<p><strong>ಇಸ್ಲಾಮಾಬಾದ್</strong>: ಭಾರತ ಚಂದ್ರನ ಮೇಲೆ ಇಳಿದರೆ, ಪಾಕಿಸ್ತಾನ ವಿದೇಶಗಳ ಬಳಿ ಹಣಕ್ಕಾಗಿ ಭಿಕ್ಷೆ ಬೇಡುತ್ತಿದೆ ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಪ್ ಹೇಳಿದ್ದಾರೆ.</p><p> ಹಲವಾರು ವರ್ಷಗಳಿಂದ ಪಾಕಿಸ್ತಾನದ ಆರ್ಥಿಕತೆ ಕುಸಿಯುತ್ತಿದೆ. ಹಣದುಬ್ಬರ ಎರಡಂಕಿ ದಾಟಿದ್ದು ಬಡವರ ಮೇಲೆ ಸರ್ಕಾರ ಆರ್ಥಿಕ ಒತ್ತಡ ಹಾಕುತ್ತಿದೆ ಎಂದು 73 ವರ್ಷದ ಹಾಗೂ ಪಾಕಿಸ್ತಾನ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ಪಕ್ಷದ ನಾಯಕ ನವಾಜ್ ಷರೀಫ್ ಆರೋಪಿಸಿದ್ದಾರೆ.</p>.<p>ಭಾರತ ಚಂದ್ರನ ಮೇಲೆ ಇಳಿದಿದೆ, ಜಿ20 ಶೃಂಗಸಭೆಯನ್ನು ಯಶಸ್ವಿಯಾಗಿ ಆಯೋಜಿಸಿದೆ. ಆದರೆ, ಪಾಕಿಸ್ತಾನಕ್ಕೆ ಇಂತಹ ಸಾಧನೆ ಮಾಡಲು ಏಕೆ ಸಾಧ್ಯವಾಗುತ್ತಿಲ್ಲ? ದೇಶದಲ್ಲಿ ಅರಾಜಕತೆ ಮೂಡಲು, ಹಣದುಬ್ಬರ ಹೆಚ್ಚಲು ಯಾರು ಕಾರಣ? ಇದಕ್ಕೆ ಯಾರು ಜವಾಬ್ದಾರರು ಎಂದು ಅವರು ಪ್ರಶ್ನಿಸಿದ್ದಾರೆ.</p><p>ದಿವಂಗತ ವಾಜಪೇಯಿ ಅವರು ಪ್ರಧಾನಿಯಾಗಿದ್ದಾಗ ಭಾರತದ ಬಳಿ ಕೇವಲ ಒಂದು ಶತಕೋಟಿ (₹ 8,300) ಡಾಲರ್ ಇತ್ತು. ಈಗ ಅವರ ಬಳಿ 600 ಶತಕೋಟಿ ಡಾಲರ್ (₹ 49,941,691,800.00) ಹಣ ಇದೆ. ಆದರೆ ಪಾಕಿಸ್ತಾನ ಬೇರೆ ಬೇರೆ ದೇಶಗಳ ಬಳಿ ಸಾಲಕ್ಕಾಗಿ ಭಿಕ್ಷೆ ಬೇಡುವಂತಾಗಿದೆ. ದೇಶವನ್ನು ಇಂತಹ ದುಸ್ಥಿತಿಗೆ ತಳ್ಳಿದವರು ನಿಜವಾಗಿಯೂ ಅಪರಾಧಿಗಳು ಎಂದು ಆಕ್ರೋಶ ವ್ಯಕ್ತಪಡಿಸಿದರು. </p><p>ಪಾಕಿಸ್ತಾನದಲ್ಲಿ ನಡೆದ ಪಕ್ಷದ ಕಾರ್ಯಕ್ರಮದಲ್ಲಿ ನವಾಜ್ ಷರೀಫ್ ಲಂಡನ್ನಿಂದ ವಿಡಿಯೊ ಭಾಷಣ ಮಾಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಸ್ಲಾಮಾಬಾದ್</strong>: