<p><strong>ಛತ್ತರಪುರ:</strong> ಮಧ್ಯಪ್ರದೇಶದ ಛತ್ತರಪುರ ಜಿಲ್ಲೆಯ ಬಾಗೇಶ್ವರ ಧಾಮದ ಆವರಣದಲ್ಲಿ ಭಾರಿ ಮಳೆಯಿಂದ ಡೇರೆ ಕುಸಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಮತ್ತು ಇತರ ನಾಲ್ವರಿಗೆ ಗಾಯಗಳಾಗಿವೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.</p>.<p>ಗರ್ಹಾ ಗ್ರಾಮದಲ್ಲಿ ಬೆಳಿಗ್ಗೆ 7:30ರ ಸುಮಾರಿಗೆ ಧಾರಾಕಾರ ಮಳೆಯಿಂದ ಪಾರಾಗಲು ಡೇರೆಯಲ್ಲಿ ಆಶ್ರಯ ಪಡೆಯುತ್ತಿದ್ದ ವೇಳೆ ಘಟನೆ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿ ಆಶುತೋಷ್ ಶ್ರೋತಿ ತಿಳಿಸಿದ್ದಾರೆ.</p>.<p>ತೀವ್ರವಾಗಿ ಗಾಯಗೊಂಡಿದ್ದ ಇಬ್ಬರನ್ನು ಛತ್ತರಪುರ ಆಸ್ಪತ್ರೆಯಲ್ಲಿ ದಾಖಲಿಸಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮತ್ತಿಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಅವರು ತಿಳಿಸಿದರು. </p>.<p class="title">ಮೃತರನ್ನು ಉತ್ತರಪ್ರದೇಶದ ಶ್ಯಾಮಲಾಲ್ ಕೌಶಲ್ (50) ಎಂದು ಗುರುತಿಸಲಾಗಿದೆ. ಜನ್ಮದಿನದ ಅಂಗವಾಗಿ ಅವರು ಬಾಗೇಶ್ವರ ಧಾಮದ ಧರ್ಮದರ್ಶಿ ಧೀರೇಂದ್ರ ಶಾಸ್ತ್ರಿ ಅವರ ಆಶೀರ್ವಾದ ಪಡೆಯಲು ಕುಟುಂಬಸ್ಥರೊಂದಿಗೆ ಬಂದಿದ್ದರು ಎಂದು ಶ್ಯಾಮಲಾಲ್ ಅಳಿಯ ರಾಜೇಶ್ ಕೌಶಲ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಛತ್ತರಪುರ:</strong> ಮಧ್ಯಪ್ರದೇಶದ ಛತ್ತರಪುರ ಜಿಲ್ಲೆಯ ಬಾಗೇಶ್ವರ ಧಾಮದ ಆವರಣದಲ್ಲಿ ಭಾರಿ ಮಳೆಯಿಂದ ಡೇರೆ ಕುಸಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಮತ್ತು ಇತರ ನಾಲ್ವರಿಗೆ ಗಾಯಗಳಾಗಿವೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.</p>.<p>ಗರ್ಹಾ ಗ್ರಾಮದಲ್ಲಿ ಬೆಳಿಗ್ಗೆ 7:30ರ ಸುಮಾರಿಗೆ ಧಾರಾಕಾರ ಮಳೆಯಿಂದ ಪಾರಾಗಲು ಡೇರೆಯಲ್ಲಿ ಆಶ್ರಯ ಪಡೆಯುತ್ತಿದ್ದ ವೇಳೆ ಘಟನೆ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿ ಆಶುತೋಷ್ ಶ್ರೋತಿ ತಿಳಿಸಿದ್ದಾರೆ.</p>.<p>ತೀವ್ರವಾಗಿ ಗಾಯಗೊಂಡಿದ್ದ ಇಬ್ಬರನ್ನು ಛತ್ತರಪುರ ಆಸ್ಪತ್ರೆಯಲ್ಲಿ ದಾಖಲಿಸಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮತ್ತಿಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಅವರು ತಿಳಿಸಿದರು. </p>.<p class="title">ಮೃತರನ್ನು ಉತ್ತರಪ್ರದೇಶದ ಶ್ಯಾಮಲಾಲ್ ಕೌಶಲ್ (50) ಎಂದು ಗುರುತಿಸಲಾಗಿದೆ. ಜನ್ಮದಿನದ ಅಂಗವಾಗಿ ಅವರು ಬಾಗೇಶ್ವರ ಧಾಮದ ಧರ್ಮದರ್ಶಿ ಧೀರೇಂದ್ರ ಶಾಸ್ತ್ರಿ ಅವರ ಆಶೀರ್ವಾದ ಪಡೆಯಲು ಕುಟುಂಬಸ್ಥರೊಂದಿಗೆ ಬಂದಿದ್ದರು ಎಂದು ಶ್ಯಾಮಲಾಲ್ ಅಳಿಯ ರಾಜೇಶ್ ಕೌಶಲ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>