ ಹೇಳಿಕೆಯಲ್ಲಿ ತಿಳಿಸಿದೆ.</p>.<p>ಭೂಕುಸಿತದಲ್ಲಿ ಒಟ್ಟು 79 ಮಂದಿ ಸಿಲುಕಿದ್ದರು. ಆ ಪೈಕಿ 23 ಮಂದಿ ಸುರಕ್ಷಿತವಾಗಿದ್ಧಾರೆ ಎಂದು ಇಲಾಖೆ ತಿಳಿಸಿದೆ. ಇಬ್ಬರು ಮೃತಪಟ್ಟಿದ್ದು, 51 ಮಂದಿ ನಾಪತ್ತೆಯಾಗಿದ್ದಾರೆ ಎಂದು ಅದು ಹೇಳಿದೆ.</p>.<p>ಕ್ಯಾಂಪ್ ಪ್ರದೇಶದಿಂದ 30 ಮೀಟರ್(100 ಅಡಿ) ಎತ್ತರದಿಂದ ಭೂಕುಸಿತ ಸಂಭವಿಸಿದ್ದು. ಒಂದು ಎಕರೆಯಷ್ಟು ಪ್ರದೇಶವನ್ನು ಆವರಿಸಿದೆ ಎಂದು ರಕ್ಷಣಾ ಇಲಾಖೆಯ ನಿರ್ದೇಶಕ ನೊರಾಜಮ್ ಖಾಮಿಸ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕ್ವಾಲಾಲಂಪುರ</strong>: ಮಲೇಷ್ಯಾದ ಕ್ಯಾಂಪ್ ಪ್ರದೇಶದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಇಬ್ಬರು ಮೃತಪಟ್ಟು, 50 ಮಂದಿ ನಾಪತ್ತೆಯಾಗಿರುವ ಘಟನೆ ಶುಕ್ರವಾರ ಬೆಳಗಿನ ಜಾವ ನಡೆದಿದೆ.</p>.<p>ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ತಂಡ ಸ್ಥಳಕ್ಕೆ ದೌಡಾಯಿಸಿವೆ.</p>.<p>ರಾಜಧಾನಿ ಕ್ವಾಲಾಲಂಪುರ್ನ ಹೊರವಲಯದಲ್ಲಿರುವ ಸೆಲಂಗೋರ್ನಲ್ಲಿ ಬೆಳಗಿನ ಜಾವ 3 ಗಂಟೆಗೆ ಭೂಕುಸಿತ ಸಂಭವಿಸಿದೆ. ಕ್ಯಾಂಪಿಂಗ್ ಸೌಲಭ್ಯಗಳನ್ನು ಒದಗಿಸುವ ಫಾರ್ಮ್ಹೌಸ್ ಬಳಿಯ ರಸ್ತೆಯ ಬದಿಯಲ್ಲಿ ಕುಸಿತ ಸಂಭವಿಸಿದೆ ಎಂದು ರಾಜ್ಯ ಅಗ್ನಿಶಾಮಕ ಮತ್ತು ರಕ್ಷಣಾ ಇಲಾಖೆ ಹೇಳಿಕೆಯಲ್ಲಿ ತಿಳಿಸಿದೆ.</p>.<p>ಭೂಕುಸಿತದಲ್ಲಿ ಒಟ್ಟು 79 ಮಂದಿ ಸಿಲುಕಿದ್ದರು. ಆ ಪೈಕಿ 23 ಮಂದಿ ಸುರಕ್ಷಿತವಾಗಿದ್ಧಾರೆ ಎಂದು ಇಲಾಖೆ ತಿಳಿಸಿದೆ. ಇಬ್ಬರು ಮೃತಪಟ್ಟಿದ್ದು, 51 ಮಂದಿ ನಾಪತ್ತೆಯಾಗಿದ್ದಾರೆ ಎಂದು ಅದು ಹೇಳಿದೆ.</p>.<p>ಕ್ಯಾಂಪ್ ಪ್ರದೇಶದಿಂದ 30 ಮೀಟರ್(100 ಅಡಿ) ಎತ್ತರದಿಂದ ಭೂಕುಸಿತ ಸಂಭವಿಸಿದ್ದು. ಒಂದು ಎಕರೆಯಷ್ಟು ಪ್ರದೇಶವನ್ನು ಆವರಿಸಿದೆ ಎಂದು ರಕ್ಷಣಾ ಇಲಾಖೆಯ ನಿರ್ದೇಶಕ ನೊರಾಜಮ್ ಖಾಮಿಸ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>