ಭಾರತ ಚಂದ್ರನ ಮೇಲೆ ಇಳಿದರೆ, ಪಾಕಿಸ್ತಾನ ವಿದೇಶಗಳ ಬಳಿ ಹಣಕ್ಕಾಗಿ ಭಿಕ್ಷೆ ಬೇಡುತ್ತಿದೆ ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಪ್ ಹೇಳಿದ್ದಾರೆ.</p><p> ಹಲವಾರು ವರ್ಷಗಳಿಂದ ಪಾಕಿಸ್ತಾನದ ಆರ್ಥಿಕತೆ ಕುಸಿಯುತ್ತಿದೆ. ಹಣದುಬ್ಬರ ಎರಡಂಕಿ ದಾಟಿದ್ದು ಬಡವರ ಮೇಲೆ ಸರ್ಕಾರ ಆರ್ಥಿಕ ಒತ್ತಡ ಹಾಕುತ್ತಿದೆ ಎಂದು 73 ವರ್ಷದ ಹಾಗೂ ಪಾಕಿಸ್ತಾನ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ಪಕ್ಷದ ನಾಯಕ ನವಾಜ್ ಷರೀಫ್ ಆರೋಪಿಸಿದ್ದಾರೆ.</p>.<p>ಭಾರತ ಚಂದ್ರನ ಮೇಲೆ ಇಳಿದಿದೆ, ಜಿ20 ಶೃಂಗಸಭೆಯನ್ನು ಯಶಸ್ವಿಯಾಗಿ ಆಯೋಜಿಸಿದೆ. ಆದರೆ, ಪಾಕಿಸ್ತಾನಕ್ಕೆ ಇಂತಹ ಸಾಧನೆ ಮಾಡಲು ಏಕೆ ಸಾಧ್ಯವಾಗುತ್ತಿಲ್ಲ? ದೇಶದಲ್ಲಿ ಅರಾಜಕತೆ ಮೂಡಲು, ಹಣದುಬ್ಬರ ಹೆಚ್ಚಲು ಯಾರು ಕಾರಣ? ಇದಕ್ಕೆ ಯಾರು ಜವಾಬ್ದಾರರು ಎಂದು ಅವರು ಪ್ರಶ್ನಿಸಿದ್ದಾರೆ.</p><p>ದಿವಂಗತ ವಾಜಪೇಯಿ ಅವರು ಪ್ರಧಾನಿಯಾಗಿದ್ದಾಗ ಭಾರತದ ಬಳಿ ಕೇವಲ ಒಂದು ಶತಕೋಟಿ (₹ 8,300) ಡಾಲರ್ ಇತ್ತು. ಈಗ ಅವರ ಬಳಿ 600 ಶತಕೋಟಿ ಡಾಲರ್ (₹ 49,941,691,800.00) ಹಣ ಇದೆ. ಆದರೆ ಪಾಕಿಸ್ತಾನ ಬೇರೆ ಬೇರೆ ದೇಶಗಳ ಬಳಿ ಸಾಲಕ್ಕಾಗಿ ಭಿಕ್ಷೆ ಬೇಡುವಂತಾಗಿದೆ. ದೇಶವನ್ನು ಇಂತಹ ದುಸ್ಥಿತಿಗೆ ತಳ್ಳಿದವರು ನಿಜವಾಗಿಯೂ ಅಪರಾಧಿಗಳು ಎಂದು ಆಕ್ರೋಶ ವ್ಯಕ್ತಪಡಿಸಿದರು. </p><p>ಪಾಕಿಸ್ತಾನದಲ್ಲಿ ನಡೆದ ಪಕ್ಷದ ಕಾರ್ಯಕ್ರಮದಲ್ಲಿ ನವಾಜ್ ಷರೀಫ್ ಲಂಡನ್ನಿಂದ ವಿಡಿಯೊ ಭಾಷಣ ಮಾಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>