<p class="title"><strong>ಕೊಲೊಂಬೊ:</strong>‘ಮಹಿಂದಾ ರಾಜಪಕ್ಸೆ ಸಂಸತ್ತಿನಲ್ಲಿ ಬಹುಮತ ಸಾಬೀತುಪಡಿಸದ ಹೊರತು ಅವರನ್ನು ಪ್ರಧಾನಮಂತ್ರಿ ಎಂದು ಪರಿಗಣಿಸುವುದಿಲ್ಲ’ ಎಂದು ಶ್ರೀಲಂಕಾದ ಸ್ಪೀಕರ್ ಕರು ಜಯಸೂರ್ಯ ಹೇಳಿದ್ದಾರೆ.</p>.<p class="title">‘ಸಂಸತ್ತನ್ನು ವಜಾಗೊಳಿಸಿ ಪ್ರಧಾನಮಂತ್ರಿ ರನಿಲ್ ವಿಕ್ರಮಸಿಂಘೆ ಅವರನ್ನು ಅಧಿಕಾರದಿಂದ ಕೆಳಗಿಳಿಸಿದ ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಅವರ ಕ್ರಮ ಪ್ರಜಾಪ್ರಭುತ್ವಕ್ಕೆ ವಿರುದ್ಧವಾದುದು’ ಎಂದೂ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p class="title">‘ರಾಷ್ಟ್ರಪತಿ ಕೈಗೊಂಡಿರುವ ಕ್ರಮ ಸಂವಿಧಾನಕ್ಕೆ ವಿರುದ್ಧವಾಗಿದ್ದು. ನಾವು ಅದನ್ನು ವಿರೋಧಿಸುತ್ತೇವೆ ಎಂದಿರುವ ಹಲವು ಸಂಸದರು,ಅಧ್ಯಕ್ಷರ ನಡೆಯ ವಿರುದ್ಧ ಪ್ರತಿಭಟಿಸಲು ಅವಕಾಶ ನೀಡುವಂತೆ ಅರ್ಜಿ ಸಲ್ಲಿಸಿದ್ದಾರೆ’ ಎಂದು ಜಯಸೂರ್ಯ ಸೋಮವಾರ ಹೇಳಿದ್ದಾರೆ.</p>.<p class="title">‘ರನಿಲ್ ವಿಕ್ರಮಸಿಂಘೆಯವರನ್ನೇಪ್ರಧಾನಮಂತ್ರಿಯನ್ನಾಗಿ ಮುಂದುವರಿಸಬೇಕು ಎಂದು ನನಗೆ ಹಲವು ಸಂಸದರು ಮನವಿ ಮಾಡಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಬಹುಮತವೇ ಪರಿಗಣಿಸಬೇಕಾದ ಪ್ರಮುಖ ಅಂಶವಾಗಿರಬೇಕು’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.</p>.<p class="title">ಮೊದಲು, ನವೆಂಬರ್ 7ಕ್ಕೆ ಸಂಸತ್ ಅಧಿವೇಶನ ಕರೆಯಲಾಗುವುದು ಎಂದು ಸಿರಿಸೇನಾ ಹೇಳಿದ್ದರು. ಆದರೆ, ಈಗ ಅದನ್ನು ನವೆಂಬರ್ 14ಕ್ಕೆ ಮುಂದೂಡಿದ್ದಾರೆ.</p>.<p class="bodytext">‘ರಾಜಕೀಯ ಅಸ್ಥಿರತೆ ಕೊನೆಗಾಣಿಸಲು ಸಂಸತ್ ಅಧಿವೇಶನವನ್ನು ಆದಷ್ಟು ಬೇಗನೆ ಕರೆಯಬೇಕು’ ಎಂದೂ ಸ್ಪೀಕರ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಕೊಲೊಂಬೊ:</strong>‘ಮಹಿಂದಾ ರಾಜಪಕ್ಸೆ ಸಂಸತ್ತಿನಲ್ಲಿ ಬಹುಮತ ಸಾಬೀತುಪಡಿಸದ ಹೊರತು ಅವರನ್ನು ಪ್ರಧಾನಮಂತ್ರಿ ಎಂದು ಪರಿಗಣಿಸುವುದಿಲ್ಲ’ ಎಂದು ಶ್ರೀಲಂಕಾದ ಸ್ಪೀಕರ್ ಕರು ಜಯಸೂರ್ಯ ಹೇಳಿದ್ದಾರೆ.</p>.<p class="title">‘ಸಂಸತ್ತನ್ನು ವಜಾಗೊಳಿಸಿ ಪ್ರಧಾನಮಂತ್ರಿ ರನಿಲ್ ವಿಕ್ರಮಸಿಂಘೆ ಅವರನ್ನು ಅಧಿಕಾರದಿಂದ ಕೆಳಗಿಳಿಸಿದ ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಅವರ ಕ್ರಮ ಪ್ರಜಾಪ್ರಭುತ್ವಕ್ಕೆ ವಿರುದ್ಧವಾದುದು’ ಎಂದೂ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p class="title">‘ರಾಷ್ಟ್ರಪತಿ ಕೈಗೊಂಡಿರುವ ಕ್ರಮ ಸಂವಿಧಾನಕ್ಕೆ ವಿರುದ್ಧವಾಗಿದ್ದು. ನಾವು ಅದನ್ನು ವಿರೋಧಿಸುತ್ತೇವೆ ಎಂದಿರುವ ಹಲವು ಸಂಸದರು,ಅಧ್ಯಕ್ಷರ ನಡೆಯ ವಿರುದ್ಧ ಪ್ರತಿಭಟಿಸಲು ಅವಕಾಶ ನೀಡುವಂತೆ ಅರ್ಜಿ ಸಲ್ಲಿಸಿದ್ದಾರೆ’ ಎಂದು ಜಯಸೂರ್ಯ ಸೋಮವಾರ ಹೇಳಿದ್ದಾರೆ.</p>.<p class="title">‘ರನಿಲ್ ವಿಕ್ರಮಸಿಂಘೆಯವರನ್ನೇಪ್ರಧಾನಮಂತ್ರಿಯನ್ನಾಗಿ ಮುಂದುವರಿಸಬೇಕು ಎಂದು ನನಗೆ ಹಲವು ಸಂಸದರು ಮನವಿ ಮಾಡಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಬಹುಮತವೇ ಪರಿಗಣಿಸಬೇಕಾದ ಪ್ರಮುಖ ಅಂಶವಾಗಿರಬೇಕು’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.</p>.<p class="title">ಮೊದಲು, ನವೆಂಬರ್ 7ಕ್ಕೆ ಸಂಸತ್ ಅಧಿವೇಶನ ಕರೆಯಲಾಗುವುದು ಎಂದು ಸಿರಿಸೇನಾ ಹೇಳಿದ್ದರು. ಆದರೆ, ಈಗ ಅದನ್ನು ನವೆಂಬರ್ 14ಕ್ಕೆ ಮುಂದೂಡಿದ್ದಾರೆ.</p>.<p class="bodytext">‘ರಾಜಕೀಯ ಅಸ್ಥಿರತೆ ಕೊನೆಗಾಣಿಸಲು ಸಂಸತ್ ಅಧಿವೇಶನವನ್ನು ಆದಷ್ಟು ಬೇಗನೆ ಕರೆಯಬೇಕು’ ಎಂದೂ ಸ್ಪೀಕರ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>