<p><strong>ಕಠ್ಮಂಡು:</strong>ಭಾರತ ಮತ್ತು ನೇಪಾಳದ ರಾಜತಾಂತ್ರಿಕ ಅಧಿಕಾರಿಗಳ ನಡುವೆ ಸೋಮವಾರ ನಡೆದ ವರ್ಚುವಲ್ ಸಭೆಯಲ್ಲಿಹಿಮಾಲಯ ತಪ್ಪಲಿನಲ್ಲಿಭಾರತದ ನೆರವಿನೊಂದಿಗೆ ಪ್ರಗತಿಯಲ್ಲಿರುವ ವಿವಿಧ ಅಭಿವೃದ್ಧಿ ಯೋಜನೆಗಳ ಕುರಿತು ಚರ್ಚೆ ನಡೆಸಿದರು.</p>.<p>ನೇಪಾಳ – ಭಾರತದ ನಡುವೆ ಉದ್ಭವಿಸಿದ್ದ ಗಡಿ ವಿವಾದ ಮತ್ತು ಹೊಸ ರಾಜಕೀಯ ನಕ್ಷೆ ವಿವಾದದ ನಂತರ ಇದೇ ಮೊದಲ ಬಾರಿಗೆ ಉಭಯ ರಾಷ್ಟ್ರಗಳ ರಾಜತಾಂತ್ರಿಕ ಅಧಿಕಾರಿಗಳು ಸಭೆ ನಡೆಸಿದ್ದಾರೆ.</p>.<p>ನೇಪಾಳದ ವಿದೇಶಾಂಗ ಕಾರ್ಯದರ್ಶಿ ಶಂಕರ್ ದಾಸ್ ಬೈರಗಿ ಮತ್ತು ನೇಪಾಳದ ಭಾರತೀಯ ರಾಯಭಾರಿ ವಿನಯ್ ಮೋಹನ್ ಕ್ವಾತ್ರಾ ಅವರು ತಮ್ಮ ದೇಶದ ಪ್ರತಿನಿಧಿಗಳೊಂದಿಗೆ ಈ ಸಭೆಯಲ್ಲಿ ಭಾಗವಹಿಸಿದ್ದಾರೆ ಎಂದು ನೇಪಾಳ ವಿದೇಶಾಂಗ ಸಚಿವಾಲಯದ ಮೂಲಗಳು ತಿಳಿಸಿವೆ.</p>.<p>ನೇಪಾಳ ಪ್ರಧಾನಿ ಕೆ.ಪಿ.ಶರ್ಮಾ ಒಲಿ ಅವರು ದೂರವಾಣಿ ಮೂಲಕ ಭಾರತದ ಪ್ರಧಾನಿ ನರೇಂದ್ರ ಮೋದಿಯವರಿಗೆ 74ನೇ ಸ್ವಾತಂತ್ರ್ಯೋತ್ಸವದ ಶುಭಾಶಯ ಕೋರಿದ ನಂತರ ಉಭಯ ರಾಷ್ಟ್ರಗಳ ನಡುವಿನ ರಾಜತಾಂತ್ರಿಕರ ನಡುವೆ ಈ ಸಭೆ ನಡೆಯುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಠ್ಮಂಡು:</strong>ಭಾರತ ಮತ್ತು ನೇಪಾಳದ ರಾಜತಾಂತ್ರಿಕ ಅಧಿಕಾರಿಗಳ ನಡುವೆ ಸೋಮವಾರ ನಡೆದ ವರ್ಚುವಲ್ ಸಭೆಯಲ್ಲಿಹಿಮಾಲಯ ತಪ್ಪಲಿನಲ್ಲಿಭಾರತದ ನೆರವಿನೊಂದಿಗೆ ಪ್ರಗತಿಯಲ್ಲಿರುವ ವಿವಿಧ ಅಭಿವೃದ್ಧಿ ಯೋಜನೆಗಳ ಕುರಿತು ಚರ್ಚೆ ನಡೆಸಿದರು.</p>.<p>ನೇಪಾಳ – ಭಾರತದ ನಡುವೆ ಉದ್ಭವಿಸಿದ್ದ ಗಡಿ ವಿವಾದ ಮತ್ತು ಹೊಸ ರಾಜಕೀಯ ನಕ್ಷೆ ವಿವಾದದ ನಂತರ ಇದೇ ಮೊದಲ ಬಾರಿಗೆ ಉಭಯ ರಾಷ್ಟ್ರಗಳ ರಾಜತಾಂತ್ರಿಕ ಅಧಿಕಾರಿಗಳು ಸಭೆ ನಡೆಸಿದ್ದಾರೆ.</p>.<p>ನೇಪಾಳದ ವಿದೇಶಾಂಗ ಕಾರ್ಯದರ್ಶಿ ಶಂಕರ್ ದಾಸ್ ಬೈರಗಿ ಮತ್ತು ನೇಪಾಳದ ಭಾರತೀಯ ರಾಯಭಾರಿ ವಿನಯ್ ಮೋಹನ್ ಕ್ವಾತ್ರಾ ಅವರು ತಮ್ಮ ದೇಶದ ಪ್ರತಿನಿಧಿಗಳೊಂದಿಗೆ ಈ ಸಭೆಯಲ್ಲಿ ಭಾಗವಹಿಸಿದ್ದಾರೆ ಎಂದು ನೇಪಾಳ ವಿದೇಶಾಂಗ ಸಚಿವಾಲಯದ ಮೂಲಗಳು ತಿಳಿಸಿವೆ.</p>.<p>ನೇಪಾಳ ಪ್ರಧಾನಿ ಕೆ.ಪಿ.ಶರ್ಮಾ ಒಲಿ ಅವರು ದೂರವಾಣಿ ಮೂಲಕ ಭಾರತದ ಪ್ರಧಾನಿ ನರೇಂದ್ರ ಮೋದಿಯವರಿಗೆ 74ನೇ ಸ್ವಾತಂತ್ರ್ಯೋತ್ಸವದ ಶುಭಾಶಯ ಕೋರಿದ ನಂತರ ಉಭಯ ರಾಷ್ಟ್ರಗಳ ನಡುವಿನ ರಾಜತಾಂತ್ರಿಕರ ನಡುವೆ ಈ ಸಭೆ ನಡೆಯುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>