<p><strong>ಕಠ್ಮಂಡು:</strong> ನಿರ್ಬಂಧಗಳನ್ನು ಸಡಿಲಗೊಳಿಸಿದ ಬೆನ್ನಲ್ಲೇ ನೇಪಾಳ ರಾಜಧಾನಿ ಕಠ್ಮಂಡುವಿನಲ್ಲಿ ವ್ಯಾಪಾರ ಮತ್ತು ವಾಣಿಜ್ಯ ಚಟುವಟಿಕೆಗಳು ನಿಧಾನವಾಗಿ ಪುನರಾರಂಭಗೊಂಡಿವೆ. ಇದರೊಂದಿಗೆ ಕಣಿವೆ ಪ್ರದೇಶದ ಪೊಲೀಸರು ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ.</p>.<p>ಇಲ್ಲಿನ ಸುಪ್ರೀಂಕೋರ್ಟ್ ಮತ್ತು ಬ್ಯಾಂಕ್ಗಳು ಕಾರ್ಯಾರಂಭಿಸಲು ಸಿದ್ಧವಾಗಿವೆ.</p>.<p>ಸರ್ಕಾರದ ವಿರುದ್ಧದ ಪ್ರತಿಭಟನೆ ವೇಳೆ ಸಂಸತ್ ಕಟ್ಟಡ ಸೇರಿದಂತೆ ಪ್ರಮುಖ ಕಟ್ಟಡಗಳು, ಹತ್ತಾರು ಪೊಲೀಸ್ ಠಾಣೆಗಳು, ಚೆಕ್ಪೋಸ್ಟ್ಗಳ ಮೇಲೆ ಪ್ರತಿಭಟನಕಾರರು ದಾಳಿ ಮಾಡಿ ಹಾನಿಗೊಳಿಸಿದ್ದರು. ಅದರಲ್ಲೂ ಸುಪ್ರೀಂ ಕೋರ್ಟ್ ಮತ್ತು ಕೇಂದ್ರ ಬ್ಯಾಂಕ್ ಕಚೇರಿಗಳು ಪೂರ್ಣಪ್ರಮಾಣದಲ್ಲಿ ಹಾನಿಗೊಳಗಾಗಿದೆ.</p>.<p>‘ನ್ಯಾಯಾಲಯ ಕಲಾಪವನ್ನು ಮತ್ತೆ ಆರಂಭಿಸುವ ನಿರ್ಧಾರವನ್ನು ತುರ್ತು ಸಭೆಯಲ್ಲಿ ಕೈಗೊಳ್ಳಲಾಗಿದೆ’ ಎಂದು ಸುಪ್ರೀಂ ಕೋರ್ಟ್ನ ಮುಖ್ಯನ್ಯಾಯಮೂರ್ತಿ ಪ್ರಕಾಶ್ ಮಾನ್ ಸಿಂಗ್ ಹೇಳಿದ್ದಾರೆ. </p>.<p>‘ನ್ಯಾಯಾಲಯದ ಪ್ರಮುಖ ದಾಖಲೆಗಳಿಗೆ ಶಾಶ್ವತ ಹಾನಿಯಾಗಿದೆ’ ಎಂದು ತಿಳಿಸಿದ್ದಾರೆ.</p>.<p>‘ಪೊಲೀಸ್ ಠಾಣೆ ಮತ್ತು ಚೆಕ್ಪೋಸ್ಟ್ಗಳು ಮತ್ತೆ ಕಾರ್ಯಾಚರಣೆ ಆರಂಭಿಸಿವೆ. ಪೊಲೀಸರು ಮತ್ತು ಸಶಸ್ತ್ರ ಪೊಲೀಸ್ ಪಡೆಯ ಸಿಬ್ಬಂದಿ ಚೆಕ್ಪೋಸ್ಟ್ ಮತ್ತು ರಸ್ತೆಗಳಲ್ಲಿ ಗಸ್ತು ನಡೆಸುತ್ತಿದ್ದಾರೆ’ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.</p>.<p>‘ಎಷ್ಟು ಪ್ರಮಾಣದಲ್ಲಿ ಹಾನಿಯಾಗಿದೆ ಎಂಬ ಬಗ್ಗೆ ನಿಖರ ಮಾಹಿತಿ ಲಭ್ಯವಿಲ್ಲ. ಉಳಿದಿರುವ ಮೂಲಸೌಕರ್ಯಗಳನ್ನು ಬಳಸಿಕೊಂಡು ಪೊಲೀಸರು ಕರ್ತವ್ಯ ನಿರ್ವಹಿಸುತ್ತಿದ್ದಾರೆ’ ಎಂದು ಪೊಲೀಸ್ ಇಲಾಖೆಯ ವಕ್ತಾರ ಎಸ್ಎಸ್ಪಿ ಶೇಖರ್ ಖನಾಲ್ ಅವರು ತಿಳಿಸಿದ್ದಾರೆ.</p>.<p>‘ಹಾನಿಗೊಂಡಿರುವ ಪೊಲೀಸ್ ಠಾಣೆಗಳ ಪುನರ್ನಿರ್ಮಾಣಕ್ಕೆ ಸ್ಥಳೀಯರು ಕೈಜೋಡಿಸುತ್ತಿದ್ದಾರೆ. ಪೊಲೀಸರಿಗೆ ಸಹಾಯ ಮಾಡುವಂತೆ ಸಮುದಾಯಗಳ ನಾಯಕರು ಕರೆಕೊಟ್ಟಿದ್ದಾರೆ’ ಎಂದು ತಿಳಿಸಿದ್ದಾರೆ. </p>.