ಕೊಲಂಬೊ: ಹಿಂದೆಂದೂ ಕಾಣದ ಭೀಕರ ಆರ್ಥಿಕ ಬಿಕ್ಕಟ್ಟಿನಿಂದ ಶ್ರೀಲಂಕಾ ತತ್ತರಿಸುತ್ತಿದೆ. ಆರ್ಥಿಕತೆಯನ್ನು ಸೂಕ್ತವಾಗಿ ನಿಭಾಯಿಸುವಲ್ಲಿ ವಿಫಲವಾದ ಅಲ್ಲಿನ ಸರ್ಕಾರದ ವಿರುದ್ಧ ದೊಡ್ಡ ಪ್ರಮಾಣದ ಪ್ರತಿಭಟನೆಗಳು ನಡೆಯುತ್ತಿವೆ. ಈ ನಡುವೆಯೇ, ಜನರ ಆಶೋತ್ತರಗಳನ್ನು ಪೂರೈಸುವ ಜವಾಬ್ದಾರಿಯುತ ಆಡಳಿತ ನೀಡಲು ಸಂವಿಧಾನ ತಿದ್ದುಪಡಿ ಮಾಡಬೇಕೆಂಬ ಪ್ರಸ್ತಾಪವನ್ನು ಸಂಪುಟದ ಮುಂದಿಡಲು ಶ್ರೀಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸ ಮುಂದಾಗಿದ್ದಾರೆ.