<p><strong>ಕೊಲಂಬೊ</strong>: ದೇಶದ ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಜನಾಕ್ರೋಶಕ್ಕೆ ಮಣಿದಿರುವ ಅಧ್ಯಕ್ಷ ಗೋಟಬಯ ರಾಜಪಕ್ಸ ಅವರು ಪ್ರಧಾನಿ ಸ್ಥಾನದಿಂದ ತನ್ನ ಅಣ್ಣ ಮಹಿಂದಾ ರಾಜಪಕ್ಸ ಅವರ ಪದಚ್ಯುತಿಗೆ ಒಪ್ಪಿದ್ದಾರೆ.</p>.<p>ಪ್ರಧಾನಿ ಸ್ಥಾನಕ್ಕೆ ಹೊಸ ಅಭ್ಯರ್ಥಿ ಹಾಗೂ ಸರ್ವಪಕ್ಷಗಳ ಸದಸ್ಯರನ್ನು ಒಳಗೊಂಡ ಹೊಸ ಸಂಪುಟದ ಆಯ್ಕೆಗಾಗಿ ರಾಷ್ಟ್ರೀಯ ಸಮಿತಿಯನ್ನು ರಚಿಸಲೂ ತೀರ್ಮಾನಿಸಿದ್ದಾರೆ.</p>.<p>ಅಧ್ಯಕ್ಷರ ಜೊತೆಗಿನ ಸಭೆಯ ನಂತರ ಸಂಸದ ಮೈತ್ರಿಪಾಲ ಸಿರಿಸೇನಾ ಅವರು ಈ ವಿಷಯ ತಿಳಿಸಿದರು. ಸಿರಿಸೇನಾ ಅವರು ರಾಜಪಕ್ಸಗೂ ಮೊದಲು ಶ್ರೀಲಂಕಾದ ಅಧ್ಯಕ್ಷರಾಗಿದ್ದರು.</p>.<p>ಆರ್ಥಿಕವಾಗಿ ದಿವಾಳಿಯಾಗಿರುವ ಶ್ರೀಲಂಕಾದ ಸರ್ಕಾರ, ಬಾಕಿ ಇರುವ ವಿದೇಶಿ ಸಾಲ ಪಾವತಿಸದೇ ಅಮಾನತ್ತಿನಲ್ಲಿಡಲು ನಿರ್ಧರಿಸಿದೆ.ವಿದೇಶಿ ಸಾಲದ ಮೊತ್ತ ಹೆಚ್ಚಿರುವುದು ಆಮದು ವಹಿವಾಟಿನ ಮೇಲೂ ಪರಿಣಾಮ ಬೀರಿದ್ದು, ಜನತೆ ಆಹಾರ ಪದಾರ್ಥಗಳು, ಇಂಧನ, ಅಡುಗೆ ಅನಿಲ, ಔಷಧಗಳಿಗೆ ಸಾಲಿನಲ್ಲಿ ನಿಲ್ಲುವ ಸ್ಥಿತಿ ನಿರ್ಮಾಣವಾಗಿದೆ.</p>.<p>ಅಧ್ಯಕ್ಷ ಗೋಟಬಯ, ಪ್ರಧಾನಿ ಮಹಿಂದಾ ಒಳಗೊಂಡಂತೆ ರಾಜಪಕ್ಸ ಕುಟುಂಬವು ಶ್ರೀಲಂಕಾದ ರಾಜಕಾರಣದಲ್ಲಿ ಕಳೆದ 20 ವರ್ಷಗಳಿಂದ ಪ್ರಾಬಲ್ಯ ಹೊಂದಿದೆ. ಈ ಕುಟುಂಬದ ವಿರುದ್ಧ ಈಗ ಜನಾಕ್ರೋಶ ವ್ಯಕ್ತವಾಗಿದೆ. ಅಧ್ಯಕ್ಷ ಮತ್ತು ಪ್ರಧಾನಿ ನಿವಾಸದ ಎದುರು ಹಲವು ದಿನಗಳಿಂದ ಜನರು ಭಾರಿ ಪ್ರತಿಭಟನೆಯಲ್ಲಿ ತೊಡಗಿದ್ದಾರೆ.</p>.