<p>ಪ್ರತಿಭಟನಕಾರರ ದಾಳಿಯಿಂದ ತಪ್ಪಿಸಿಕೊಳ್ಳಲು ಹಲವು ಪೊಲೀಸರು ಸೇನಾ ಬಂಕರ್ಗಳಲ್ಲಿ ಆಶ್ರಯ ಪಡೆದಿದ್ದರು.</p>.<p><strong>ಪ್ರಮಖ ಅಂಶಗಳು:</strong></p><p>* ಹಿಂಸಾಚಾರ ಹಿನ್ನೆಲೆಯಲ್ಲಿ ಪ್ರತಿಬಂಧಕಾಜ್ಞೆ ಜಾರಿ ನಂತರ ದೇಶದಲ್ಲಿ ಸಿಲುಕಿರುವ ವಿದೇಶಿ ನಾಗರಿಕರು ತಮ್ಮ ರಾಷ್ಟ್ರಗಳಿಗೆ ವಾಪಸಾಗಲು ಅನುವಾಗುವಂತೆ ನೇಪಾಳ ಸರ್ಕಾರ ತಾತ್ಕಾಲಿಕ ಕ್ರಮಗಳನ್ನು ಕೈಗೊಂಡಿದೆ. ವೀಸಾ ಮತ್ತಿತರ ನಿಯಮಗಳನ್ನು ಸಡಿಲಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ </p><p>* ‘ಜೆನ್–ಝಿ’ ಪ್ರತಿಭಟನೆಯಿಂದಾಗಿ ನೇಪಾಳದ ಹೋಟೆಲ್ ಉದ್ಯಮಕ್ಕೆ 25 ಶತಕೋಟಿ ರೂಪಾಯಿಯಷ್ಟು ನಷ್ಟ ಉಂಟಾಗಿದೆ ಎಂದು ಹೋಟೆಲ್ ಅಸೋಸಿಯೇಷನ್ ನೇಪಾಳ (ಎಚ್ಎಎನ್) ಹೇಳಿದೆ </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಠ್ಮಂಡು:</strong> ನಿರ್ಬಂಧಗಳನ್ನು ಸಡಿಲಗೊಳಿಸಿದ ಬೆನ್ನಲ್ಲೇ ನೇಪಾಳ ರಾಜಧಾನಿ ಕಠ್ಮಂಡುವಿನಲ್ಲಿ ವ್ಯಾಪಾರ ಮತ್ತು ವಾಣಿಜ್ಯ ಚಟುವಟಿಕೆಗಳು ನಿಧಾನವಾಗಿ ಪುನರಾರಂಭಗೊಂಡಿವೆ. ಇದರೊಂದಿಗೆ ಕಣಿವೆ ಪ್ರದೇಶದ ಪೊಲೀಸರು ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ.</p>.<p>ಇಲ್ಲಿನ ಸುಪ್ರೀಂಕೋರ್ಟ್ ಮತ್ತು ಬ್ಯಾಂಕ್ಗಳು ಕಾರ್ಯಾರಂಭಿಸಲು ಸಿದ್ಧವಾಗಿವೆ.</p>.<p>ಸರ್ಕಾರದ ವಿರುದ್ಧದ ಪ್ರತಿಭಟನೆ ವೇಳೆ ಸಂಸತ್ ಕಟ್ಟಡ ಸೇರಿದಂತೆ ಪ್ರಮುಖ ಕಟ್ಟಡಗಳು, ಹತ್ತಾರು ಪೊಲೀಸ್ ಠಾಣೆಗಳು, ಚೆಕ್ಪೋಸ್ಟ್ಗಳ ಮೇಲೆ ಪ್ರತಿಭಟನಕಾರರು ದಾಳಿ ಮಾಡಿ ಹಾನಿಗೊಳಿಸಿದ್ದರು. ಅದರಲ್ಲೂ ಸುಪ್ರೀಂ ಕೋರ್ಟ್ ಮತ್ತು ಕೇಂದ್ರ ಬ್ಯಾಂಕ್ ಕಚೇರಿಗಳು ಪೂರ್ಣಪ್ರಮಾಣದಲ್ಲಿ ಹಾನಿಗೊಳಗಾಗಿದೆ.</p>.<p>‘ನ್ಯಾಯಾಲಯ ಕಲಾಪವನ್ನು ಮತ್ತೆ ಆರಂಭಿಸುವ ನಿರ್ಧಾರವನ್ನು ತುರ್ತು ಸಭೆಯಲ್ಲಿ ಕೈಗೊಳ್ಳಲಾಗಿದೆ’ ಎಂದು ಸುಪ್ರೀಂ ಕೋರ್ಟ್ನ ಮುಖ್ಯನ್ಯಾಯಮೂರ್ತಿ ಪ್ರಕಾಶ್ ಮಾನ್ ಸಿಂಗ್ ಹೇಳಿದ್ದಾರೆ. </p>.