<p><strong>ಕಠ್ಮಂಡು</strong>: ಭಾರತದೊಂದಿಗಿನ ಗಡಿ ವಿವಾದದ ನಡುವೆಯ ನೇಪಾಳ, ಹೊಸ ಶಾಲಾ ಪಠ್ಯಕ್ರಮಗಳಲ್ಲಿ ಪರಿಚಯಿಸಿರುವ ಹೊಸ ಪಠ್ಯಪುಸ್ತಕಗಳಲ್ಲಿ, ಭಾರತದ ಮೂರು ಪ್ರಮುಖ ಆಯಕಟ್ಟಿನ ಪ್ರದೇಶಗಳನ್ನು ಗುರುತಿಸಿರುವ ಪರಿಷ್ಕೃತ ರಾಜಕೀಯ ನಕ್ಷೆಯನ್ನೂ ಸೇರಿಸಿದೆ.</p>.<p>ಶಿಕ್ಷಣ ಸಚಿವಾಲಯದ ಅಡಿಯಲ್ಲಿ ರೂಪುಗೊಂಡಿರುವಪಠ್ಯಕ್ರಮ ಅಭಿವೃದ್ಧಿ ಕೇಂದ್ರ ಇತ್ತೀಚೆಗೆ ಪರಿಷ್ಕೃತ ನಕ್ಷೆಯನ್ನೊಳಗೊಂಡ ನೂತನ ಪಠ್ಯ ಪುಸ್ತಕಗಳನ್ನು ಪ್ರಕಟಿಸಿದೆ ಎಂದು ಕೇಂದ್ರದ ಅಧಿಕಾರಿ ಗಣೇಶ್ ಭಟ್ಟಾರೈ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.</p>.<p>ಹೊಸ ಪುಸ್ತಕದ ಹೆಸರು ‘ನೇಪಾಳದ ಟೆರ್ರಿಟರಿ ಅಂಡ್ ರೀಡಿಂಗ್ ಮೆಟೀರಿಯಲ್ಸ್ ಫಾರ್ ಬಾರ್ಡರ್ ಇಶ್ಯೂಸ್‘. 9 ಮತ್ತು 12ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಸಿದ್ಧಪಡಿಸಿರುವ ಈ ಪುಸ್ತಕಕ್ಕೆ ಶಿಕ್ಷಣ ಸಚಿವ ಗಿರಿರಾಜ್ ಮಣಿ ಪೊಖರಿಯಲ್ ಅವರು ಮುನ್ನುಡಿ ಬರೆದಿದ್ದಾರೆ.</p>.<p>ಭಾರತಕ್ಕೆ ಸೇರಿದ ಲಿಪುಲೇಖ್, ಕಾಲಾಪಾಣಿ ಮತ್ತು ಲಿಂಪಿಯಾಡುರಾ ಪ್ರದೇಶಗಳನ್ನೊಳಗೊಂಡು ತಯಾರಿಸಿದ ಪರಿಷ್ಕೃತ ನಕ್ಷೆಗೆ ನೇಪಾಳದ ಸಂಸತ್ತು ಸರ್ವಾನುಮತದಿಂದ ಅಂಗೀಕರಿಸಿತ್ತು. ಆದರೆ ಪರಿಷ್ಕೃತ ನಕ್ಷೆಯನ್ನು ಭಾರತ ತಿರಸ್ಕರಿಸಿತ್ತು.</p>.<p>ನವೆಂಬರ್2019ರಲ್ಲಿ ಭಾರತ ಹೊಸ ನಕ್ಷೆಯನ್ನು ಪ್ರಕಟಿಸಿದ ಆರು ತಿಂಗಳ ನಂತರ, ಉತ್ತರಾಖಂಡದ ಮೂರು ಆಯಕಟ್ಟಿನ ಪ್ರಮುಖ ಕ್ಷೇತ್ರಗಳ ಮೇಲೆ ಹಕ್ಕು ಸಾಧಿಸುವ ದೇಶದ ಪರಿಷ್ಕೃತ ರಾಜಕೀಯ ಮತ್ತು ಆಡಳಿತ ನಕ್ಷೆಯನ್ನು ನೇಪಾಳ ಈ ವರ್ಷದ ಮೇ ತಿಂಗಳಲ್ಲಿ ಬಿಡುಗಡೆ ಮಾಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಠ್ಮಂಡು</strong>: