<p><strong>ನವದೆಹಲಿ: </strong>ಅಫ್ಗಾನಿಸ್ತಾನದ ಹಿಂದೂಕುಶ್ ಪ್ರದೇಶದಲ್ಲಿ ಮಂಗಳವಾರ ತಡರಾತ್ರಿ 6.6 ತೀವ್ರತೆಯ ಭೂಕಂಪನವಾಗಿದೆ.<br /><br />ಪಾಕಿಸ್ತಾನದಲ್ಲಿಯೂ ಕಂಪನವಾಗಿದ್ದು, 9 ಜನ ಮೃತಪಟ್ಟಿದ್ದಾರೆ. ಉತ್ತರ ಭಾರತದಲ್ಲೂ ಪ್ರಬಲ ಕಂಪನದ ಅನುಭವವಾಗಿದೆ.<br /><br />ಅಮೆರಿಕದ ಜಿಯೋಲಾಜಿಕಲ್ ಸರ್ವೆ ಪ್ರಕಾರ, ಭೂಕಂಪದ ಕೇಂದ್ರಬಿಂದು ಅಫ್ಗಾನಿಸ್ತಾನದ ಜುರ್ನ್ನಲ್ಲಿ 180 ಕಿಲೋಮೀಟರ್ ಆಳದಲ್ಲಿದೆ.</p>.<p>ದೆಹಲಿ-ಎನ್ಸಿಆರ್ ಸೇರಿದಂತೆ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಪ್ರಬಲ ಭೂಕಂಪದ ಅನುಭವವಾಗಿದೆ. ಜಮ್ಮು ಮತ್ತು ಕಾಶ್ಮೀರ, ಹರಿಯಾಣ, ಪಂಜಾಬ್, ಹಿಮಾಚಲ ಪ್ರದೇಶ ಮತ್ತು ರಾಜಸ್ಥಾನದಲ್ಲೂ ಭೂಕಂಪದ ಅನುಭವವಾಗಿದೆ.</p>.<p>'ದೆಹಲಿ-ಎನ್ಸಿಆರ್ನಾದ್ಯಂತ ಬಲವಾದ ಕಂಪನಗಳು ಸಂಭವಿಸಿವೆ. ನೀವೆಲ್ಲರೂ ಸುರಕ್ಷಿತವಾಗಿರುತ್ತೀರಿ ಎಂದು ಭಾವಿಸುತ್ತೇವೆ' ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.</p>.<p><strong>9 ಮಂದಿ ಸಾವು</strong><br />ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಪ್ರಬಲ ಭೂಕಂಪನದಿಂದ 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ ಎಂದು ಪಾಕಿಸ್ತಾನದ ತುರ್ತು ಸೇವೆಗಳ ವಕ್ತಾರ ಬಿಲಾಲ್ ಫೈಜಿ ಸ್ಥಳೀಯ ಮಾಧ್ಯಮಗಳಿಗೆ ತಿಳಿಸಿದ್ದಾರೆ.<br /><br />ಪಾಕಿಸ್ತಾನದ ಆರೋಗ್ಯ ಸಚಿವ ಅಬ್ದುಲ್ ಖಾದಿರ್ ಪಟೇಲ್ ಅವರು ಪಾಕಿಸ್ತಾನ ವೈದ್ಯಕೀಯ ವಿಜ್ಞಾನ ಸಂಸ್ಥೆ ಮತ್ತು ಫೆಡರಲ್ ಗವರ್ನಮೆಂಟ್ ಪಾಲಿಕ್ಲಿನಿಕ್ನಲ್ಲಿ ತುರ್ತು ಎಚ್ಚರಿಕೆಯನ್ನು ನೀಡಿದ್ದಾರೆ ಎಂದು ಜಿಯೋ ನ್ಯೂಸ್ ವರದಿ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಅಫ್ಗಾನಿಸ್ತಾನದ ಹಿಂದೂಕುಶ್ ಪ್ರದೇಶದಲ್ಲಿ ಮಂಗಳವಾರ ತಡರಾತ್ರಿ 6.6 ತೀವ್ರತೆಯ ಭೂಕಂಪನವಾಗಿದೆ.<br /><br />ಪಾಕಿಸ್ತಾನದಲ್ಲಿಯೂ ಕಂಪನವಾಗಿದ್ದು, 9 ಜನ ಮೃತಪಟ್ಟಿದ್ದಾರೆ. ಉತ್ತರ ಭಾರತದಲ್ಲೂ ಪ್ರಬಲ ಕಂಪನದ ಅನುಭವವಾಗಿದೆ.<br /><br />ಅಮೆರಿಕದ ಜಿಯೋಲಾಜಿಕಲ್ ಸರ್ವೆ ಪ್ರಕಾರ, ಭೂಕಂಪದ ಕೇಂದ್ರಬಿಂದು ಅಫ್ಗಾನಿಸ್ತಾನದ ಜುರ್ನ್ನಲ್ಲಿ 180 ಕಿಲೋಮೀಟರ್ ಆಳದಲ್ಲಿದೆ.</p>.<p>ದೆಹಲಿ-ಎನ್ಸಿಆರ್ ಸೇರಿದಂತೆ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಪ್ರಬಲ ಭೂಕಂಪದ ಅನುಭವವಾಗಿದೆ. ಜಮ್ಮು ಮತ್ತು ಕಾಶ್ಮೀರ, ಹರಿಯಾಣ, ಪಂಜಾಬ್, ಹಿಮಾಚಲ ಪ್ರದೇಶ ಮತ್ತು ರಾಜಸ್ಥಾನದಲ್ಲೂ ಭೂಕಂಪದ ಅನುಭವವಾಗಿದೆ.</p>.<p>'ದೆಹಲಿ-ಎನ್ಸಿಆರ್ನಾದ್ಯಂತ ಬಲವಾದ ಕಂಪನಗಳು ಸಂಭವಿಸಿವೆ. ನೀವೆಲ್ಲರೂ ಸುರಕ್ಷಿತವಾಗಿರುತ್ತೀರಿ ಎಂದು ಭಾವಿಸುತ್ತೇವೆ' ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.</p>.<p><strong>9 ಮಂದಿ ಸಾವು</strong><br />ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಪ್ರಬಲ ಭೂಕಂಪನದಿಂದ 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ ಎಂದು ಪಾಕಿಸ್ತಾನದ ತುರ್ತು ಸೇವೆಗಳ ವಕ್ತಾರ ಬಿಲಾಲ್ ಫೈಜಿ ಸ್ಥಳೀಯ ಮಾಧ್ಯಮಗಳಿಗೆ ತಿಳಿಸಿದ್ದಾರೆ.<br /><br />ಪಾಕಿಸ್ತಾನದ ಆರೋಗ್ಯ ಸಚಿವ ಅಬ್ದುಲ್ ಖಾದಿರ್ ಪಟೇಲ್ ಅವರು ಪಾಕಿಸ್ತಾನ ವೈದ್ಯಕೀಯ ವಿಜ್ಞಾನ ಸಂಸ್ಥೆ ಮತ್ತು ಫೆಡರಲ್ ಗವರ್ನಮೆಂಟ್ ಪಾಲಿಕ್ಲಿನಿಕ್ನಲ್ಲಿ ತುರ್ತು ಎಚ್ಚರಿಕೆಯನ್ನು ನೀಡಿದ್ದಾರೆ ಎಂದು ಜಿಯೋ ನ್ಯೂಸ್ ವರದಿ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>