<p>‘ನ್ಯಾಯಾಲಯದ ಪ್ರಮುಖ ದಾಖಲೆಗಳಿಗೆ ಶಾಶ್ವತ ಹಾನಿಯಾಗಿದೆ’ ಎಂದು ತಿಳಿಸಿದ್ದಾರೆ.</p>.<p>‘ಪೊಲೀಸ್ ಠಾಣೆ ಮತ್ತು ಚೆಕ್ಪೋಸ್ಟ್ಗಳು ಮತ್ತೆ ಕಾರ್ಯಾಚರಣೆ ಆರಂಭಿಸಿವೆ. ಪೊಲೀಸರು ಮತ್ತು ಸಶಸ್ತ್ರ ಪೊಲೀಸ್ ಪಡೆಯ ಸಿಬ್ಬಂದಿ ಚೆಕ್ಪೋಸ್ಟ್ ಮತ್ತು ರಸ್ತೆಗಳಲ್ಲಿ ಗಸ್ತು ನಡೆಸುತ್ತಿದ್ದಾರೆ’ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.</p>.<p>‘ಎಷ್ಟು ಪ್ರಮಾಣದಲ್ಲಿ ಹಾನಿಯಾಗಿದೆ ಎಂಬ ಬಗ್ಗೆ ನಿಖರ ಮಾಹಿತಿ ಲಭ್ಯವಿಲ್ಲ. ಉಳಿದಿರುವ ಮೂಲಸೌಕರ್ಯಗಳನ್ನು ಬಳಸಿಕೊಂಡು ಪೊಲೀಸರು ಕರ್ತವ್ಯ ನಿರ್ವಹಿಸುತ್ತಿದ್ದಾರೆ’ ಎಂದು ಪೊಲೀಸ್ ಇಲಾಖೆಯ ವಕ್ತಾರ ಎಸ್ಎಸ್ಪಿ ಶೇಖರ್ ಖನಾಲ್ ಅವರು ತಿಳಿಸಿದ್ದಾರೆ.</p>.<p>‘ಹಾನಿಗೊಂಡಿರುವ ಪೊಲೀಸ್ ಠಾಣೆಗಳ ಪುನರ್ನಿರ್ಮಾಣಕ್ಕೆ ಸ್ಥಳೀಯರು ಕೈಜೋಡಿಸುತ್ತಿದ್ದಾರೆ. ಪೊಲೀಸರಿಗೆ ಸಹಾಯ ಮಾಡುವಂತೆ ಸಮುದಾಯಗಳ ನಾಯಕರು ಕರೆಕೊಟ್ಟಿದ್ದಾರೆ’ ಎಂದು ತಿಳಿಸಿದ್ದಾರೆ. </p>.<p>ಪ್ರತಿಭಟನಕಾರರ ದಾಳಿಯಿಂದ ತಪ್ಪಿಸಿಕೊಳ್ಳಲು ಹಲವು ಪೊಲೀಸರು ಸೇನಾ ಬಂಕರ್ಗಳಲ್ಲಿ ಆಶ್ರಯ ಪಡೆದಿದ್ದರು.</p>.<p><strong>ಪ್ರಮಖ ಅಂಶಗಳು:</strong></p><p>* ಹಿಂಸಾಚಾರ ಹಿನ್ನೆಲೆಯಲ್ಲಿ ಪ್ರತಿಬಂಧಕಾಜ್ಞೆ ಜಾರಿ ನಂತರ ದೇಶದಲ್ಲಿ ಸಿಲುಕಿರುವ ವಿದೇಶಿ ನಾಗರಿಕರು ತಮ್ಮ ರಾಷ್ಟ್ರಗಳಿಗೆ ವಾಪಸಾಗಲು ಅನುವಾಗುವಂತೆ ನೇಪಾಳ ಸರ್ಕಾರ ತಾತ್ಕಾಲಿಕ ಕ್ರಮಗಳನ್ನು ಕೈಗೊಂಡಿದೆ. ವೀಸಾ ಮತ್ತಿತರ ನಿಯಮಗಳನ್ನು ಸಡಿಲಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ </p><p>* ‘ಜೆನ್–ಝಿ’ ಪ್ರತಿಭಟನೆಯಿಂದಾಗಿ ನೇಪಾಳದ ಹೋಟೆಲ್ ಉದ್ಯಮಕ್ಕೆ 25 ಶತಕೋಟಿ ರೂಪಾಯಿಯಷ್ಟು ನಷ್ಟ ಉಂಟಾಗಿದೆ ಎಂದು ಹೋಟೆಲ್ ಅಸೋಸಿಯೇಷನ್ ನೇಪಾಳ (ಎಚ್ಎಎನ್) ಹೇಳಿದೆ </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>