<p><strong>ನವದೆಹಲಿ:</strong> ಭೂಕಂಪ ಪೀಡಿತ ಮ್ಯಾನ್ಮಾರ್ಗೆ ಭಾರತವು ಮಾನವೀಯ ದೃಷ್ಟಿಯಿಂದ 31 ಟನ್ ಸಾಮಗ್ರಿಗಳನ್ನು ಭಾನುವಾರ ಹಸ್ತಾಂತರಿಸಿತು.</p>.<p>ಶೋಧ ಮತ್ತು ರಕ್ಷಣೆ (ಎಸ್ಎಆರ್) ಹಾಗೂ ವೈದ್ಯಕೀಯ ನೆರವು ಸೇರಿದಂತೆ ಮ್ಯಾನ್ಮಾರ್ ಮತ್ತು ಥಾಯ್ಲೆಂಡ್ಗೆ ಅಗತ್ಯ ಮಾನವೀಯ ನೆರವು ನೀಡಲು ಭಾರತವು ‘ಆಪರೇಷನ್ ಬ್ರಹ್ಮ’ ಪರಿಹಾರ ಕಾರ್ಯಕ್ರಮ ಹಮ್ಮಿಕೊಂಡಿದೆ. </p>.<p>ಇದರ ಭಾಗವಾಗಿ ಸಿ–17 ಗ್ಲೋಬ್ಮಾಸ್ಟರ್ ವಿಮಾನದಲ್ಲಿ ಭಾನುವಾರ ನೆರವು ಕಳುಹಿಸಿರುವುದಾಗಿ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ. </p>.<p>ಮಾರ್ಚ್ 28ರಂದು ಮ್ಯಾನ್ಮಾರ್ನಲ್ಲಿ ಸಂಭವಿಸಿದ 7.7ರಷ್ಟು ತೀವ್ರತೆಯ ಭೂಕಂಪದಲ್ಲಿ 3000ಕ್ಕೂ ಅಧಿಕ ಜನರು ಸಾವಿಗೀಡಾಗಿದ್ದಾರೆ. ಘಟನೆ ನಡೆದ 24 ಗಂಟೆಯ ಒಳಗೆ ಭಾರತವು ಮೊದಲ ಹಂತದ ನೆರವನ್ನು ನೀಡಿತ್ತು. </p>.<p>ಮ್ಯಾನ್ಮಾರ್ನಲ್ಲಿ ಭಾರತೀಯ ಸೇನೆಯು ಆಸ್ಪತ್ರೆ ಘಟಕಗಳನ್ನು ಸ್ಥಾಪಿಸಿದ್ದು, 118 ಸಿಬ್ಬಂದಿ ಅಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. </p>.<p>442 ಮೆಟ್ರಿಕ್ ಟನ್ ಆಹಾರ ಸಾಮಗ್ರಿಯನ್ನು (ಅಕ್ಕಿ, ಅಡುಗೆ ಎಣ್ಣೆ, ನೂಡಲ್ಸ್ ಹಾಗೂ ಬಿಸ್ಕತ್ತು ಸೇರಿದಂತೆ ಇತರ ವಸ್ತು) ಮ್ಯಾನ್ಮಾರ್ನ ಸ್ಥಳೀಯ ಸರ್ಕಾರಕ್ಕೆ ಹಸ್ತಾಂತರಿಸಲಾಯಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಭೂಕಂಪ ಪೀಡಿತ ಮ್ಯಾನ್ಮಾರ್ಗೆ ಭಾರತವು ಮಾನವೀಯ ದೃಷ್ಟಿಯಿಂದ 31 ಟನ್ ಸಾಮಗ್ರಿಗಳನ್ನು ಭಾನುವಾರ ಹಸ್ತಾಂತರಿಸಿತು.</p>.<p>ಶೋಧ ಮತ್ತು ರಕ್ಷಣೆ (ಎಸ್ಎಆರ್) ಹಾಗೂ ವೈದ್ಯಕೀಯ ನೆರವು ಸೇರಿದಂತೆ ಮ್ಯಾನ್ಮಾರ್ ಮತ್ತು ಥಾಯ್ಲೆಂಡ್ಗೆ ಅಗತ್ಯ ಮಾನವೀಯ ನೆರವು ನೀಡಲು ಭಾರತವು ‘ಆಪರೇಷನ್ ಬ್ರಹ್ಮ’ ಪರಿಹಾರ ಕಾರ್ಯಕ್ರಮ ಹಮ್ಮಿಕೊಂಡಿದೆ. </p>.<p>ಇದರ ಭಾಗವಾಗಿ ಸಿ–17 ಗ್ಲೋಬ್ಮಾಸ್ಟರ್ ವಿಮಾನದಲ್ಲಿ ಭಾನುವಾರ ನೆರವು ಕಳುಹಿಸಿರುವುದಾಗಿ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ. </p>.<p>ಮಾರ್ಚ್ 28ರಂದು ಮ್ಯಾನ್ಮಾರ್ನಲ್ಲಿ ಸಂಭವಿಸಿದ 7.7ರಷ್ಟು ತೀವ್ರತೆಯ ಭೂಕಂಪದಲ್ಲಿ 3000ಕ್ಕೂ ಅಧಿಕ ಜನರು ಸಾವಿಗೀಡಾಗಿದ್ದಾರೆ. ಘಟನೆ ನಡೆದ 24 ಗಂಟೆಯ ಒಳಗೆ ಭಾರತವು ಮೊದಲ ಹಂತದ ನೆರವನ್ನು ನೀಡಿತ್ತು. </p>.<p>ಮ್ಯಾನ್ಮಾರ್ನಲ್ಲಿ ಭಾರತೀಯ ಸೇನೆಯು ಆಸ್ಪತ್ರೆ ಘಟಕಗಳನ್ನು ಸ್ಥಾಪಿಸಿದ್ದು, 118 ಸಿಬ್ಬಂದಿ ಅಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. </p>.<p>442 ಮೆಟ್ರಿಕ್ ಟನ್ ಆಹಾರ ಸಾಮಗ್ರಿಯನ್ನು (ಅಕ್ಕಿ, ಅಡುಗೆ ಎಣ್ಣೆ, ನೂಡಲ್ಸ್ ಹಾಗೂ ಬಿಸ್ಕತ್ತು ಸೇರಿದಂತೆ ಇತರ ವಸ್ತು) ಮ್ಯಾನ್ಮಾರ್ನ ಸ್ಥಳೀಯ ಸರ್ಕಾರಕ್ಕೆ ಹಸ್ತಾಂತರಿಸಲಾಯಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>