<p><strong>ವಾಷಿಂಗ್ಟನ್</strong>: ಇಫ್ತಾರ್ ಕೂಟಕ್ಕೆ ಶ್ವೇತ ಭವನ ನೀಡಿದ್ದ ಆಹ್ವಾನವನ್ನು ಅಮೆರಿಕದಲ್ಲಿರುವ ಮುಸ್ಲಿಂ ಸಮುದಾಯದ ಸದಸ್ಯರು ತಿರಸ್ಕರಿಸಿರುವುದು ವರದಿಯಾಗಿದೆ.</p>.<p>‘ಗಾಜಾದ ಮೇಲೆ ಇಸ್ರೇಲ್ ನಡೆಸುತ್ತಿರುವ ಯುದ್ಧಕ್ಕೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರು ಬೆಂಬಲ ನೀಡುತ್ತಿರುವುದನ್ನು ಖಂಡಿಸಿ ಮುಸ್ಲಿಂ ಸಮುದಾಯದ ಸದಸ್ಯರು ಈ ನಿರ್ಧಾರ ಕೈಗೊಂಡಿದ್ದಾರೆ’ ಎಂದು ಮಾಧ್ಯಮಗಳು ಬುಧವಾರ ವರದಿ ಮಾಡಿವೆ.</p>.<p>‘ಇಸ್ರೇಲ್ಗೆ ಬೆಂಬಲ ನೀಡುತ್ತಿರುವುದರಿಂದ ಜೋ ಬೈಡನ್ ಅವರ ವಿರುದ್ಧ ಅನೇಕ ಆಹ್ವಾನಿತರು ಬೇಸರಗೊಂಡಿದ್ದಾರೆ. ಪ್ಯಾಲೆಸ್ಟೀನ್ನ ಜನರು ಸಂಕಷ್ಟಕ್ಕೆ ಸಿಲುಕಿರುವ ಸಂದರ್ಭದಲ್ಲಿ ಬೈಡನ್ ಅವರು ಮಂಗಳವಾರ ಸಂಜೆ ಆಯೋಜಿಸಿದ್ದ ಈ ಇಫ್ತಾರ್ ಕೂಟದಲ್ಲಿ ಭಾಗವಹಿಸಿಲ್ಲ’ ಎಂದು ಹಲವು ಆಹ್ವಾನಿತರು ಹೇಳಿದ್ದಾರೆ’ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ತಿಳಿಸಿದೆ.</p>.<p>‘ನೀವು ನೀಡುವ ಭೋಜನ ಸೇವಿಸುತ್ತ ಆಹಾರದ ಕೊರತೆಯಿಂದ ಮತ್ತು ಹಸಿವಿನಿಂದ ಸಾಯುವವರ ಕುರಿತು ಹೇಗೆ ಮಾತನಾಡುವುದು?’ ಎಂದು ಅಮೆರಿಕದಲ್ಲಿ ನೆಲೆಸಿರುವ ಪ್ಯಾಲಿಸ್ಟೀನ್ ವೈದ್ಯ ಡಾ. ಥಾಯರ್ ಅಹ್ಮದ್ ಅವರು ನೀಡಿರುವ ಹೇಳಿಕೆಯನ್ನು ಉಲ್ಲೇಖಿಸಿ ದಿ ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.</p>.<p>ಥಾಯರ್ ಅವರು ಜನವರಿಯಲ್ಲಿ ಪ್ಯಾಲೆಸ್ಟೀನ್ನಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾಷಿಂಗ್ಟನ್</strong>: ಇಫ್ತಾರ್ ಕೂಟಕ್ಕೆ ಶ್ವೇತ ಭವನ ನೀಡಿದ್ದ ಆಹ್ವಾನವನ್ನು ಅಮೆರಿಕದಲ್ಲಿರುವ ಮುಸ್ಲಿಂ ಸಮುದಾಯದ ಸದಸ್ಯರು ತಿರಸ್ಕರಿಸಿರುವುದು ವರದಿಯಾಗಿದೆ.</p>.<p>‘ಗಾಜಾದ ಮೇಲೆ ಇಸ್ರೇಲ್ ನಡೆಸುತ್ತಿರುವ ಯುದ್ಧಕ್ಕೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರು ಬೆಂಬಲ ನೀಡುತ್ತಿರುವುದನ್ನು ಖಂಡಿಸಿ ಮುಸ್ಲಿಂ ಸಮುದಾಯದ ಸದಸ್ಯರು ಈ ನಿರ್ಧಾರ ಕೈಗೊಂಡಿದ್ದಾರೆ’ ಎಂದು ಮಾಧ್ಯಮಗಳು ಬುಧವಾರ ವರದಿ ಮಾಡಿವೆ.</p>.<p>‘ಇಸ್ರೇಲ್ಗೆ ಬೆಂಬಲ ನೀಡುತ್ತಿರುವುದರಿಂದ ಜೋ ಬೈಡನ್ ಅವರ ವಿರುದ್ಧ ಅನೇಕ ಆಹ್ವಾನಿತರು ಬೇಸರಗೊಂಡಿದ್ದಾರೆ. ಪ್ಯಾಲೆಸ್ಟೀನ್ನ ಜನರು ಸಂಕಷ್ಟಕ್ಕೆ ಸಿಲುಕಿರುವ ಸಂದರ್ಭದಲ್ಲಿ ಬೈಡನ್ ಅವರು ಮಂಗಳವಾರ ಸಂಜೆ ಆಯೋಜಿಸಿದ್ದ ಈ ಇಫ್ತಾರ್ ಕೂಟದಲ್ಲಿ ಭಾಗವಹಿಸಿಲ್ಲ’ ಎಂದು ಹಲವು ಆಹ್ವಾನಿತರು ಹೇಳಿದ್ದಾರೆ’ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ತಿಳಿಸಿದೆ.</p>.<p>‘ನೀವು ನೀಡುವ ಭೋಜನ ಸೇವಿಸುತ್ತ ಆಹಾರದ ಕೊರತೆಯಿಂದ ಮತ್ತು ಹಸಿವಿನಿಂದ ಸಾಯುವವರ ಕುರಿತು ಹೇಗೆ ಮಾತನಾಡುವುದು?’ ಎಂದು ಅಮೆರಿಕದಲ್ಲಿ ನೆಲೆಸಿರುವ ಪ್ಯಾಲಿಸ್ಟೀನ್ ವೈದ್ಯ ಡಾ. ಥಾಯರ್ ಅಹ್ಮದ್ ಅವರು ನೀಡಿರುವ ಹೇಳಿಕೆಯನ್ನು ಉಲ್ಲೇಖಿಸಿ ದಿ ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.</p>.<p>ಥಾಯರ್ ಅವರು ಜನವರಿಯಲ್ಲಿ ಪ್ಯಾಲೆಸ್ಟೀನ್ನಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>