<p><strong>ಕಠ್ಮಂಡು</strong>: ಹಣ ಅಕ್ರಮ ವರ್ಗಾವಣೆ ಆರೋಪದಡಿ ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನೇಪಾಳದ ಮಾಜಿ ಇಂಧನ ಸಚಿವ ಹಾಗೂ ನೇಪಾಳಿ ಕಾಂಗ್ರೆಸ್ ಪಕ್ಷದ ನಾಯಕ ದೀಪಕ್ ಖಡ್ಕಾ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. </p>.<p>ಹಣ ಅಕ್ರಮ ವರ್ಗಾವಣೆ ತನಿಖಾ ಇಲಾಖೆಯ ಮನವಿ ಬಳಿಕ, ನೇಪಾಳದ ಕೇಂದ್ರೀಯ ತನಿಖಾ ದಳ (ಸಿಬಿಐ) ಪೊಲೀಸರು ಖಡ್ಕಾ ಅವರನ್ನು ಭಾನುವಾರ ಬಂಧಿಸಿದ್ದಾರೆ. ಅವರನ್ನು ವಿಚಾರಣೆಗೊಳಪಡಿಸಲಿದ್ದಾರೆ ಎನ್ನಲಾಗಿದೆ. </p>.<p>ಕಳೆದ ವರ್ಷ ನೇಪಾಳದಲ್ಲಿ ನಡೆದ ಜೆನ್–ಝಿ ಪ್ರತಿಭಟನೆಯ ಸಂದರ್ಭದಲ್ಲಿ ಖಡ್ಕಾ, ಮಾಜಿ ಪ್ರಧಾನಿಗಳಾದ ಶೇರ್ ಬಹದ್ದೂರ್ ದೇವುಬಾ, ಪುಷ್ಪ ಕಮಲ್ ದಹಲ್ ಅವರ ನಿವಾಸಗಳಲ್ಲಿ ಸುಟ್ಟ ನೋಟುಗಳ ವಿಡಿಯೊ ಮತ್ತು ಚಿತ್ರಗಳು ಜಾಲತಾಣಗಳಲ್ಲಿ ಹರಿದಾಡಿದ್ದವು. </p>.<p>ಇಂಧನ, ಜಲಸಂಪನ್ಮೂಲ ಮತ್ತು ನೀರಾವರಿ ಸಚಿವರಾಗಿದ್ದ ವೇಳೆ, ಪರವಾನಗಿ ನೀಡಲು ಹಾಗೂ ಯೋಜನೆಗಳ ಕಾಮಗಾರಿಗಳನ್ನು ಗುತ್ತಿಗೆಗೆ ಕೊಡಲು ಹಣ ಪಡೆದುಕೊಂಡಿರುವ ಆರೋಪ ಖಡ್ಕಾ ಮೇಲಿದೆ. </p>.<p>ಜೆನ್–ಝಿ ಪ್ರತಿಭಟನೆಯನ್ನು ಹತ್ತಿಕ್ಕಿ, 76 ಮಂದಿಯ ಸಾವಿಗೆ ಕಾರಣರಾಗಿದ್ದಾರೆ ಎಂಬ ಆರೋಪದಲ್ಲಿ ಮಾಜಿ ಪ್ರಧಾನಿ ಕೆ.ಪಿ. ಶರ್ಮಾ ಒಲಿ ಮತ್ತು ಅಂದಿನ ಗೃಹ ಸಚಿವ ರಮೇಶ್ ಲೆಖಕ್ ಅವರನ್ನು ಶನಿವಾರ ಬಂಧಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಠ್ಮಂಡು</strong>: ಹಣ ಅಕ್ರಮ ವರ್ಗಾವಣೆ ಆರೋಪದಡಿ ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನೇಪಾಳದ ಮಾಜಿ ಇಂಧನ ಸಚಿವ ಹಾಗೂ ನೇಪಾಳಿ ಕಾಂಗ್ರೆಸ್ ಪಕ್ಷದ ನಾಯಕ ದೀಪಕ್ ಖಡ್ಕಾ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. </p>.<p>ಹಣ ಅಕ್ರಮ ವರ್ಗಾವಣೆ ತನಿಖಾ ಇಲಾಖೆಯ ಮನವಿ ಬಳಿಕ, ನೇಪಾಳದ ಕೇಂದ್ರೀಯ ತನಿಖಾ ದಳ (ಸಿಬಿಐ) ಪೊಲೀಸರು ಖಡ್ಕಾ ಅವರನ್ನು ಭಾನುವಾರ ಬಂಧಿಸಿದ್ದಾರೆ. ಅವರನ್ನು ವಿಚಾರಣೆಗೊಳಪಡಿಸಲಿದ್ದಾರೆ ಎನ್ನಲಾಗಿದೆ. </p>.<p>ಕಳೆದ ವರ್ಷ ನೇಪಾಳದಲ್ಲಿ ನಡೆದ ಜೆನ್–ಝಿ ಪ್ರತಿಭಟನೆಯ ಸಂದರ್ಭದಲ್ಲಿ ಖಡ್ಕಾ, ಮಾಜಿ ಪ್ರಧಾನಿಗಳಾದ ಶೇರ್ ಬಹದ್ದೂರ್ ದೇವುಬಾ, ಪುಷ್ಪ ಕಮಲ್ ದಹಲ್ ಅವರ ನಿವಾಸಗಳಲ್ಲಿ ಸುಟ್ಟ ನೋಟುಗಳ ವಿಡಿಯೊ ಮತ್ತು ಚಿತ್ರಗಳು ಜಾಲತಾಣಗಳಲ್ಲಿ ಹರಿದಾಡಿದ್ದವು. </p>.<p>ಇಂಧನ, ಜಲಸಂಪನ್ಮೂಲ ಮತ್ತು ನೀರಾವರಿ ಸಚಿವರಾಗಿದ್ದ ವೇಳೆ, ಪರವಾನಗಿ ನೀಡಲು ಹಾಗೂ ಯೋಜನೆಗಳ ಕಾಮಗಾರಿಗಳನ್ನು ಗುತ್ತಿಗೆಗೆ ಕೊಡಲು ಹಣ ಪಡೆದುಕೊಂಡಿರುವ ಆರೋಪ ಖಡ್ಕಾ ಮೇಲಿದೆ. </p>.<p>ಜೆನ್–ಝಿ ಪ್ರತಿಭಟನೆಯನ್ನು ಹತ್ತಿಕ್ಕಿ, 76 ಮಂದಿಯ ಸಾವಿಗೆ ಕಾರಣರಾಗಿದ್ದಾರೆ ಎಂಬ ಆರೋಪದಲ್ಲಿ ಮಾಜಿ ಪ್ರಧಾನಿ ಕೆ.ಪಿ. ಶರ್ಮಾ ಒಲಿ ಮತ್ತು ಅಂದಿನ ಗೃಹ ಸಚಿವ ರಮೇಶ್ ಲೆಖಕ್ ಅವರನ್ನು ಶನಿವಾರ ಬಂಧಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>