<p><strong>ನವದೆಹಲಿ:</strong> 'ಧೈರ್ಯ ಮತ್ತು ದಿಟ್ಟತನ ಏನು ಎಂಬುದನ್ನು ಇರಾನ್ ಜಗತ್ತಿಗೆ ಕಲಿಸಿಕೊಟ್ಟಿದೆ' ಎಂದು ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಬುಧವಾರ ಹೇಳಿದ್ದಾರೆ. </p><p>ಅಲ್ಲದೆ ಭಾರತದ ವಿದೇಶಾಂಗ ನೀತಿಯ ಕುರಿತು ಮಹುವಾ ಪ್ರಶ್ನಿಸಿದ್ದಾರೆ. </p><p>ಬುಧವಾರದಂದು ಅಮೆರಿಕ ಹಾಗೂ ಇರಾನ್ ನಡುವೆ ಎರಡು ವಾರಗಳ ತಾತ್ಕಾಲಿಕ ಕದನ ವಿರಾಮ ಏರ್ಪಟ್ಟಿತ್ತು. ಆದರೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒತ್ತಡಕ್ಕೆ ಇರಾನ್ ಜಗ್ಗಲಿಲ್ಲ ಎಂದು ವರದಿಯಾಗಿತ್ತು. </p>.ಟ್ರಂಪ್ ಸೂಚನೆಯಂತೆ ಪಾಕ್ ಪ್ರಧಾನಿಯಿಂದ ಮೆಸೇಜ್ ಕಾಪಿ-ಪೇಸ್ಟ್? ಟ್ರೋಲ್ಗೆ ಗುರಿ.ಸಂಪೂರ್ಣ ಹಾನಿ ಭರಿಸಬೇಕು: ಅಮೆರಿಕ ಎದುರು ಇರಾನ್ ಇಟ್ಟಿರುವ 10 ಷರತ್ತುಗಳಿವು.<p>ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಮಹುವಾ, 'ಧೈರ್ಯ ಮತ್ತು ದಿಟ್ಟತನವನ್ನು ಇರಾನ್ ಜಗತ್ತಿಗೆ ತೋರಿಸಿಕೊಟ್ಟಿದೆ. ಬಹುಶಃ ನಮ್ಮ ದೇಶದ ನಾಯಕತ್ವವು ಬೆದರಿಕೆ ಒಡ್ಡುವವರನ್ನು ಕೆಚ್ಚೆದೆಯಿಂದ ಎದುರಿಸಬೇಕು' ಎಂದಿದ್ದಾರೆ. </p><p>'ಭಾರತವು ತನ್ನದೇ ಆದ ಕದನ ವಿರಾಮ, ತನ್ನದೇ ಆದ ವ್ಯಾಪಾರ ಒಪ್ಪಂದ ಮತ್ತು ತನ್ನದೇ ಆದ ಇಂಧನ ನೀತಿಯನ್ನು ಘೋಷಿಸಬೇಕು' ಎಂದು ಅವರು ಆಗ್ರಹಿಸಿದ್ದಾರೆ. </p><p>ಭಾರತ ಹಾಗೂ ಪಾಕಿಸ್ತಾನ ನಡುವಣ ಯುದ್ಧವನ್ನು ನಿಲ್ಲಿಸಿದ್ದೇನೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 50ಕ್ಕೂ ಹೆಚ್ಚು ಸಲ ಹೇಳಿಕೆ ನೀಡಿದ್ದರು. ಆದರೆ ಭಾರತ ಹಾಗೂ ಪಾಕ್ ನಡುವಣ ಬಿಕ್ಕಟ್ಟಿನಲ್ಲಿ ಮೂರನೇ ದೇಶದ ಮಧ್ಯಪ್ರವೇಶವನ್ನು ಭಾರತ ನಿರಾಕರಿಸುತ್ತಲೇ ಬಂದಿದೆ. </p><p>ಇನ್ನು ಡೊನಾಲ್ಡ್ ಟ್ರಂಪ್ ಅವರು ಬಯಸಿದಂತೆ ಭಾರತ ಹಾಗೂ ಅಮೆರಿಕ ನಡುವೆ ವ್ಯಾಪಾರ ಒಪ್ಪಂದ ಏರ್ಪಟ್ಟಿತ್ತು ಮತ್ತು ಅಮೆರಿಕದ ನಿರ್ದೇಶನದಂತೆ ರಷ್ಯಾದಿಂದ ತೈಲ ಖರೀದಿಯನ್ನು ಭಾರತ ನಿಲ್ಲಿಸಿತ್ತು ಎಂಬುದಕ್ಕೆ ಸಂಬಂಧಿಸಿದಂತೆ ಆರೋಪಗಳು ಕೇಳಿ ಬಂದಿವೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> 