<p class="title"><strong>ಡೆನ್ಪಾಸರ್, ಇಂಡೊನೇಷ್ಯಾ: </strong>ಇಂಡೊನೇಷ್ಯಾದ ಬಾಲಿ ದ್ವೀಪದಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ಎರಡು ಸರಣಿ ಭೂಕಂಪನದಲ್ಲಿ ಮೂವರು ಮೃತಪಟ್ಟಿದ್ದು, 7 ಮಂದಿ ಗಾಯಗೊಂಡಿದ್ದಾರೆ.</p>.<p>‘ಭೂಕಂಪನದಿಂದ ಗುಡ್ಡ ಪ್ರದೇಶದ ಜಿಲ್ಲೆಯಲ್ಲಿ ಭೂಕುಸಿತ ಉಂಟಾಗಿದೆ. ಇದರಿಂದ ಕನಿಷ್ಠ ಇಬ್ಬರು ಸಾವಿಗೀಡಾಗಿದ್ದು ಮೂರು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ’ ಎಂದು ದ್ವೀಪದ ಶೋಧ ಮತ್ತು ರಕ್ಷಣಾ ಸಂಸ್ಥೆಯ ಮುಖ್ಯಸ್ಥ ಗೆಡೆ ದರ್ಮದಾ ಹೇಳಿದರು.</p>.<p>‘ಭೂಕಂಪನದಲ್ಲಿ ಸಂಭವಿಸಿದ ಹಾನಿ ಮತ್ತು ಸಾವು– ನೋವುಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಮೂಳೆ ಮುರಿತ ಮತ್ತು ತಲೆಗೆ ಪೆಟ್ಟು ಬಿದ್ದಿರುವಂತಹ ಗಾಯಗಳಾಗಿವೆ’ ಎಂದು ದ್ವೀಪದ ಶೋಧ ಮತ್ತು ರಕ್ಷಣಾ ಸಂಸ್ಥೆಯ ಮುಖ್ಯಸ್ಥ ಗೆಡೆ ದರ್ಮದಾ ಹೇಳಿದರು.</p>.<p class="title">ಬೆಳಕು ಮೂಡುವ ಮುನ್ನವೇ ಭೂಮಿ ಕಂಪಿಸಿದೆ. ಇದರಿಂದ ಭಯಗೊಂಡ ಜನರು ಮನೆಯಿಂದ ಹೊರಗೆ ಓಡಿಹೋಗಿದ್ದಾರೆ. ಕೋವಿಡ್ ಪಿಡುಗು ಕಡಿಮೆಯಾಗುತ್ತಿದ್ದಂತೆ ದ್ವೀಪ ರಾಷ್ಟ್ರವು ತನ್ನ ಪ್ರವಾಸೋದ್ಯಮವನ್ನು ಮತ್ತೆ ಪ್ರಾರಂಭಿಸುತ್ತಿರುವ ಹೊತ್ತಿನಲ್ಲೇ ಈ ದುರಂತ ಸಂಭವಿಸಿದೆ.</p>.<p class="title">ಮೊದಲಿಗೆ 4.8 ತೀವ್ರತೆಯ ಭೂಕಂಪನ ಸಂಭವಿಸಿದೆ. ಇದು ಬಾಲಿ ಬಂದರು ಪಟ್ಟಣ ಸಿಂಗರಾಜದಿಂದ ಈಶಾನ್ಯಕ್ಕೆ 62 ಕಿ.ಮೀ. ದೂರದಲ್ಲಿ ಕೇಂದ್ರೀಕೃತವಾಗಿತ್ತು. 10 ಕಿ.ಮೀ. ಕಡಿಮೆ ಆಳದಲ್ಲಿ ಸಂಭವಿಸಿದ ಭೂಕಂಪನದಿಂದ ಹಾನಿ ಪ್ರಮಾಣ ಕಡಿಮೆಯಾಗಿರಬಹುದು ಎಂದು ಅಮೆರಿಕ ಭೂವೈಜ್ಞಾನಿಕ ಸಮೀಕ್ಷೆ ಹೇಳಿದೆ.</p>.<p class="bodytext">ನಂತರದಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದ್ದು 282 ಕಿ.