<p class="title"><strong>ಕೊಲಂಬೊ, ಶ್ರೀಲಂಕಾ:</strong> ಹಠಾತ್ ಬೆಳವಣಿಗೆಯೊಂದರಲ್ಲಿ ಶ್ರೀಲಂಕಾದ ಅಧ್ಯಕ್ಷ ಗೋಟಬಯ ರಾಜಪಕ್ಸೆ ಒಂದು ವಾರದ ಮಟ್ಟಿಗೆ ಸಂಸತ್ತನ್ನು ಅಮಾನತುಗೊಳಿಸಿ ಅನೌಪಚಾರಿಕ ಭೇಟಿಗಾಗಿ ಸಿಂಗಪುರಕ್ಕೆ ತೆರಳಿದ್ದಾರೆ.</p>.<p class="title">ಗೋಟಬಯ ಅವರ ಈ ನಿರ್ಧಾರದ ಬಗ್ಗೆ ಸರ್ಕಾರ ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಶುಕ್ರವಾರ ಸಂಸತ್ತಿನ ಅಧಿವೇಶನ ಮುಕ್ತಾಯಗೊಂಡಿದೆ. ಮುಂದಿನ ಅಧಿವೇಶನ ಜನವರಿ 11 ರಿಂದನಡೆಯಬೇಕಿತ್ತು. ಆದರೆ ಈಗ ಜನವರಿ 18 ರಿಂದಅಧಿವೇಶನ ನಡೆಸಲು ನಿರ್ಧರಿಸಲಾಗಿದೆ.</p>.<p class="title">ಅಧ್ಯಕ್ಷ ರಾಜಪಕ್ಸೆ ಅವರು ಡಿಸೆಂಬರ್ 12ರಂದು ಗೆಜೆಟ್ ಅಧಿಸೂಚನೆಯೊಂದರ ಮೂಲಕ ಸಂಸತ್ತಿನ ಅಧಿವೇಶನವನ್ನು ಅಮಾನತುಗೊಳಿಸಿದರು.</p>.<p class="title">‘2021ರ ಡಿಸೆಂಬರ್ 12ರ ಮಧ್ಯರಾತ್ರಿಯಿಂದ ಸಂಸತ್ತಿನ ಕಲಾಪವನ್ನು ಮೊಟಕುಗೊಳಿಸಿದ್ದು 2022ರ ಜನವರಿ 18ರ ಬೆಳಿಗ್ಗೆ 10 ಗಂಟೆಗೆ ಮುಂದಿನ ಅಧಿವೇಶನ ಕರೆಯಲಾಗುವುದು’ ಎಂದು ಗೆಜೆಟ್ನ ಅಧಿಸೂಚನೆ ಹೇಳಿದೆ.</p>.<p class="bodytext">ಗೋಟಬಯ ಅವರ ಭೇಟಿ ಖಾಸಗಿಯಾಗಿದ್ದು ವೈದ್ಯಕೀಯ ಚಿಕಿತ್ಸೆಗೆ ಸಂಬಂಧಿಸಿದೆ ಎಂದು ಅಧ್ಯಕ್ಷರ ಕಚೇರಿ ಅಧಿಕಾರಿಗಳು ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಕೊಲಂಬೊ, ಶ್ರೀಲಂಕಾ:</strong> ಹಠಾತ್ ಬೆಳವಣಿಗೆಯೊಂದರಲ್ಲಿ ಶ್ರೀಲಂಕಾದ ಅಧ್ಯಕ್ಷ ಗೋಟಬಯ ರಾಜಪಕ್ಸೆ ಒಂದು ವಾರದ ಮಟ್ಟಿಗೆ ಸಂಸತ್ತನ್ನು ಅಮಾನತುಗೊಳಿಸಿ ಅನೌಪಚಾರಿಕ ಭೇಟಿಗಾಗಿ ಸಿಂಗಪುರಕ್ಕೆ ತೆರಳಿದ್ದಾರೆ.</p>.<p class="title">ಗೋಟಬಯ ಅವರ ಈ ನಿರ್ಧಾರದ ಬಗ್ಗೆ ಸರ್ಕಾರ ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಶುಕ್ರವಾರ ಸಂಸತ್ತಿನ ಅಧಿವೇಶನ ಮುಕ್ತಾಯಗೊಂಡಿದೆ. ಮುಂದಿನ ಅಧಿವೇಶನ ಜನವರಿ 11 ರಿಂದನಡೆಯಬೇಕಿತ್ತು. ಆದರೆ ಈಗ ಜನವರಿ 18 ರಿಂದಅಧಿವೇಶನ ನಡೆಸಲು ನಿರ್ಧರಿಸಲಾಗಿದೆ.</p>.<p class="title">ಅಧ್ಯಕ್ಷ ರಾಜಪಕ್ಸೆ ಅವರು ಡಿಸೆಂಬರ್ 12ರಂದು ಗೆಜೆಟ್ ಅಧಿಸೂಚನೆಯೊಂದರ ಮೂಲಕ ಸಂಸತ್ತಿನ ಅಧಿವೇಶನವನ್ನು ಅಮಾನತುಗೊಳಿಸಿದರು.</p>.<p class="title">‘2021ರ ಡಿಸೆಂಬರ್ 12ರ ಮಧ್ಯರಾತ್ರಿಯಿಂದ ಸಂಸತ್ತಿನ ಕಲಾಪವನ್ನು ಮೊಟಕುಗೊಳಿಸಿದ್ದು 2022ರ ಜನವರಿ 18ರ ಬೆಳಿಗ್ಗೆ 10 ಗಂಟೆಗೆ ಮುಂದಿನ ಅಧಿವೇಶನ ಕರೆಯಲಾಗುವುದು’ ಎಂದು ಗೆಜೆಟ್ನ ಅಧಿಸೂಚನೆ ಹೇಳಿದೆ.</p>.<p class="bodytext">ಗೋಟಬಯ ಅವರ ಭೇಟಿ ಖಾಸಗಿಯಾಗಿದ್ದು ವೈದ್ಯಕೀಯ ಚಿಕಿತ್ಸೆಗೆ ಸಂಬಂಧಿಸಿದೆ ಎಂದು ಅಧ್ಯಕ್ಷರ ಕಚೇರಿ ಅಧಿಕಾರಿಗಳು ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>