'ಧೈರ್ಯ ಮತ್ತು ದಿಟ್ಟತನ ಏನು ಎಂಬುದನ್ನು ಇರಾನ್ ಜಗತ್ತಿಗೆ ಕಲಿಸಿಕೊಟ್ಟಿದೆ' ಎಂದು ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಬುಧವಾರ ಹೇಳಿದ್ದಾರೆ. </p><p>ಅಲ್ಲದೆ ಭಾರತದ ವಿದೇಶಾಂಗ ನೀತಿಯ ಕುರಿತು ಮಹುವಾ ಪ್ರಶ್ನಿಸಿದ್ದಾರೆ. </p><p>ಬುಧವಾರದಂದು ಅಮೆರಿಕ ಹಾಗೂ ಇರಾನ್ ನಡುವೆ ಎರಡು ವಾರಗಳ ತಾತ್ಕಾಲಿಕ ಕದನ ವಿರಾಮ ಏರ್ಪಟ್ಟಿತ್ತು. ಆದರೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒತ್ತಡಕ್ಕೆ ಇರಾನ್ ಜಗ್ಗಲಿಲ್ಲ ಎಂದು ವರದಿಯಾಗಿತ್ತು. </p>.ಟ್ರಂಪ್ ಸೂಚನೆಯಂತೆ ಪಾಕ್ ಪ್ರಧಾನಿಯಿಂದ ಮೆಸೇಜ್ ಕಾಪಿ-ಪೇಸ್ಟ್? ಟ್ರೋಲ್ಗೆ ಗುರಿ.ಸಂಪೂರ್ಣ ಹಾನಿ ಭರಿಸಬೇಕು: ಅಮೆರಿಕ ಎದುರು ಇರಾನ್ ಇಟ್ಟಿರುವ 10 ಷರತ್ತುಗಳಿವು.<p>ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಮಹುವಾ, 'ಧೈರ್ಯ ಮತ್ತು ದಿಟ್ಟತನವನ್ನು ಇರಾನ್ ಜಗತ್ತಿಗೆ ತೋರಿಸಿಕೊಟ್ಟಿದೆ. ಬಹುಶಃ ನಮ್ಮ ದೇಶದ ನಾಯಕತ್ವವು ಬೆದರಿಕೆ ಒಡ್ಡುವವರನ್ನು ಕೆಚ್ಚೆದೆಯಿಂದ ಎದುರಿಸಬೇಕು' ಎಂದಿದ್ದಾರೆ. </p><p>'ಭಾರತವು ತನ್ನದೇ ಆದ ಕದನ ವಿರಾಮ, ತನ್ನದೇ ಆದ ವ್ಯಾಪಾರ ಒಪ್ಪಂದ ಮತ್ತು ತನ್ನದೇ ಆದ ಇಂಧನ ನೀತಿಯನ್ನು ಘೋಷಿಸಬೇಕು' ಎಂದು ಅವರು ಆಗ್ರಹಿಸಿದ್ದಾರೆ. </p><p>ಭಾರತ ಹಾಗೂ ಪಾಕಿಸ್ತಾನ ನಡುವಣ ಯುದ್ಧವನ್ನು ನಿಲ್ಲಿಸಿದ್ದೇನೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 50ಕ್ಕೂ ಹೆಚ್ಚು ಸಲ ಹೇಳಿಕೆ ನೀಡಿದ್ದರು. ಆದರೆ ಭಾರತ ಹಾಗೂ ಪಾಕ್ ನಡುವಣ ಬಿಕ್ಕಟ್ಟಿನಲ್ಲಿ ಮೂರನೇ ದೇಶದ ಮಧ್ಯಪ್ರವೇಶವನ್ನು ಭಾರತ ನಿರಾಕರಿಸುತ್ತಲೇ ಬಂದಿದೆ. </p><p>ಇನ್ನು ಡೊನಾಲ್ಡ್ ಟ್ರಂಪ್ ಅವರು ಬಯಸಿದಂತೆ ಭಾರತ ಹಾಗೂ ಅಮೆರಿಕ ನಡುವೆ ವ್ಯಾಪಾರ ಒಪ್ಪಂದ ಏರ್ಪಟ್ಟಿತ್ತು ಮತ್ತು ಅಮೆರಿಕದ ನಿರ್ದೇಶನದಂತೆ ರಷ್ಯಾದಿಂದ ತೈಲ ಖರೀದಿಯನ್ನು ಭಾರತ ನಿಲ್ಲಿಸಿತ್ತು ಎಂಬುದಕ್ಕೆ ಸಂಬಂಧಿಸಿದಂತೆ ಆರೋಪಗಳು ಕೇಳಿ ಬಂದಿವೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>