ಭಾರತದೊಂದಿಗಿನ ಗಡಿ ವಿವಾದದ ನಡುವೆಯ ನೇಪಾಳ, ಹೊಸ ಶಾಲಾ ಪಠ್ಯಕ್ರಮಗಳಲ್ಲಿ ಪರಿಚಯಿಸಿರುವ ಹೊಸ ಪಠ್ಯಪುಸ್ತಕಗಳಲ್ಲಿ, ಭಾರತದ ಮೂರು ಪ್ರಮುಖ ಆಯಕಟ್ಟಿನ ಪ್ರದೇಶಗಳನ್ನು ಗುರುತಿಸಿರುವ ಪರಿಷ್ಕೃತ ರಾಜಕೀಯ ನಕ್ಷೆಯನ್ನೂ ಸೇರಿಸಿದೆ.</p>.<p>ಶಿಕ್ಷಣ ಸಚಿವಾಲಯದ ಅಡಿಯಲ್ಲಿ ರೂಪುಗೊಂಡಿರುವಪಠ್ಯಕ್ರಮ ಅಭಿವೃದ್ಧಿ ಕೇಂದ್ರ ಇತ್ತೀಚೆಗೆ ಪರಿಷ್ಕೃತ ನಕ್ಷೆಯನ್ನೊಳಗೊಂಡ ನೂತನ ಪಠ್ಯ ಪುಸ್ತಕಗಳನ್ನು ಪ್ರಕಟಿಸಿದೆ ಎಂದು ಕೇಂದ್ರದ ಅಧಿಕಾರಿ ಗಣೇಶ್ ಭಟ್ಟಾರೈ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.</p>.<p>ಹೊಸ ಪುಸ್ತಕದ ಹೆಸರು ‘ನೇಪಾಳದ ಟೆರ್ರಿಟರಿ ಅಂಡ್ ರೀಡಿಂಗ್ ಮೆಟೀರಿಯಲ್ಸ್ ಫಾರ್ ಬಾರ್ಡರ್ ಇಶ್ಯೂಸ್‘. 9 ಮತ್ತು 12ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಸಿದ್ಧಪಡಿಸಿರುವ ಈ ಪುಸ್ತಕಕ್ಕೆ ಶಿಕ್ಷಣ ಸಚಿವ ಗಿರಿರಾಜ್ ಮಣಿ ಪೊಖರಿಯಲ್ ಅವರು ಮುನ್ನುಡಿ ಬರೆದಿದ್ದಾರೆ.</p>.<p>ಭಾರತಕ್ಕೆ ಸೇರಿದ ಲಿಪುಲೇಖ್, ಕಾಲಾಪಾಣಿ ಮತ್ತು ಲಿಂಪಿಯಾಡುರಾ ಪ್ರದೇಶಗಳನ್ನೊಳಗೊಂಡು ತಯಾರಿಸಿದ ಪರಿಷ್ಕೃತ ನಕ್ಷೆಗೆ ನೇಪಾಳದ ಸಂಸತ್ತು ಸರ್ವಾನುಮತದಿಂದ ಅಂಗೀಕರಿಸಿತ್ತು. ಆದರೆ ಪರಿಷ್ಕೃತ ನಕ್ಷೆಯನ್ನು ಭಾರತ ತಿರಸ್ಕರಿಸಿತ್ತು.</p>.<p>ನವೆಂಬರ್2019ರಲ್ಲಿ ಭಾರತ ಹೊಸ ನಕ್ಷೆಯನ್ನು ಪ್ರಕಟಿಸಿದ ಆರು ತಿಂಗಳ ನಂತರ, ಉತ್ತರಾಖಂಡದ ಮೂರು ಆಯಕಟ್ಟಿನ ಪ್ರಮುಖ ಕ್ಷೇತ್ರಗಳ ಮೇಲೆ ಹಕ್ಕು ಸಾಧಿಸುವ ದೇಶದ ಪರಿಷ್ಕೃತ ರಾಜಕೀಯ ಮತ್ತು ಆಡಳಿತ ನಕ್ಷೆಯನ್ನು ನೇಪಾಳ ಈ ವರ್ಷದ ಮೇ ತಿಂಗಳಲ್ಲಿ ಬಿಡುಗಡೆ ಮಾಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>