<p><strong>ನವದೆಹಲಿ:</strong> ರಾಜಕೀಯ ಅಸ್ಥಿರತೆಯ ನಡುವೆ ಬಾಂಗ್ಲಾದೇಶದ ನೂತನ ಪ್ರಧಾನಿ ತಾರಿಕ್ ರೆಹಮಾನ್ ಅವರಿಗೆ ಭಾರತಕ್ಕೆ ಭೇಟಿ ನೀಡಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಹ್ವಾನ ನೀಡಿದ್ದಾರೆ. </p><p>ತಾರಿಕ್ ರೆಹಮಾನ್ ಅವರಿಗೆ ಕುಟುಂಬ ಸಮೇತ ಭಾರತಕ್ಕೆ ಆಗಮಿಸಲು ಆಹ್ವಾನ ನೀಡಿರುವ ಪ್ರಧಾನಿ ಮೋದಿ, ದ್ವಿಪಕ್ಷೀಯ ಬಾಂಧವ್ಯವನ್ನು ಗಟ್ಟಿಗೊಳಿಸಲು ಬಾಂಗ್ಲಾದೇಶದ ನ್ಯಾಷನಲಿಸ್ಟ್ ಪಾರ್ಟಿಯ (ಬಿಎನ್ಪಿ) ಪಕ್ಷದ ನಾಯಕರೊಂದಿಗೆ ನಿಕಟವಾಗಿ ಕೆಲಸ ಮಾಡಲು ಎದುರು ನೋಡುತ್ತಿರುವುದಾಗಿ ಹೇಳಿದ್ದಾರೆ. </p><p>ತಾರಿಕ್ ರೆಹಮಾನ್ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾರತದ ಪ್ರತಿನಿಧಿಯಾಗಿ ಸ್ಪೀಕರ್ ಓಂ ಬಿರ್ಲಾ ಅವರು ಭಾಗವಹಿಸಿದ್ದರು. ಪ್ರಧಾನಿ ಮೋದಿ ಅವರ ಪತ್ರವನ್ನು ಬಿರ್ಲಾ ಹಸ್ತಾಂತರಿಸಿದರು.</p>.ಬಾಂಗ್ಲಾದ ನೂತನ ಪ್ರಧಾನಿಯಾಗಿ ತಾರಿಕ್ ಪ್ರಮಾಣ; ಭಾರತದಿಂದ ಓಂ ಬಿರ್ಲಾ ಭಾಗಿ.ಭಾರತದ ‘ಸಪ್ತ ಸೋದರಿಯರ’ ವಿಷಯ ಪ್ರಸ್ತಾಪಿಸಿದ ಮೊಹಮ್ಮದ್ ಯೂನುಸ್: ಏನಿದು ವಿವಾದ?. <p>ಎರಡೂ ದೇಶಗಳ ಸಹಭಾಗಿತ್ವ ಗಟ್ಟಿ ಮಾಡಿಕೊಳ್ಳುವ ನಿಲುವನ್ನು ಪುನರುಚ್ಚರಿಸಲಾಯಿತು. ನೆರೆಹೊರೆಯ ರಾಷ್ಟ್ರಗಳಾಗಿ ಅನೋನ್ಯ ಇತಿಹಾಸ, ಸಾಂಸ್ಕೃತಿಕ ಹಾಗೂ ಆಕಾಂಕ್ಷೆಗಳ ಸ್ನೇಹ ಬಾಂಧವ್ಯವನ್ನು ಹೊಂದಿವೆ. ಅಭಿವೃದ್ಧಿಯ ಆದ್ಯತೆಯು ಭವಿಷ್ಯದ ಸಹಕಾರಕ್ಕೆ ಮಾರ್ಗದರ್ಶಕವಾಗಲಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. </p><p>ಇದೇ ಸಂದರ್ಭದಲ್ಲಿ ಬಾಂಗ್ಲಾದೇಶದಲ್ಲಿ ನಡೆದ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ತಾರಿಕ್ ರೆಹಮಾನ್ ಅವರಿಗೆ ಪ್ರಧಾನಿ ಮೋದಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಈ ಗೆಲುವು ಬಾಂಗ್ಲಾದೇಶದ ಜನರು ರೆಹಮಾನ್ ಅವರ ನಾಯಕತ್ವದ ಮೇಲೆ ಇಟ್ಟಿರುವ ನಂಬಿಕೆಗೆ ಸಾಕ್ಷಿಯಾಗಿದೆ. ದೇಶವನ್ನು ಶಾಂತಿ, ಸ್ಥಿರತೆ ಹಾಗೂ ಸಮೃದ್ಧಿಯ ಹಾದಿಯಲ್ಲಿ ಮುನ್ನಡೆಸುವ ಅವರ ದೃಷ್ಟಿಕೋನಕ್ಕೆ ಸಂದ ಜನಾದೇಶ ಇದಾಗಿದೆ ಎಂದು ಹೇಳಿದ್ದಾರೆ. </p><p>ದ್ವಿಪಕ್ಷೀಯ ಬಾಂಧವ್ಯ ಗಟ್ಟಿಗೊಳಿಸಲು ವ್ಯಾಪಾರ, ತಂತ್ರಜ್ಞಾನ, ಶಿಕ್ಷಣ, ಕೌಶಲ್ಯ ಅಭಿವೃದ್ಧಿ, ಇಂಧನ, ಆರೋಗ್ಯ, ರಕ್ಷಣೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಬಾಂಧವ್ಯ ವೃದ್ಧಿಗೆ ನಿಕಟವಾಗಿ ಕೆಲಸ ಮಾಡಲು ಎದುರು ನೋಡುತ್ತಿರುವುದಾಗಿ ಪ್ರಧಾನಿ ಮೋದಿ ತಿಳಿಸಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ರಾಜಕೀಯ ಅಸ್ಥಿರತೆಯ ನಡುವೆ ಬಾಂಗ್ಲಾದೇಶದ ನೂತನ ಪ್ರಧಾನಿ ತಾರಿಕ್ ರೆಹಮಾನ್ ಅವರಿಗೆ ಭಾರತಕ್ಕೆ ಭೇಟಿ ನೀಡಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಹ್ವಾನ ನೀಡಿದ್ದಾರೆ. </p><p>ತಾರಿಕ್ ರೆಹಮಾನ್ ಅವರಿಗೆ ಕುಟುಂಬ ಸಮೇತ ಭಾರತಕ್ಕೆ ಆಗಮಿಸಲು ಆಹ್ವಾನ ನೀಡಿರುವ ಪ್ರಧಾನಿ ಮೋದಿ, ದ್ವಿಪಕ್ಷೀಯ ಬಾಂಧವ್ಯವನ್ನು ಗಟ್ಟಿಗೊಳಿಸಲು ಬಾಂಗ್ಲಾದೇಶದ ನ್ಯಾಷನಲಿಸ್ಟ್ ಪಾರ್ಟಿಯ (ಬಿಎನ್ಪಿ) ಪಕ್ಷದ ನಾಯಕರೊಂದಿಗೆ ನಿಕಟವಾಗಿ ಕೆಲಸ ಮಾಡಲು ಎದುರು ನೋಡುತ್ತಿರುವುದಾಗಿ ಹೇಳಿದ್ದಾರೆ. </p><p>ತಾರಿಕ್ ರೆಹಮಾನ್ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾರತದ ಪ್ರತಿನಿಧಿಯಾಗಿ ಸ್ಪೀಕರ್ ಓಂ ಬಿರ್ಲಾ ಅವರು ಭಾಗವಹಿಸಿದ್ದರು. ಪ್ರಧಾನಿ ಮೋದಿ ಅವರ ಪತ್ರವನ್ನು ಬಿರ್ಲಾ ಹಸ್ತಾಂತರಿಸಿದರು.</p>.ಬಾಂಗ್ಲಾದ ನೂತನ ಪ್ರಧಾನಿಯಾಗಿ ತಾರಿಕ್ ಪ್ರಮಾಣ; ಭಾರತದಿಂದ ಓಂ ಬಿರ್ಲಾ ಭಾಗಿ.ಭಾರತದ ‘ಸಪ್ತ ಸೋದರಿಯರ’ ವಿಷಯ ಪ್ರಸ್ತಾಪಿಸಿದ ಮೊಹಮ್ಮದ್ ಯೂನುಸ್: ಏನಿದು ವಿವಾದ?. <p>ಎರಡೂ ದೇಶಗಳ ಸಹಭಾಗಿತ್ವ ಗಟ್ಟಿ ಮಾಡಿಕೊಳ್ಳುವ ನಿಲುವನ್ನು ಪುನರುಚ್ಚರಿಸಲಾಯಿತು. ನೆರೆಹೊರೆಯ ರಾಷ್ಟ್ರಗಳಾಗಿ ಅನೋನ್ಯ ಇತಿಹಾಸ, ಸಾಂಸ್ಕೃತಿಕ ಹಾಗೂ ಆಕಾಂಕ್ಷೆಗಳ ಸ್ನೇಹ ಬಾಂಧವ್ಯವನ್ನು ಹೊಂದಿವೆ. ಅಭಿವೃದ್ಧಿಯ ಆದ್ಯತೆಯು ಭವಿಷ್ಯದ ಸಹಕಾರಕ್ಕೆ ಮಾರ್ಗದರ್ಶಕವಾಗಲಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. </p><p>ಇದೇ ಸಂದರ್ಭದಲ್ಲಿ ಬಾಂಗ್ಲಾದೇಶದಲ್ಲಿ ನಡೆದ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ತಾರಿಕ್ ರೆಹಮಾನ್ ಅವರಿಗೆ ಪ್ರಧಾನಿ ಮೋದಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಈ ಗೆಲುವು ಬಾಂಗ್ಲಾದೇಶದ ಜನರು ರೆಹಮಾನ್ ಅವರ ನಾಯಕತ್ವದ ಮೇಲೆ ಇಟ್ಟಿರುವ ನಂಬಿಕೆಗೆ ಸಾಕ್ಷಿಯಾಗಿದೆ. ದೇಶವನ್ನು ಶಾಂತಿ, ಸ್ಥಿರತೆ ಹಾಗೂ ಸಮೃದ್ಧಿಯ ಹಾದಿಯಲ್ಲಿ ಮುನ್ನಡೆಸುವ ಅವರ ದೃಷ್ಟಿಕೋನಕ್ಕೆ ಸಂದ ಜನಾದೇಶ ಇದಾಗಿದೆ ಎಂದು ಹೇಳಿದ್ದಾರೆ. </p><p>ದ್ವಿಪಕ್ಷೀಯ ಬಾಂಧವ್ಯ ಗಟ್ಟಿಗೊಳಿಸಲು ವ್ಯಾಪಾರ, ತಂತ್ರಜ್ಞಾನ, ಶಿಕ್ಷಣ, ಕೌಶಲ್ಯ ಅಭಿವೃದ್ಧಿ, ಇಂಧನ, ಆರೋಗ್ಯ, ರಕ್ಷಣೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಬಾಂಧವ್ಯ ವೃದ್ಧಿಗೆ ನಿಕಟವಾಗಿ ಕೆಲಸ ಮಾಡಲು ಎದುರು ನೋಡುತ್ತಿರುವುದಾಗಿ ಪ್ರಧಾನಿ ಮೋದಿ ತಿಳಿಸಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>