<p><strong>ಭಾರತೀಯ ಹೈಕಮಿಷನರ್ ಭೇಟಿ;ಪರಿಸ್ಥಿತಿ ವಿವರಿಸಿದ ನಿಯೋಗ<br />ಕೊಲಂಬೊ </strong>(<strong>ಪಿಟಿಐ</strong>): ಶ್ರೀಲಂಕಾದ ಆಡಳಿತಾರೂಢ ಎಸ್ಎಲ್ಪಿಪಿ ಮೈತ್ರಿ ಪಕ್ಷದ ನಿಯೋಗವು ಭಾರತೀಯ ಹೈಕಮಿಷನರ್ ಅವರನ್ನು ಭೇಟಿಯಾಗಿ ಪ್ರಸಕ್ತ ರಾಜಕೀಯ ಬಿಕ್ಕಟ್ಟಿನ ಕುರಿತು ವಿವರಣೆ ನೀಡಿದೆ.</p>.<p>ಮಾಜಿ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ನೇತೃತ್ವದ ನಿಯೋಗ ಹೈಕಮಿಷನರ್ ಗೋಪಾಲ ಬಾಗಲಯ ಅವರನ್ನು ಭೇಟಿಯಾಗಿತ್ತು ಎಂದು ಎಸ್ಎಲ್ಎಫ್ಪಿ ಮೈತ್ರಿಯ ಪ್ರಧಾನ ಕಾರ್ಯದರ್ಶಿ ದಯಸಿರಿ ಜಯಶೇಖರ ತಿಳಿಸಿದರು.</p>.<p>‘ಮಧ್ಯಂತರ ಸರ್ಕಾರ ರಚಿಸುವ ಚಿಂತನೆ ಇದೆ. ಇದು ಅಧಿಕಾರವನ್ನು ಹಂಚಿಕೊಳ್ಳುವ ಉದ್ದೇಶದಿಂದಲ್ಲ, ಬದಲಿಗೆ ದೇಶವನ್ನು ಈಗಿನ ಆರ್ಥಿಕ ಬಿಕ್ಕಟ್ಟಿನಿಂದ ಹೊರತರುವ ಗುರಿಯನ್ನು ಹೊಂದಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲಂಬೊ</strong>: ದೇಶದ ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಜನಾಕ್ರೋಶಕ್ಕೆ ಮಣಿದಿರುವ ಅಧ್ಯಕ್ಷ ಗೋಟಬಯ ರಾಜಪಕ್ಸ ಅವರು ಪ್ರಧಾನಿ ಸ್ಥಾನದಿಂದ ತನ್ನ ಅಣ್ಣ ಮಹಿಂದಾ ರಾಜಪಕ್ಸ ಅವರ ಪದಚ್ಯುತಿಗೆ ಒಪ್ಪಿದ್ದಾರೆ.</p>.<p>ಪ್ರಧಾನಿ ಸ್ಥಾನಕ್ಕೆ ಹೊಸ ಅಭ್ಯರ್ಥಿ ಹಾಗೂ ಸರ್ವಪಕ್ಷಗಳ ಸದಸ್ಯರನ್ನು ಒಳಗೊಂಡ ಹೊಸ ಸಂಪುಟದ ಆಯ್ಕೆಗಾಗಿ ರಾಷ್ಟ್ರೀಯ ಸಮಿತಿಯನ್ನು ರಚಿಸಲೂ ತೀರ್ಮಾನಿಸಿದ್ದಾರೆ.</p>.<p>ಅಧ್ಯಕ್ಷರ ಜೊತೆಗಿನ ಸಭೆಯ ನಂತರ ಸಂಸದ ಮೈತ್ರಿಪಾಲ ಸಿರಿಸೇನಾ ಅವರು ಈ ವಿಷಯ ತಿಳಿಸಿದರು. ಸಿರಿಸೇನಾ ಅವರು ರಾಜಪಕ್ಸಗೂ ಮೊದಲು ಶ್ರೀಲಂಕಾದ ಅಧ್ಯಕ್ಷರಾಗಿದ್ದರು.</p>.<p>ಆರ್ಥಿಕವಾಗಿ ದಿವಾಳಿಯಾಗಿರುವ ಶ್ರೀಲಂಕಾದ ಸರ್ಕಾರ, ಬಾಕಿ ಇರುವ ವಿದೇಶಿ ಸಾಲ ಪಾವತಿಸದೇ ಅಮಾನತ್ತಿನಲ್ಲಿಡಲು ನಿರ್ಧರಿಸಿದೆ.