<p><strong>ಕಾಠ್ಮಂಡು</strong>: ಯುವ ರಾಜಕಾರಣಿ ಬಾಲೇಂದ್ರ ಶಾ ಅವರು ನಾಲ್ಕು ಬಾರಿ ಪ್ರಧಾನಿಯಾಗಿದ್ದ 74 ವರ್ಷದ ಕೆ.ಪಿ. ಶರ್ಮಾ ಒಲಿ ಅವರನ್ನು ಸುಮಾರು 50 ಸಾವಿರ ಮತಗಳ ಭಾರಿ ಅಂತರದಿಂದ ಸೋಲಿಸಿ ಗೆಲುವಿನ ನಗೆ ಬೀರಿದ್ದಾರೆ.</p>.<p>ಜೊತೆಗೆ, ಶಾ ಅವರ ರಾಷ್ಟ್ರೀಯ ಸ್ವತಂತ್ರ ಪಕ್ಷವು (ಆರ್ಎಸ್ಪಿ) ಭಾರಿ ಗೆಲುವಿನತ್ತ ಮುನ್ನುಗ್ಗುತ್ತಿದೆ. ಮೇಯರ್ ಆಗಿದ್ದವರೊಬ್ಬರು ಪ್ರಧಾನಿ ಹುದ್ದೆಗೆ ಏರುವ ಸನಿಹದಲ್ಲಿ ಇರುವುದು ನೇಪಾಳದ ಇತ್ತೀಚಿನ ರಾಜಕಾರಣ ಇತಿಹಾಸದಲ್ಲಿಯೇ ಅತ್ಯಂತ ಪ್ರಮುಖ ಬದಲಾವಣೆಯಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.</p>.<p>ಚುನಾವಣಾ ಆಯೋಗವು ಫಲಿತಾಂಶದ ವಿವರ ನೀಡಿದ್ದು, ಶನಿವಾರದ ಸಂಜೆವರೆಗೆ ಆರ್ಎಸ್ಪಿ ಪಕ್ಷವು 62 ಕ್ಷೇತ್ರಗಳನ್ನು ಗೆದ್ದುಕೊಂಡಿದೆ. ಇಲ್ಲಿಯವರೆಗೆ ಒಟ್ಟು 78 ಕ್ಷೇತ್ರಗಳ ಫಲಿತಾಂಶ ಪ್ರಕಟಗೊಂಡಿದ್ದು, ಮತ ಎಣಿಕೆ ನಡೆಯುತ್ತಿರುವ ಉಳಿದ ಕ್ಷೇತ್ರಗಳ ಪೈಕಿ 60 ಕ್ಷೇತ್ರಗಳಲ್ಲಿ ಪಕ್ಷ ಮುನ್ನಡೆ ಸಾಧಿಸಿದೆ. </p>.<p>‘ಮತ ಎಣಿಕೆಯು ಸೋಮವಾರ ಪೂರ್ಣಗೊಳ್ಳಬಹುದು. ಮತದಾನ ನಡೆದ ಒಟ್ಟು 165 ಕ್ಷೇತ್ರಗಳಲ್ಲಿ ಆಯಾ ಪಕ್ಷಗಳು ಗೆದ್ದುಕೊಂಡ ಸ್ಥಾನಗಳ ಪ್ರಮಾಣಕ್ಕೆ ಅನುಗುಣವಾಗಿ ಉಳಿದ 110 ಕ್ಷೇತ್ರಗಳನ್ನು ಆಯಾ ಪಕ್ಷಗಳಿಗೆ ಹಂಚಿಕೆ ಮಾಡುವ ಪ್ರಕ್ರಿಯೆಗೆ ಇನ್ನಷ್ಟು ದಿನಗಳು ಹಿಡಿಯಬಹುದು’ ಎಂದು ಆಯೋಗ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾಠ್ಮಂಡು</strong>: ಯುವ ರಾಜಕಾರಣಿ ಬಾಲೇಂದ್ರ ಶಾ ಅವರು ನಾಲ್ಕು ಬಾರಿ ಪ್ರಧಾನಿಯಾಗಿದ್ದ 74 ವರ್ಷದ ಕೆ.ಪಿ. ಶರ್ಮಾ ಒಲಿ ಅವರನ್ನು ಸುಮಾರು 50 ಸಾವಿರ ಮತಗಳ ಭಾರಿ ಅಂತರದಿಂದ ಸೋಲಿಸಿ ಗೆಲುವಿನ ನಗೆ ಬೀರಿದ್ದಾರೆ.</p>.<p>ಜೊತೆಗೆ, ಶಾ ಅವರ ರಾಷ್ಟ್ರೀಯ ಸ್ವತಂತ್ರ ಪಕ್ಷವು (ಆರ್ಎಸ್ಪಿ) ಭಾರಿ ಗೆಲುವಿನತ್ತ ಮುನ್ನುಗ್ಗುತ್ತಿದೆ. ಮೇಯರ್ ಆಗಿದ್ದವರೊಬ್ಬರು ಪ್ರಧಾನಿ ಹುದ್ದೆಗೆ ಏರುವ ಸನಿಹದಲ್ಲಿ ಇರುವುದು ನೇಪಾಳದ ಇತ್ತೀಚಿನ ರಾಜಕಾರಣ ಇತಿಹಾಸದಲ್ಲಿಯೇ ಅತ್ಯಂತ ಪ್ರಮುಖ ಬದಲಾವಣೆಯಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.</p>.<p>ಚುನಾವಣಾ ಆಯೋಗವು ಫಲಿತಾಂಶದ ವಿವರ ನೀಡಿದ್ದು, ಶನಿವಾರದ ಸಂಜೆವರೆಗೆ ಆರ್ಎಸ್ಪಿ ಪಕ್ಷವು 62 ಕ್ಷೇತ್ರಗಳನ್ನು ಗೆದ್ದುಕೊಂಡಿದೆ. ಇಲ್ಲಿಯವರೆಗೆ ಒಟ್ಟು 78 ಕ್ಷೇತ್ರಗಳ ಫಲಿತಾಂಶ ಪ್ರಕಟಗೊಂಡಿದ್ದು, ಮತ ಎಣಿಕೆ ನಡೆಯುತ್ತಿರುವ ಉಳಿದ ಕ್ಷೇತ್ರಗಳ ಪೈಕಿ 60 ಕ್ಷೇತ್ರಗಳಲ್ಲಿ ಪಕ್ಷ ಮುನ್ನಡೆ ಸಾಧಿಸಿದೆ. </p>.<p>‘ಮತ ಎಣಿಕೆಯು ಸೋಮವಾರ ಪೂರ್ಣಗೊಳ್ಳಬಹುದು. ಮತದಾನ ನಡೆದ ಒಟ್ಟು 165 ಕ್ಷೇತ್ರಗಳಲ್ಲಿ ಆಯಾ ಪಕ್ಷಗಳು ಗೆದ್ದುಕೊಂಡ ಸ್ಥಾನಗಳ ಪ್ರಮಾಣಕ್ಕೆ ಅನುಗುಣವಾಗಿ ಉಳಿದ 110 ಕ್ಷೇತ್ರಗಳನ್ನು ಆಯಾ ಪಕ್ಷಗಳಿಗೆ ಹಂಚಿಕೆ ಮಾಡುವ ಪ್ರಕ್ರಿಯೆಗೆ ಇನ್ನಷ್ಟು ದಿನಗಳು ಹಿಡಿಯಬಹುದು’ ಎಂದು ಆಯೋಗ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>