ಈ ಬಗ್ಗೆ ಭಾನುವಾರ ಜಂಟಿ ಹೇಳಿಕೆ ಬಿಡುಗಡೆ ಮಾಡಿರುವ ಸರ್ಕಾರದ ಪ್ರತಿನಿಧಿ ಮತ್ತು ವಿರೋಧ ಪಕ್ಷದ ನಾಯಕ ಅನ್ವರ್ ಅವರು, ‘ದ್ವಿಪಕ್ಷೀಯ ಸಹಕಾರವು ದೇಶದಲ್ಲಿ ರಾಜಕೀಯ ಸ್ಥಿರತೆಯನ್ನು ಮರುಸ್ಥಾಪಿಸಲಿದೆ. ಇದು ಕೋವಿಡ್ ಪಿಡುಗಿನ ವಿರುದ್ಧದ ಹೋರಾಟ ಮತ್ತು ಆರ್ಥಿಕತೆಯನ್ನು ಪುನರುಜ್ಜೀವನಗೊಳಿಸಲು ನೆರವಾಗಲಿದೆ’ ಎಂದು ಹೇಳಿದರು.