ವಿದೇಶಿ ಸಾಲದ ಮೊತ್ತ ಹೆಚ್ಚಿರುವುದು ಆಮದು ವಹಿವಾಟಿನ ಮೇಲೂ ಪರಿಣಾಮ ಬೀರಿದ್ದು, ಜನತೆ ಆಹಾರ ಪದಾರ್ಥಗಳು, ಇಂಧನ, ಅಡುಗೆ ಅನಿಲ, ಔಷಧಗಳಿಗೆ ಸಾಲಿನಲ್ಲಿ ನಿಲ್ಲುವ ಸ್ಥಿತಿ ನಿರ್ಮಾಣವಾಗಿದೆ.</p>.<p>ಅಧ್ಯಕ್ಷ ಗೋಟಬಯ, ಪ್ರಧಾನಿ ಮಹಿಂದಾ ಒಳಗೊಂಡಂತೆ ರಾಜಪಕ್ಸ ಕುಟುಂಬವು ಶ್ರೀಲಂಕಾದ ರಾಜಕಾರಣದಲ್ಲಿ ಕಳೆದ 20 ವರ್ಷಗಳಿಂದ ಪ್ರಾಬಲ್ಯ ಹೊಂದಿದೆ. ಈ ಕುಟುಂಬದ ವಿರುದ್ಧ ಈಗ ಜನಾಕ್ರೋಶ ವ್ಯಕ್ತವಾಗಿದೆ. ಅಧ್ಯಕ್ಷ ಮತ್ತು ಪ್ರಧಾನಿ ನಿವಾಸದ ಎದುರು ಹಲವು ದಿನಗಳಿಂದ ಜನರು ಭಾರಿ ಪ್ರತಿಭಟನೆಯಲ್ಲಿ ತೊಡಗಿದ್ದಾರೆ.</p>.<p><strong>ಭಾರತೀಯ ಹೈಕಮಿಷನರ್ ಭೇಟಿ;ಪರಿಸ್ಥಿತಿ ವಿವರಿಸಿದ ನಿಯೋಗ<br />ಕೊಲಂಬೊ </strong>(<strong>ಪಿಟಿಐ</strong>): ಶ್ರೀಲಂಕಾದ ಆಡಳಿತಾರೂಢ ಎಸ್ಎಲ್ಪಿಪಿ ಮೈತ್ರಿ ಪಕ್ಷದ ನಿಯೋಗವು ಭಾರತೀಯ ಹೈಕಮಿಷನರ್ ಅವರನ್ನು ಭೇಟಿಯಾಗಿ ಪ್ರಸಕ್ತ ರಾಜಕೀಯ ಬಿಕ್ಕಟ್ಟಿನ ಕುರಿತು ವಿವರಣೆ ನೀಡಿದೆ.</p>.<p>ಮಾಜಿ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ನೇತೃತ್ವದ ನಿಯೋಗ ಹೈಕಮಿಷನರ್ ಗೋಪಾಲ ಬಾಗಲಯ ಅವರನ್ನು ಭೇಟಿಯಾಗಿತ್ತು ಎಂದು ಎಸ್ಎಲ್ಎಫ್ಪಿ ಮೈತ್ರಿಯ ಪ್ರಧಾನ ಕಾರ್ಯದರ್ಶಿ ದಯಸಿರಿ ಜಯಶೇಖರ ತಿಳಿಸಿದರು.</p>.<p>‘ಮಧ್ಯಂತರ ಸರ್ಕಾರ ರಚಿಸುವ ಚಿಂತನೆ ಇದೆ. ಇದು ಅಧಿಕಾರವನ್ನು ಹಂಚಿಕೊಳ್ಳುವ ಉದ್ದೇಶದಿಂದಲ್ಲ, ಬದಲಿಗೆ ದೇಶವನ್ನು ಈಗಿನ ಆರ್ಥಿಕ ಬಿಕ್ಕಟ್ಟಿನಿಂದ ಹೊರತರುವ ಗುರಿಯನ್ನು ಹೊಂದಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>