ಮೀ. ಆಳದಲ್ಲಿ ಕೇಂದ್ರೀಕೃತವಾಗಿತ್ತು ಎಂದೂ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಡೆನ್ಪಾಸರ್, ಇಂಡೊನೇಷ್ಯಾ: </strong>ಇಂಡೊನೇಷ್ಯಾದ ಬಾಲಿ ದ್ವೀಪದಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ಎರಡು ಸರಣಿ ಭೂಕಂಪನದಲ್ಲಿ ಮೂವರು ಮೃತಪಟ್ಟಿದ್ದು, 7 ಮಂದಿ ಗಾಯಗೊಂಡಿದ್ದಾರೆ.</p>.<p>‘ಭೂಕಂಪನದಿಂದ ಗುಡ್ಡ ಪ್ರದೇಶದ ಜಿಲ್ಲೆಯಲ್ಲಿ ಭೂಕುಸಿತ ಉಂಟಾಗಿದೆ. ಇದರಿಂದ ಕನಿಷ್ಠ ಇಬ್ಬರು ಸಾವಿಗೀಡಾಗಿದ್ದು ಮೂರು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ’ ಎಂದು ದ್ವೀಪದ ಶೋಧ ಮತ್ತು ರಕ್ಷಣಾ ಸಂಸ್ಥೆಯ ಮುಖ್ಯಸ್ಥ ಗೆಡೆ ದರ್ಮದಾ ಹೇಳಿದರು.</p>.<p>‘ಭೂಕಂಪನದಲ್ಲಿ ಸಂಭವಿಸಿದ ಹಾನಿ ಮತ್ತು ಸಾವು– ನೋವುಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಮೂಳೆ ಮುರಿತ ಮತ್ತು ತಲೆಗೆ ಪೆಟ್ಟು ಬಿದ್ದಿರುವಂತಹ ಗಾಯಗಳಾಗಿವೆ’ ಎಂದು ದ್ವೀಪದ ಶೋಧ ಮತ್ತು ರಕ್ಷಣಾ ಸಂಸ್ಥೆಯ ಮುಖ್ಯಸ್ಥ ಗೆಡೆ ದರ್ಮದಾ ಹೇಳಿದರು.</p>.<p class="title">ಬೆಳಕು ಮೂಡುವ ಮುನ್ನವೇ ಭೂಮಿ ಕಂಪಿಸಿದೆ. ಇದರಿಂದ ಭಯಗೊಂಡ ಜನರು ಮನೆಯಿಂದ ಹೊರಗೆ ಓಡಿಹೋಗಿದ್ದಾರೆ. ಕೋವಿಡ್ ಪಿಡುಗು ಕಡಿಮೆಯಾಗುತ್ತಿದ್ದಂತೆ ದ್ವೀಪ ರಾಷ್ಟ್ರವು ತನ್ನ ಪ್ರವಾಸೋದ್ಯಮವನ್ನು ಮತ್ತೆ ಪ್ರಾರಂಭಿಸುತ್ತಿರುವ ಹೊತ್ತಿನಲ್ಲೇ ಈ ದುರಂತ ಸಂಭವಿಸಿದೆ.</p>.<p class="title">ಮೊದಲಿಗೆ 4.8 ತೀವ್ರತೆಯ ಭೂಕಂಪನ ಸಂಭವಿಸಿದೆ. ಇದು ಬಾಲಿ ಬಂದರು ಪಟ್ಟಣ ಸಿಂಗರಾಜದಿಂದ ಈಶಾನ್ಯಕ್ಕೆ 62 ಕಿ.ಮೀ. ದೂರದಲ್ಲಿ ಕೇಂದ್ರೀಕೃತವಾಗಿತ್ತು. 10 ಕಿ.ಮೀ. ಕಡಿಮೆ ಆಳದಲ್ಲಿ ಸಂಭವಿಸಿದ ಭೂಕಂಪನದಿಂದ ಹಾನಿ ಪ್ರಮಾಣ ಕಡಿಮೆಯಾಗಿರಬಹುದು ಎಂದು ಅಮೆರಿಕ ಭೂವೈಜ್ಞಾನಿಕ ಸಮೀಕ್ಷೆ ಹೇಳಿದೆ.</p>.<p class="bodytext">ನಂತರದಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದ್ದು 282 ಕಿ.ಮೀ. ಆಳದಲ್ಲಿ ಕೇಂದ್ರೀಕೃತವಾಗಿತ್ತು ಎಂದೂ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>