<p><strong>ಇಸ್ಲಾಮಾಬಾದ್:</strong> ‘ಪಾಕಿಸ್ತಾನ ಮತ್ತು ಇರಾನ್ ಗಡಿಪ್ರದೇಶದಲ್ಲಿ ನೆಲೆಸಿರುವ ಭಯೋತ್ಪಾದಕರಿಗೆ ತೃತೀಯ ರಾಷ್ಟ್ರಗಳು ಬೆಂಬಲ ನೀಡುತ್ತಿವೆ. ಈ ಬಗ್ಗೆ ಯಾವುದೇ ಅನುಮಾನಗಳಿಲ್ಲ’ ಎಂದು ಇರಾನ್ ವಿದೇಶಾಂಗ ಸಚಿವ ಹೊಸೈನ್ ಅಮಿರ್ ಅಬ್ದೊಲ್ಲಾಹಿಯಾನ್ ಆರೋಪಿಸಿದ್ದಾರೆ.</p>.<p>ಸೇನಾ ದಾಳಿಗೆ ಸಂಬಂಧಿಸಿದಂತೆ ಉಭಯ ರಾಷ್ಟ್ರಗಳ ನಡುವೆ ಉಂಟಾಗಿದ್ದ ಭಿನ್ನಮತ ಶಮನಕ್ಕಾಗಿ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದ ಹೊಸೈನ್ ಅವರು, ವಿದೇಶಾಂಗ ಸಚಿವ ಜಲೀಲ್ ಅಬ್ಬಾಸ್ ಜಿಲಾನಿ ಜತೆ ಸೋಮವಾರ ಜಂಟಿ ಸುದ್ದಿಗೋಷ್ಠಿ ನಡೆಸಿದರು. </p>.<p>ಅಫ್ಗಾನಿಸ್ತಾನದ ಮೇಲೆ ಪರೋಕ್ಷವಾಗಿ ಆರೋಪ ಮಾಡಿದ ಹುಸೈನ್, ‘ಗಡಿಭಾಗದಲ್ಲಿನ ಭಯೋತ್ಪಾದಕ ಚಟುವಟಿಕೆಗಳ ಹಿಂದೆ ತೃತೀಯ ರಾಷ್ಟ್ರಗಳ ಕೈವಾಡವಿದ್ದು, ಆ ರಾಷ್ಟ್ರಗಳು ಇರಾನ್ ಮತ್ತು ಪಾಕಿಸ್ತಾನಕ್ಕೆ ಯಾವುದೇ ಒಳಿತನ್ನು ಮಾಡುವುದಿಲ್ಲ’ ಎಂದು ಟೀಕಿಸಿದ್ದಾರೆ.</p>.<p>ಪಾಕಿಸ್ತಾನದ ವಿದೇಶಾಂಗ ಸಚಿವ ಜಿಲಾನಿ ಮಾತನಾಡಿ, ‘ಉಭಯ ರಾಷ್ಟ್ರಗಳು ಭಯೋತ್ಪಾದನೆಯ ಸವಾಲು ಎದುರಿಸುತ್ತಿವೆ. ಹೀಗಾಗಿ, ಭಯೋತ್ಪಾದನೆ ಎದುರಿಸಲು ಒಪ್ಪಿಗೆ ಸೂಚಿಸಲಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಸ್ಲಾಮಾಬಾದ್:</strong> ‘ಪಾಕಿಸ್ತಾನ ಮತ್ತು ಇರಾನ್ ಗಡಿಪ್ರದೇಶದಲ್ಲಿ ನೆಲೆಸಿರುವ ಭಯೋತ್ಪಾದಕರಿಗೆ ತೃತೀಯ ರಾಷ್ಟ್ರಗಳು ಬೆಂಬಲ ನೀಡುತ್ತಿವೆ. ಈ ಬಗ್ಗೆ ಯಾವುದೇ ಅನುಮಾನಗಳಿಲ್ಲ’ ಎಂದು ಇರಾನ್ ವಿದೇಶಾಂಗ ಸಚಿವ ಹೊಸೈನ್ ಅಮಿರ್ ಅಬ್ದೊಲ್ಲಾಹಿಯಾನ್ ಆರೋಪಿಸಿದ್ದಾರೆ.</p>.<p>ಸೇನಾ ದಾಳಿಗೆ ಸಂಬಂಧಿಸಿದಂತೆ ಉಭಯ ರಾಷ್ಟ್ರಗಳ ನಡುವೆ ಉಂಟಾಗಿದ್ದ ಭಿನ್ನಮತ ಶಮನಕ್ಕಾಗಿ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದ ಹೊಸೈನ್ ಅವರು, ವಿದೇಶಾಂಗ ಸಚಿವ ಜಲೀಲ್ ಅಬ್ಬಾಸ್ ಜಿಲಾನಿ ಜತೆ ಸೋಮವಾರ ಜಂಟಿ ಸುದ್ದಿಗೋಷ್ಠಿ ನಡೆಸಿದರು. </p>.<p>ಅಫ್ಗಾನಿಸ್ತಾನದ ಮೇಲೆ ಪರೋಕ್ಷವಾಗಿ ಆರೋಪ ಮಾಡಿದ ಹುಸೈನ್, ‘ಗಡಿಭಾಗದಲ್ಲಿನ ಭಯೋತ್ಪಾದಕ ಚಟುವಟಿಕೆಗಳ ಹಿಂದೆ ತೃತೀಯ ರಾಷ್ಟ್ರಗಳ ಕೈವಾಡವಿದ್ದು, ಆ ರಾಷ್ಟ್ರಗಳು ಇರಾನ್ ಮತ್ತು ಪಾಕಿಸ್ತಾನಕ್ಕೆ ಯಾವುದೇ ಒಳಿತನ್ನು ಮಾಡುವುದಿಲ್ಲ’ ಎಂದು ಟೀಕಿಸಿದ್ದಾರೆ.</p>.<p>ಪಾಕಿಸ್ತಾನದ ವಿದೇಶಾಂಗ ಸಚಿವ ಜಿಲಾನಿ ಮಾತನಾಡಿ, ‘ಉಭಯ ರಾಷ್ಟ್ರಗಳು ಭಯೋತ್ಪಾದನೆಯ ಸವಾಲು ಎದುರಿಸುತ್ತಿವೆ. ಹೀಗಾಗಿ, ಭಯೋತ್ಪಾದನೆ ಎದುರಿಸಲು ಒಪ್ಪಿಗೆ ಸೂಚಿಸಲಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>