<p><strong>ಕಠ್ಮಂಡು:</strong> ನೇಪಾಳದಲ್ಲಿ ಭಾರಿ ಮಳೆಯಿಂದಾಗಿ ಪ್ರವಾಹ ಮತ್ತು ಭೂಕಂಪನ ಸಂಭವಿಸಿದೆ. ಘಟನೆಯಲ್ಲಿ 42ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.</p><p>ಭಾರಿ ಮಳೆಯಿಂದಾಗಿ ಅಪಾರ ಹಾನಿಯಾಗಿದ್ದು, ಐವರು ಕಾಣೆಯಾಗಿದ್ದಾರೆ. ನೇಪಾಳ ಸೇನೆಯು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. </p><p>ಮಳೆಯ ಪ್ರಮಾಣ ಹೆಚ್ಚಳವಾಗುತ್ತಿರುವುದು ರಕ್ಷಣಾ ಕಾರ್ಯಚರಣೆಗೆ ಅಡಚಣೆ ಉಂಟಾಗುತ್ತಿದೆ ಎಂದು ಹೇಳಿದ್ದಾರೆ. </p><p>ಇನ್ನೂ ಮೂರು ದಿನಗಳ ಕಾಲ ಭಾರಿ ಮಳೆ ಬರುವ ಸಾಧ್ಯತೆಯಿದ್ದು, ನೇಪಾಳದ ಹಲವೆಡೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ರಾಜಧಾನಿ ಕಠ್ಮಂಡುವಿಗೆ ಆಗಮಿಸುವ ಮತ್ತು ತೆರಳುವ ವಾಹನಗಳನ್ನು ನಿರ್ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ಹವಾಮಾನ ವೈಪರಿತ್ಯದ ಕಾರಣ ತ್ರಿಭುವನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೇಶೀಯ ವಿಮಾನಯಾನವನ್ನು ಮುಂದಿನ ಆದೇಶದವರೆಗೆ ನಿಲ್ಲಿಸಲಾಗಿದೆ ಎಂದು ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಠ್ಮಂಡು:</strong> ನೇಪಾಳದಲ್ಲಿ ಭಾರಿ ಮಳೆಯಿಂದಾಗಿ ಪ್ರವಾಹ ಮತ್ತು ಭೂಕಂಪನ ಸಂಭವಿಸಿದೆ. ಘಟನೆಯಲ್ಲಿ 42ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.</p><p>ಭಾರಿ ಮಳೆಯಿಂದಾಗಿ ಅಪಾರ ಹಾನಿಯಾಗಿದ್ದು, ಐವರು ಕಾಣೆಯಾಗಿದ್ದಾರೆ. ನೇಪಾಳ ಸೇನೆಯು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. </p><p>ಮಳೆಯ ಪ್ರಮಾಣ ಹೆಚ್ಚಳವಾಗುತ್ತಿರುವುದು ರಕ್ಷಣಾ ಕಾರ್ಯಚರಣೆಗೆ ಅಡಚಣೆ ಉಂಟಾಗುತ್ತಿದೆ ಎಂದು ಹೇಳಿದ್ದಾರೆ. </p><p>ಇನ್ನೂ ಮೂರು ದಿನಗಳ ಕಾಲ ಭಾರಿ ಮಳೆ ಬರುವ ಸಾಧ್ಯತೆಯಿದ್ದು, ನೇಪಾಳದ ಹಲವೆಡೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ರಾಜಧಾನಿ ಕಠ್ಮಂಡುವಿಗೆ ಆಗಮಿಸುವ ಮತ್ತು ತೆರಳುವ ವಾಹನಗಳನ್ನು ನಿರ್ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ಹವಾಮಾನ ವೈಪರಿತ್ಯದ ಕಾರಣ ತ್ರಿಭುವನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೇಶೀಯ ವಿಮಾನಯಾನವನ್ನು ಮುಂದಿನ ಆದೇಶದವರೆಗೆ ನಿಲ್ಲಿಸಲಾಗಿದೆ ಎಂದು ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>